AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿರ್ಲಿಂಗ ತಾಣ ಶ್ರೀಶೈಲದ ಪ್ರಸಾದದಲ್ಲಿ ಕಂಡಿದ್ದು ಮೂಳೆ ಪೀಸ್​​ ಅಲ್ಲ.. ದೇವಸ್ಥಾನದ ಅಧಿಕಾರಿ ಹೇಳಿದ್ದೇನು?

ಶ್ರೀಶೈಲ ದೇವಸ್ಥಾನದ ಇ.ಒ. ಪೆದ್ದಿರಾಜು, ದಾಲ್ಚಿನ್ನಿ ತುಂಡುಗಳನ್ನು ನೋಡಿದ ಭಕ್ತ ಅಸ್ಥಿ ಎಂದು ತಪ್ಪಾಗಿ ಭಾವಿಸಿದ್ದಾನೆ, ಆದರೆ ದೇವಾಲಯದ ಸಮಿತಿಯ ತನಿಖೆಯಲ್ಲಿ ಅವರ ಮಾತು ಸುಳ್ಳು ಎಂದು ತಿಳಿದುಬಂದಿದೆ. ಶ್ರೀಶೈಲ ದೇಗುಲದಲ್ಲಿ ಪ್ರಸಾದ ತಯಾರಿಕೆಯಲ್ಲಿ ಯಾವಾಗಲೂ ಪ್ರಮಾಣಿತ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ಇಂತಹ ಅಪವಿತ್ರ ಕೃತ್ಯಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜ್ಯೋತಿರ್ಲಿಂಗ ತಾಣ ಶ್ರೀಶೈಲದ ಪ್ರಸಾದದಲ್ಲಿ ಕಂಡಿದ್ದು ಮೂಳೆ ಪೀಸ್​​ ಅಲ್ಲ.. ದೇವಸ್ಥಾನದ ಅಧಿಕಾರಿ ಹೇಳಿದ್ದೇನು?
ಜ್ಯೋತಿರ್ಲಿಂಗ ತಾಣ ಶ್ರೀಶೈಲದ ಪ್ರಸಾದದಲ್ಲಿ ಕಂಡಿದ್ದು ಮೂಳೆ ಪೀಸ್​​ ಅಲ್ಲ
ಸಾಧು ಶ್ರೀನಾಥ್​
|

Updated on: Feb 12, 2024 | 2:57 PM

Share

ದೇವಸ್ಥಾನದ ಪ್ರಸಾದದಲ್ಲಿ ಅಸ್ಥಿ ಇದೆ ಎಂದು ಹೈದರಾಬಾದ್ ಮೂಲದ ಭಕ್ತರೊಬ್ಬರು ಮಾಡಿದ್ದ ಆರೋಪವನ್ನು ಶ್ರೀಶೈಲಂ ದೇವಸ್ಥಾನದ ಆಡಳಿತ ಮಂಡಳಿ ರಚಿಸಿದ್ದ ತ್ರಿಸದಸ್ಯ ಸಮಿತಿಯು ತಳ್ಳಿಹಾಕಿದೆ. ಶುಕ್ರವಾರ ಶ್ರೀಶೈಲ ದೇವಸ್ಥಾನಕ್ಕೆ ಬಂದಿದ್ದ ಹೈದರಾಬಾದ್‌ನ ಭಕ್ತರೊಬ್ಬರು ದೇವಸ್ಥಾನದಲ್ಲಿ ಮಾರಾಟ ಮಾಡಿದ ಪುಳಿಯೋಗರೆ ಪ್ರಸಾದದಲ್ಲಿ ಎರಡು ಮೂಳೆ ಪೀಸ್​​ಗಳು ಪತ್ತೆಯಾಗಿದೆ ಎಂದು ಆರೋಪಿಸಿದ್ದರು. ದೇವಸ್ಥಾನದಲ್ಲಿ ಸ್ವೀಕರಿಸಿದ್ದ ಪುಳಿಯೋಗರೆ ಪ್ರಸಾದದಲ್ಲಿ ಮೂಳೆ ಪತ್ತೆಯಾಗಿರುವ ಬಗ್ಗೆ ಭಕ್ತರೊಬ್ಬರು ಔಪಚಾರಿಕವಾಗಿ ದೂರು ನೀಡಿದ್ದರು. ದೂರುದಾರ ತಾನು ಕಂಡ ದಾಖಲೆಗಳನ್ನು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಹಾಜರುಪಡಿಸಿದರು. ಶ್ರೀಶೈಲ ದೇವಸ್ಥಾನದ ಆಡಳಿತಾಧಿಕಾರಿಗಳು ಕೂಡಲೇ ಅದಕ್ಕೆ ಸ್ಪಂದಿಸಿ ತನಿಖೆಗೆ ಆದೇಶಿಸಿದ್ದರು. ಪುಳಿಯೋಗರೆಯಲ್ಲಿ ಬಳಸುವ ದಾಲ್ಚಿನ್ನಿ ಕಡ್ಡಿಗಳನ್ನು ಭಕ್ತ ನೋಡಿ ಮೂಳೆ ಎಂದು ಭಾವಿಸಿರುವುದು ದೇವಸ್ಥಾನ ಸಮಿತಿಯ ತನಿಖೆಯಿಂದ ತಿಳಿದುಬಂದಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ವಿವರಿಸಿದೆ. ಸಂಪೂರ್ಣ ವಿವರಗಳ ನೋಡುವುದಾದರೆ

ಆಂಧ್ರ ಪ್ರದೇಶದ ಶ್ರೀಶೈಲಂ ದೇವಸ್ಥಾನದಲ್ಲಿ ಭಾನುವಾರ ಆತಂಕಕಾರಿ ಘಟನೆ ನಡೆದಿದೆ. ಹೈದರಾಬಾದ್‌ನ ಹರೀಶ್ ರೆಡ್ಡಿ ಎಂಬ ಭಕ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ತಾವು ಪಡೆದಿದ್ದ ಪುಳಿಯೋಗರೆ ಪ್ರಸಾದದಲ್ಲಿ ಎರಡು ಎಲುಬಿನ ತುಂಡುಗಳು ಕಂಡು ಆತಂಕಗೊಂಡಿದ್ದಾರೆ. ಭಗವಾನ್ ಶಿವನ ವಾಸಸ್ಥಾನವೆಂದು ಪರಿಗಣಿಸಲಾದ ಶ್ರೀಶೈಲಂ ದೇವಾಲಯವು ದಕ್ಷಿಣ ಭಾರತದ ಅತ್ಯಂತ ಹಳೆಯ, ಪವಿತ್ರ ಮತ್ತು ಪ್ರಮುಖ ಜ್ಯೋತಿರ್ಲಿಂಗ ತಾಣವಾಗಿದೆ. ಇಂತಹ ಕ್ಷೇತ್ರದಲ್ಲಿ ಇಂತಹ ಆರೋಪ ಬಂದಾಗ ಭಕ್ತರಲ್ಲಿ, ಜನರಲ್ಲಿ ಭಾರೀ ಕೋಲಾಹಲ ಶುರುವಾಗಿದೆ. ಈ ಘಟನೆಯು ದೇವಾಲಯದ ಅಡುಗೆ ಸೌಕರ್ಯ ಸ್ಥಳದ ಸ್ವಚ್ಛತೆ ಮತ್ತು ನಿರ್ವಹಣೆಯ ಬಗ್ಗೆ ಗಂಭೀರ ಕಳವಳ ಉಂಟುಮಾಡಿದೆ. ಈ ಬಗ್ಗೆ ಶ್ರೀಶೈಲ ದೇವಸ್ಥಾನದ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ.

Also Read: ಅಪಘಾತದಲ್ಲಿ ಯುವಕ ದಾರುಣ ಸಾವು -ಅಪಘಾತ ಮಾಡಿದ ವ್ಯಕ್ತಿಯೂ ಮನನೊಂದು ಸೂಸೈಡ್: ಮಡಿಕೇರಿಯಲ್ಲಿ ಕರುಣಾಜನಕ‌ ಕಥೆ

ಶ್ರೀಶೈಲ ದೇವಸ್ಥಾನದ ಇ.ಒ. ಪೆದ್ದಿರಾಜು, ದಾಲ್ಚಿನ್ನಿ ತುಂಡುಗಳನ್ನು ನೋಡಿದ ಭಕ್ತ ಅಸ್ಥಿ ಎಂದು ತಪ್ಪಾಗಿ ಭಾವಿಸಿದ್ದಾನೆ, ಆದರೆ ದೇವಾಲಯದ ಸಮಿತಿಯ ತನಿಖೆಯಲ್ಲಿ ಅವರ ಮಾತು ಸುಳ್ಳು ಎಂದು ತಿಳಿದುಬಂದಿದೆ. ಶ್ರೀಶೈಲ ದೇಗುಲದಲ್ಲಿ ಪ್ರಸಾದ ತಯಾರಿಕೆಯಲ್ಲಿ ಯಾವಾಗಲೂ ಪ್ರಮಾಣಿತ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ಇಂತಹ ಅಪವಿತ್ರ ಕೃತ್ಯಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಲ್ಲಿಕಾರ್ಜುನ ಸ್ವಾಮಿ, ಭ್ರಮರಾಂಬಿಕಾ ದೇವಿಯ ಪುಣ್ಯ ಕ್ಷೇತ್ರ… ಈ ಐತಿಹಾಸಿಕ ಶ್ರೀಶೈಲದ ಪಾವಿತ್ರ್ಯತೆ ಕಾಪಾಡಲು ಸದಾ ಶ್ರಮಿಸುತ್ತಿದ್ದೇವೆ ಎಂದಿದ್ದಾರೆ.

ಶ್ರೀಶೈಲ ದೇವಸ್ಥಾನದಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಪ್ರಸಾದವನ್ನು ತಯಾರಿಸಲಾಗುತ್ತದೆ ಎಂದು ಶ್ರೀಭರಮಾಂಬಾದೇವಿ ಅಮ್ಮನವರ ದೇವಸ್ಥಾನದ ಪ್ರಧಾನ ಅರ್ಚಕ ಮಾರ್ಕಂಡೇಯ ಶಾಸ್ತ್ರಿ ಮತ್ತು ವೇದ ವಿದ್ವಾಂಸರಾದ ಗಂಟಿ ರಾಧಾಕೃಷ್ಣ ವಿವರಿಸಿದರು. ಶ್ರೀಶೈಲ ಮಹಾಕ್ಷೇತ್ರದಲ್ಲಿ ಭಕ್ತರಿಗೆ ವಿತರಿಸುವ ಪುಳಿಹೊರ ಪ್ರಸಾದದಲ್ಲಿ ಅಸ್ಥಿ ಪತ್ತೆಯಾಗಿಲ್ಲ ಎಂದು ತೀರ್ಮಾನಿಸಲಾಗಿದೆ. ನಿತ್ಯ ನೈವೇದ್ಯ ತಯಾರಿಯೂ ಪ್ರಧಾನ ಅರ್ಚಕರ ನೇತೃತ್ವದಲ್ಲಿ ನಡೆಯುತ್ತದೆ.

Follow Us
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?