ರಾಜಸ್ಥಾನ: ಆಟವಾಡುವಾಗ ಜೋಕಾಲಿಯ ಹಗ್ಗ ಕೊರಳಿಗೆ ಸುತ್ತಿಕೊಂಡು ಬಾಲಕ ಸಾವು

ಆಟವಾಡುವಾಗ ಜೋಕಾಲಿಯ ಹಗ್ಗ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಗಳಲ್ಲಿ ನಡೆದಿದೆ. ಆ ಬಾಲಕನ ತಂಗಿಗಾಗಿ ಜೋಕಾಲಿ ಕಟ್ಟಲಾಗಿತ್ತು, ನಿತ್ಯ ಅದರಲ್ಲಿ ಬಾಲಕ ಕೂಡ ಆಟವಾಡುತ್ತಿದ್ದ. ಆದಿಲ್ ತನ್ನ ಮನೆಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಉಯ್ಯಾಲೆಯ ಹಗ್ಗ ಸುರುಳಿ ಸುತ್ತಿಕೊಳ್ಳುತ್ತಾ ಬಾಲಕನ ಕುತ್ತಿಗೆಯನ್ನೂ ಕೂಡ ಸುತ್ತುವರೆದಿತ್ತು. ಆತ ವಾಂತಿ ಮಾಡಿಕೊಂಡು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ.

ರಾಜಸ್ಥಾನ: ಆಟವಾಡುವಾಗ ಜೋಕಾಲಿಯ ಹಗ್ಗ ಕೊರಳಿಗೆ ಸುತ್ತಿಕೊಂಡು ಬಾಲಕ ಸಾವು
ಜೋಕಾಲಿ

Updated on: Oct 04, 2023 | 8:16 AM

ಆಟವಾಡುವಾಗ ಜೋಕಾಲಿಯ ಹಗ್ಗ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಗಳಲ್ಲಿ ನಡೆದಿದೆ. ಆ ಬಾಲಕನ ತಂಗಿಗಾಗಿ ಜೋಕಾಲಿ ಕಟ್ಟಲಾಗಿತ್ತು, ನಿತ್ಯ ಅದರಲ್ಲಿ ಬಾಲಕ ಕೂಡ ಆಟವಾಡುತ್ತಿದ್ದ. ಆದಿಲ್ ತನ್ನ ಮನೆಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಉಯ್ಯಾಲೆಯ ಹಗ್ಗ ಸುರುಳಿ ಸುತ್ತಿಕೊಳ್ಳುತ್ತಾ ಬಾಲಕನ ಕುತ್ತಿಗೆಯನ್ನೂ ಕೂಡ ಸುತ್ತುವರೆದಿತ್ತು. ಆತ ವಾಂತಿ ಮಾಡಿಕೊಂಡು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆದಿಲ್​ನನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಲಾಲ್ ತಿಳಿಸಿದ್ದಾರೆ.
ಇನ್ನುಮುಂದೆ ಯಾವುದೇ ಮನೆಯಲ್ಲಿ ಉಯ್ಯಾಲೆಯಿದ್ದರೂ ಮಕ್ಕಳ ಜತೆ ಪೋಷಕರು ಕೂಡ ಇರುವುದು ಒಳಿತು.

ಮತ್ತಷ್ಟು ಓದಿ: ಉಯ್ಯಾಲೆಯೇ ನೇಣು ಕುಣಿಕೆಯಾಗಿ ಬಾಲಕಿ ಸಾವು; ಮತ್ತೋರ್ವ ಬಾಲಕಿ ಸ್ಥಿತಿ ಗಂಭೀರ

ಮಡಿಕೇರಿಯಲ್ಲೂ ಇಂಥದ್ದೇ ಘಟನೆ ನಡೆದಿತ್ತು
ಮಡಿಕೇರಿಯಲ್ಲಿ 11 ವರ್ಷದ ಪ್ರವೀಣ್ ಎಂಬ ಬಾಲಕ ತಾನು ಆಡುತ್ತಿದ್ದ ಉಯ್ಯಾಲೆಯ ಹಗ್ಗಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ. ಈ ವೇಳೆ 4ನೇ ತರಗತಿ ವಿದ್ಯಾರ್ಥಿ ಪ್ರವೀಣ್ ಮನೆಯಲ್ಲಿ ಒಬ್ಬನೇ ಇದ್ದ. ಈ ದುರಂತ ಘಟನೆ ಶುಕ್ರವಾರ ಸಂಜೆ ತೆರೆದುಕೊಂಡಿದ್ದು, ಅವರ ತಾಯಿ ಕೆಲಸದಿಂದ ಹಿಂದಿರುಗಿದಾಗ ಬೆಳಕಿಗೆ ಬಂದಿತ್ತು. ಸುಂಟಿಕೊಪ್ಪ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಕ್ನೋ, ಚೆನ್ನೈ ಮತ್ತು ಮುಂಬೈನ ವರದಿಗಳು ಸಹ ಇದೇ ರೀತಿಯ ದುರ್ಘಟನೆಗಳು ನಡೆದಿವೆ.

ಚೆನ್ನೈನಲ್ಲಿ ಐದು ವರ್ಷದ ಬಾಲಕನೊಬ್ಬ ಮನೆಯಲ್ಲಿ ಮಾಡಿದ ಜೋಕಾಲಿಯ ಹಗ್ಗ ಕುತ್ತಿಗೆ ಸುತ್ತಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಮುಂಬೈನಲ್ಲಿ ಪವನ್ ಕೈಲಾಸ್ ಮಾಲಿ ಎಂಬ 13 ವರ್ಷದ ಬಾಲಕ ತನ್ನ ಮನೆಯಲ್ಲಿ ಹಗ್ಗದ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us