AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿ ಡ್ರೋನ್ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ

ಜುಲೈ 24 ರಂದು ಅಖ್ನೂರ್ ಸೆಕ್ಟರ್‌ನ ಕನಾಚಕ್ ಪ್ರದೇಶದಲ್ಲಿ ಐದು ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿಕೊಂಡಿದ್ದಾರೆ. ಕನಚಕ್ ಜಮ್ಮು ಜಿಲ್ಲೆಯ ಗಡಿ ಪ್ರದೇಶವಾಗಿದೆ.

ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿ ಡ್ರೋನ್ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ
ಡ್ರೋನ್ (ಸಾಂಕೇತಿಕ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 23, 2021 | 12:10 PM

Share

ಶ್ರೀನಗರ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೋಮವಾರ ಮುಂಜಾನೆ ಜಮ್ಮು ಜಿಲ್ಲೆಯ ಅರ್ನಿಯಾ ಸೆಕ್ಟರ್‌ನಲ್ಲಿರುವ ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಮೇಲೆ ಗುಂಡು ಹಾರಿಸಿದೆ. ಇಂದು ಬೆಳಿಗ್ಗೆ ಸುಮಾರು 05: 30 ಗಂಟೆಗೆ ಅಂತರಾಷ್ಟ್ರೀಯ ಗಡಿ ಬಳಿ ಅರ್ನಿಯಾ ಸೆಕ್ಟರ್‌ನಲ್ಲಿರುವ ನಮ್ಮ ಫಾರ್ವರ್ಡ್ ಪಡೆ ಆಕಾಶದಲ್ಲಿ ಮಿನುಗುವ ಕೆಂಪು ಮತ್ತು ಹಳದಿ ಬೆಳಕನ್ನು ಗಮನಿಸಿತು. ಹಾರುವ ವಸ್ತುವಿನ ಮೇಲೆ ನಮ್ಮ ಪಡೆಗಳು ತಕ್ಷಣವೇ 25 ಎಲ್‌ಎಮ್‌ಜಿ ಸುತ್ತುಗಳನ್ನು ಹಾರಿಸಿದವು, ಇದರಿಂದಾಗಿ ಅದು ಸ್ವಲ್ಪ ಎತ್ತರವನ್ನು ಪಡೆದುಕೊಂಡು ಪಾಕಿಸ್ತಾನದ ಕಡೆಗೆ ಹೋಯಿತು. ಈ ಪ್ರದೇಶವನ್ನು ಪೊಲೀಸರ ಸಹಾಯದಿಂದ ಹುಡುಕಲಾಗುತ್ತಿದೆ ಎಂದು ಬಿಎಸ್‌ಎಫ್ ವಕ್ತಾರರು ಹೇಳಿದ್ದಾರೆ.

ಬಿಎಸ್‌ಎಫ್ ಡಿಐಜಿ ಎಸ್‌ಪಿಎಸ್ ಸಂಧು, ಈ ಪ್ರದೇಶವನ್ನು ಭದ್ರತಾ ಪಡೆಗಳು ಸ್ಕ್ಯಾನ್ ಮಾಡುತ್ತಿದೆ ಆದರೆ ಇಲ್ಲಿಯವರೆಗೆ ಏನೂ ಪತ್ತೆಯಾಗಿಲ್ಲ” ಎಂದು ಹೇಳಿದರು.

ಜುಲೈ 24 ರಂದು ಅಖ್ನೂರ್ ಸೆಕ್ಟರ್‌ನ ಕನಾಚಕ್ ಪ್ರದೇಶದಲ್ಲಿ ಐದು ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿಕೊಂಡಿದ್ದಾರೆ. ಕನಚಕ್ ಜಮ್ಮು ಜಿಲ್ಲೆಯ ಗಡಿ ಪ್ರದೇಶವಾಗಿದೆ.

ಜೂನ್ 27 ರಿಂದ ಈ ಪ್ರದೇಶದಲ್ಲಿ ಡ್ರೋನ್‌ಗಳನ್ನು ಪದೇ ಪದೇ ಗುರುತಿಸಲಾಗಿದ್ದು, ಜಮ್ಮುವಿನ ಭಾರತೀಯ ವಾಯುಪಡೆಯ ನೆಲೆಯನ್ನು ಸ್ಫೋಟಕಗಳೊಂದಿಗೆ ಗುರಿಯಾಗಿಸಲು ಬಳಸಲಾಗಿದ್ದು, ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ದಾಳಿ ನಡೆಸಲು ಶಂಕಿತ ಪಾಕಿಸ್ತಾನ ಮೂಲದ ಭಯೋತ್ಪಾದಕರು ಮಾನವ ರಹಿತ ವೈಮಾನಿಕ ವಾಹನಗಳನ್ನು ನಿಯೋಜಿಸಿದ ಮೊದಲ ದಾಳಿಯಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣದ ತನಿಖೆ ನಡೆಸುತ್ತಿದೆ. ಡ್ರೋನ್ ಗಳು ಗಡಿಯುದ್ದಕ್ಕೂ ಬರುತ್ತವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. 2019 ರಿಂದ ಪಾಕಿಸ್ತಾನದ ಗಡಿಯಲ್ಲಿ 350 ಕ್ಕೂ ಹೆಚ್ಚು ಡ್ರೋನ್‌ಗಳು ಕಾಣಲು ಸಿಕ್ಕಿವೆ.

ಇದನ್ನೂ ಓದಿ: ಅಕ್ಟೋಬರ್ ತಿಂಗಳಲ್ಲಿ ಕೊವಿಡ್ 3ನೇ ಅಲೆ ಉತ್ತುಂಗಕ್ಕೇರುವ ಸಾಧ್ಯತೆ; ಮಕ್ಕಳಿಗೆ ಅಪಾಯವಿದೆ ಎಂದು ಎಚ್ಚರಿಸಿದ ಗೃಹ ಸಚಿವಾಲಯದ ವರದಿ

(Border Security Force fired at a flying object along the Indo-Pak international border)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ