AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಮ್ಸ್‌ ಚಟಕ್ಕೆ ಬಿದ್ದ ಬಾಲಕನಿಂದ ಕಿಡ್ನಾಪ್‌ ಡ್ರಾಮಾ, ಬೇಡಿಕೆ ಇಟ್ಟ ಹಣವೆಷ್ಟು ಗೊತ್ತಾ?

ಬಿಹಾರ: ಆನ್‌ಲೈನ್‌ ವಿಡಿಯೋ ಗೇಮ್ಸ್‌ ಮತ್ತು ಕ್ರಿಕೆಟ್‌ ಆಟಕ್ಕೆ ಅಡಿಕ್ಟ್‌ ಆಗಿದ್ದ ಬಾಲಕನೊಬ್ಬ ಖತರ್ನಾಕ್‌ ಐಡಿಯಾ ಮಾಡಿ ಪತರ‌ಗುಟ್ಟಿದ ಪ್ರಕರಣ ಪಾಟ್ನಾದಲ್ಲಿ ನಡೆದಿದೆ. ಹೌದು ಬಿಹಾರದ ಪಾಟ್ನಾದ 14 ವರ್ಷದ ಬಾಲಕನಿಗೆ ಕ್ರಿಕೆಟ್‌ ಅಂದ್ರೆ ಸಿಕ್ಕಾಪಟ್ಟೆ ಹುಚ್ಚು. ಭವಿಷ್ಯದಲ್ಲಿ ತಾನೂ ಧೋನಿ ಆಗಬೇಕು ಅಂದ್ಕೊಂಡಿದ್ದ ಅಂತಾ ಕಾಣುತ್ತೆ. ಅಷ್ಟೇ ಅಲ್ಲ ಇವನಿಗೂ ಧೋನಿ ಥರಾನೆ ವಿಡಿಯೋ ಗೇಮ್ಸ್‌ ಹುಚ್ಚು. ಆದ್ರೆ ಕೈಯಲ್ಲಿ ಹಣವಿಲ್ಲ. ಏನು ಮಾಡಬೇಕು ಅಂತಾ ಯೋಚಿಸಿದಾಗಲೇ ಒಂದು ಖತರ್ನಾಕ್‌ ಐಡಿಯಾ ಹೊಳೆದಿದೆ. ಅಷ್ಟೇ.. ಫ್ರೆಂಡ್‌ […]

ಗೇಮ್ಸ್‌ ಚಟಕ್ಕೆ ಬಿದ್ದ ಬಾಲಕನಿಂದ ಕಿಡ್ನಾಪ್‌ ಡ್ರಾಮಾ, ಬೇಡಿಕೆ ಇಟ್ಟ ಹಣವೆಷ್ಟು ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on: Aug 18, 2020 | 1:25 PM

Share

ಬಿಹಾರ: ಆನ್‌ಲೈನ್‌ ವಿಡಿಯೋ ಗೇಮ್ಸ್‌ ಮತ್ತು ಕ್ರಿಕೆಟ್‌ ಆಟಕ್ಕೆ ಅಡಿಕ್ಟ್‌ ಆಗಿದ್ದ ಬಾಲಕನೊಬ್ಬ ಖತರ್ನಾಕ್‌ ಐಡಿಯಾ ಮಾಡಿ ಪತರ‌ಗುಟ್ಟಿದ ಪ್ರಕರಣ ಪಾಟ್ನಾದಲ್ಲಿ ನಡೆದಿದೆ.

ಹೌದು ಬಿಹಾರದ ಪಾಟ್ನಾದ 14 ವರ್ಷದ ಬಾಲಕನಿಗೆ ಕ್ರಿಕೆಟ್‌ ಅಂದ್ರೆ ಸಿಕ್ಕಾಪಟ್ಟೆ ಹುಚ್ಚು. ಭವಿಷ್ಯದಲ್ಲಿ ತಾನೂ ಧೋನಿ ಆಗಬೇಕು ಅಂದ್ಕೊಂಡಿದ್ದ ಅಂತಾ ಕಾಣುತ್ತೆ. ಅಷ್ಟೇ ಅಲ್ಲ ಇವನಿಗೂ ಧೋನಿ ಥರಾನೆ ವಿಡಿಯೋ ಗೇಮ್ಸ್‌ ಹುಚ್ಚು. ಆದ್ರೆ ಕೈಯಲ್ಲಿ ಹಣವಿಲ್ಲ. ಏನು ಮಾಡಬೇಕು ಅಂತಾ ಯೋಚಿಸಿದಾಗಲೇ ಒಂದು ಖತರ್ನಾಕ್‌ ಐಡಿಯಾ ಹೊಳೆದಿದೆ.

ಅಷ್ಟೇ.. ಫ್ರೆಂಡ್‌ ಮೀಟ್‌ ಮಾಡಿ ಬರ್ತಿನಿ ಅಂತಾ ಹೊರಗೆ ಹೋದವನೇ ತಾಯಿಗೆ ತನ್ನನ್ನ ಯಾರೋ ಕಿಡ್ನಾಪ್‌ ಮಾಡಿದ ಹಾಗೆ ಮೆಸೇಜ್‌ ಕಳಿಸಿದ್ದಾನೆ. ಅದರಲ್ಲಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಮೆಸೇಜ್‌ ನೋಡಿ ಕಂಗಾಲಾದ ವಿಧವೆ ತಾಯಿ, ತಕ್ಷಣ ಪಾತ್ರಾನಗರ ಪೊಲೀಸ್‌ ಸ್ಟೇಷನ್‌ಗೆ ಹೋಗಿ ದೂರು ನೀಡಿದ್ದಾಳೆ.

ತನಿಖೆ ಆರಂಭಿಸಿದ ಪೊಲೀಸರು ಬಾಲಕನನ್ನು ಪೂರ್ನಿಯಾದ ಬಸ್‌ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ. ವಿಚಾರಣೆ ಮಾಡಿದ ಪೊಲೀಸರಿಗೆ ಬಾಲಕ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ. ತಾಯಿ 3.5 ಲಕ್ಷ ರೂ ಲೋನ್‌ ಪಡೆದಿದ್ದು ಗೊತ್ತಾಯಿತು. ನನಗೆ ದೆಹಲಿ ಅಥವಾ ಮುಂಬೈನಲ್ಲಿ ಕ್ರಿಕೆಟ್‌ ಅಕಾಡೆಮಿ ಸೇರಲು ಹಣ ಬೇಕಾಗಿತ್ತು. ಹಾಗೇನೇ ವಿಡಿಯೋ ಗೇಮ್ಸ್‌ ಆಡಲು ಸ್ಮಾರ್ಟ್‌ ಫೋನ್‌ ಬೇಕಾಗಿತ್ತು. ಹೀಗಾಗಿ ಈ ಡ್ರಾಮಾ ಮಾಡಿದೆ ಎಂದಿದ್ದಾನೆ.

ಹುಡುಗ ಬುದ್ದಿಯ ಬಾಲಕನ ಪ್ಲಾನ್‌ ಕೇಳಿ ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ. ಆದ್ರೆ ಇನ್ನೂ ಚಿಕ್ಕ ಬಾಲಕ ಜೊತೆಗೆ ವಿಧವೆ ತಾಯಿ. ಹೀಗಾಗಿ ವಾರ್ನಿಂಗ್‌ ಕೊಟ್ಟು ಮನೆಗೆ ಕಳಿಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ