AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿ ಡ್ರೋನ್ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ

ಜುಲೈ 24 ರಂದು ಅಖ್ನೂರ್ ಸೆಕ್ಟರ್‌ನ ಕನಾಚಕ್ ಪ್ರದೇಶದಲ್ಲಿ ಐದು ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿಕೊಂಡಿದ್ದಾರೆ. ಕನಚಕ್ ಜಮ್ಮು ಜಿಲ್ಲೆಯ ಗಡಿ ಪ್ರದೇಶವಾಗಿದೆ.

ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿ ಡ್ರೋನ್ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ
ಡ್ರೋನ್ (ಸಾಂಕೇತಿಕ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 23, 2021 | 12:10 PM

Share

ಶ್ರೀನಗರ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೋಮವಾರ ಮುಂಜಾನೆ ಜಮ್ಮು ಜಿಲ್ಲೆಯ ಅರ್ನಿಯಾ ಸೆಕ್ಟರ್‌ನಲ್ಲಿರುವ ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಮೇಲೆ ಗುಂಡು ಹಾರಿಸಿದೆ. ಇಂದು ಬೆಳಿಗ್ಗೆ ಸುಮಾರು 05: 30 ಗಂಟೆಗೆ ಅಂತರಾಷ್ಟ್ರೀಯ ಗಡಿ ಬಳಿ ಅರ್ನಿಯಾ ಸೆಕ್ಟರ್‌ನಲ್ಲಿರುವ ನಮ್ಮ ಫಾರ್ವರ್ಡ್ ಪಡೆ ಆಕಾಶದಲ್ಲಿ ಮಿನುಗುವ ಕೆಂಪು ಮತ್ತು ಹಳದಿ ಬೆಳಕನ್ನು ಗಮನಿಸಿತು. ಹಾರುವ ವಸ್ತುವಿನ ಮೇಲೆ ನಮ್ಮ ಪಡೆಗಳು ತಕ್ಷಣವೇ 25 ಎಲ್‌ಎಮ್‌ಜಿ ಸುತ್ತುಗಳನ್ನು ಹಾರಿಸಿದವು, ಇದರಿಂದಾಗಿ ಅದು ಸ್ವಲ್ಪ ಎತ್ತರವನ್ನು ಪಡೆದುಕೊಂಡು ಪಾಕಿಸ್ತಾನದ ಕಡೆಗೆ ಹೋಯಿತು. ಈ ಪ್ರದೇಶವನ್ನು ಪೊಲೀಸರ ಸಹಾಯದಿಂದ ಹುಡುಕಲಾಗುತ್ತಿದೆ ಎಂದು ಬಿಎಸ್‌ಎಫ್ ವಕ್ತಾರರು ಹೇಳಿದ್ದಾರೆ.

ಬಿಎಸ್‌ಎಫ್ ಡಿಐಜಿ ಎಸ್‌ಪಿಎಸ್ ಸಂಧು, ಈ ಪ್ರದೇಶವನ್ನು ಭದ್ರತಾ ಪಡೆಗಳು ಸ್ಕ್ಯಾನ್ ಮಾಡುತ್ತಿದೆ ಆದರೆ ಇಲ್ಲಿಯವರೆಗೆ ಏನೂ ಪತ್ತೆಯಾಗಿಲ್ಲ” ಎಂದು ಹೇಳಿದರು.

ಜುಲೈ 24 ರಂದು ಅಖ್ನೂರ್ ಸೆಕ್ಟರ್‌ನ ಕನಾಚಕ್ ಪ್ರದೇಶದಲ್ಲಿ ಐದು ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿಕೊಂಡಿದ್ದಾರೆ. ಕನಚಕ್ ಜಮ್ಮು ಜಿಲ್ಲೆಯ ಗಡಿ ಪ್ರದೇಶವಾಗಿದೆ.

ಜೂನ್ 27 ರಿಂದ ಈ ಪ್ರದೇಶದಲ್ಲಿ ಡ್ರೋನ್‌ಗಳನ್ನು ಪದೇ ಪದೇ ಗುರುತಿಸಲಾಗಿದ್ದು, ಜಮ್ಮುವಿನ ಭಾರತೀಯ ವಾಯುಪಡೆಯ ನೆಲೆಯನ್ನು ಸ್ಫೋಟಕಗಳೊಂದಿಗೆ ಗುರಿಯಾಗಿಸಲು ಬಳಸಲಾಗಿದ್ದು, ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ದಾಳಿ ನಡೆಸಲು ಶಂಕಿತ ಪಾಕಿಸ್ತಾನ ಮೂಲದ ಭಯೋತ್ಪಾದಕರು ಮಾನವ ರಹಿತ ವೈಮಾನಿಕ ವಾಹನಗಳನ್ನು ನಿಯೋಜಿಸಿದ ಮೊದಲ ದಾಳಿಯಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣದ ತನಿಖೆ ನಡೆಸುತ್ತಿದೆ. ಡ್ರೋನ್ ಗಳು ಗಡಿಯುದ್ದಕ್ಕೂ ಬರುತ್ತವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. 2019 ರಿಂದ ಪಾಕಿಸ್ತಾನದ ಗಡಿಯಲ್ಲಿ 350 ಕ್ಕೂ ಹೆಚ್ಚು ಡ್ರೋನ್‌ಗಳು ಕಾಣಲು ಸಿಕ್ಕಿವೆ.

ಇದನ್ನೂ ಓದಿ: ಅಕ್ಟೋಬರ್ ತಿಂಗಳಲ್ಲಿ ಕೊವಿಡ್ 3ನೇ ಅಲೆ ಉತ್ತುಂಗಕ್ಕೇರುವ ಸಾಧ್ಯತೆ; ಮಕ್ಕಳಿಗೆ ಅಪಾಯವಿದೆ ಎಂದು ಎಚ್ಚರಿಸಿದ ಗೃಹ ಸಚಿವಾಲಯದ ವರದಿ

(Border Security Force fired at a flying object along the Indo-Pak international border)

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?