AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ; ಮಥುರಾದಲ್ಲಿ ಹೇಮಮಾಲಿನಿ ಬದಲು ಅವರಿಗೆ ಟಿಕೆಟ್ ಸಾಧ್ಯತೆ

Professional boxer Vijender Singh joins BJP: ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಏಪ್ರಿಲ್ 3, ಬುಧವಾರದಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಮಥುರಾ ಕ್ಷೇತ್ರಕ್ಕೆ ಹಾಲಿ ಸಂಸದೆ ಹೇಮಮಾಲಿನಿ ಬದಲು ವಿಜೇಂದರ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ. 2019ರಲ್ಲಿ ಕಾಂಗ್ರೆಸ್ ಸೇರಿದ್ದ ವಿಜೇಂದರ್ ದಕ್ಷಿಣ ದೆಹಲಿಯಲ್ಲಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಎದುರು ಸೋತಿದ್ದರು. ಈಗ ಬಿಜೆಪಿಗೆ ಬಂದಿರುವ ವಿಜೇಂದರ್​ಗೆ ಮಥುರಾ ಟಿಕೆಟ್ ಸಿಗುವ ನಿರೀಕ್ಷೆ ಇದೆ.

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ; ಮಥುರಾದಲ್ಲಿ ಹೇಮಮಾಲಿನಿ ಬದಲು ಅವರಿಗೆ ಟಿಕೆಟ್ ಸಾಧ್ಯತೆ
ವಿಜೇಂದರ್ ಸಿಂಗ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 03, 2024 | 4:32 PM

ನವದೆಹಲಿ, ಏಪ್ರಿಲ್ 3: ಭಾರತದ ಮೊದಲ ವೃತ್ತಿಪರ ಬಾಕ್ಸರ್ ಆಗಿರುವ ವಿಜೇಂದರ್ ಸಿಂಗ್ (Vijender Singh) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಚುನಾವಣೆಯ ಹೊಸ್ತಿಲಲ್ಲೇ ಈ ಬೆಳವಣಿಗೆ ಆಗಿದ್ದು, ವಿಜೇಂದರ್ ಅವರು ಮಥುರಾ ಕ್ಷೇತ್ರದಲ್ಲಿ (Lok Sabha elections) ಬಿಜೆಪಿ ಅಭ್ಯರ್ಥಿ ಆಗಬಹುದು ಎನ್ನಲಾಗುತ್ತಿದೆ. 2019ರಲ್ಲಿ ವಿಜೇಂದರ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿ ದಕ್ಷಿಣ ದೆಹಲಿಯಲ್ಲಿ ಸ್ಪರ್ಧಿಸಿದ್ದರು. ಆಗ ಬಿಜೆಪಿಯ ರಮೇಶ್ ಬಿಧೂರಿ ಅವರ ಕೈಯಲ್ಲಿ ಪರಾಜಯಗೊಂಡಿದ್ದರು. ಈ ಬಾರಿ ಬಿಜೆಪಿಗೆ ಬಂದಿರುವ ಅವರು ಇದನ್ನು ಘರ್ ವಾಪ್ಸಿ ಎಂದು ಬಣ್ಣಿಸಿದ್ದಾರೆ.

‘ಇವತ್ತು ನಾನು ಬಿಜೆಪಿ ಸೇರುತ್ತಿದ್ದೇನೆ. ನನಗೆ ಇದು ಘರ್ ವಾಪ್ಸಿಯಂತೆ ಆಗಿದೆ. ನಾವು ಫೈಟ್​ಗೆ ಬೇರೆ ದೇಶಕ್ಕೆ ಹೋದಾಗ ಏರ್​ಪೋರ್ಟ್​​ಗಳಲ್ಲಿ ಸಮಸ್ಯೆಗಳಾಗುತ್ತಿದ್ದುವು. ಈ ಸರ್ಕಾರದ ದೆಸೆಯಿಂದ ನಮಗೆ ಎಲ್ಲಾ ಗೌರವಗಳೂ ಸಿಗುತ್ತಿವೆ,’ ಎಂದು ಅವರು ಇಂದು ಬುಧವಾರ ಹೇಳಿದ್ದಾರೆ.

ಉತ್ತರಪ್ರದೇಶದ ಮಥುರಾದಲ್ಲಿ ಹೇಮ ಮಾಲಿನಿ ಅವರು 2019ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ನಿಂದ ಗೆದ್ದು ಸಂಸದೆಯಾಗಿದ್ದರು. ಅದೇ ಕ್ಷೇತ್ರದಲ್ಲಿ ವಿಜೇಂದರ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ಕೊಡುವ ಸಾಧ್ಯತೆ ಇದೆ. ವಿಜೇಂದರ್ ಅವರು ಜಾಟ್ ಸಮುದಾಯದವರಾಗಿರುವುದು ಬಿಜೆಪಿಯ ಲೆಕ್ಕಾಚಾರ ಬದಲಿಸಲು ಕಾರಣ. ಮಥುರಾ ಕ್ಷೇತ್ರ ಪಶ್ಚಿಮ ಉತ್ತರಪ್ರದೇಶದಲ್ಲಿ ಬರುತ್ತದೆ. ಈ ಭಾಗ ಮತ್ತು ಹರ್ಯಾಣದಲ್ಲಿ ಜಾಟ್ ಜನರು ಸಾಕಷ್ಟಿದ್ದಾರೆ. ವಿಜೇಂದರ್ ಸೇರ್ಪಡೆಯಿಂದ ಜಾಟ್ ಸಮುದಾಯದವರ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಬಿಜೆಪಿಗೆ ಅನುಕೂಲವಾಗಬಹುದು.

ಇದನ್ನೂ ಓದಿ: Lok Sabha Election 2024: ರಾಹುಲ್ ಗಾಂಧಿ ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

ವಿಜೇಂದರ್ ಸಿಂಗ್ ಸಾಧಾರಣ ಬಾಕ್ಸರ್ ಅಲ್ಲ. ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಬಾಕ್ಸರ್ ಅವರು. 2008ರ ಬೀಜಿಂಗ್ ಒಲಿಂಪಿಕ್ಸ್​ನಲ್ಲಿ ಅವರು ಕಂಚಿನ ಪದಕ ಗೆದ್ದಿದ್ದರು. ಅಲ್ಲಿಯವರೆಗೆ ಭಾರತದ ಯಾವ ಬಾಕ್ಸರ್ ಕೂಡ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದಿರಲಿಲ್ಲ. ವಿಜೇಂದರ್ ಅವರು ಕಾಮನ್​ವೆಲ್ತ್ ಕ್ರೀಡಾಕೂಟಗಳಲ್ಲೂ ಬೆಳ್ಳಿ, ಕಂಚಿನ ಪದಕಗಳನ್ನು ಜಯಿಸಿದ್ದಾರೆ. ಬಳಿಕ ವೃತ್ತಿಪರ ಬಾಕ್ಸಿಂಗ್ ಕ್ಷೇತ್ರಕ್ಕೆ ಇಳಿದಿದ್ದಾರೆ. ಇವರು ಭಾರತದ ಮೊದಲ ವೃತ್ತಿಪರ ಬಾಕ್ಸರ್ ಕೂಡ ಹೌದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ