AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ

ಹತ್ತು ವರ್ಷದ ಬಾಲಕನನ್ನು ತಾಯಿಯ ಪ್ರಿಯಕರನೇ ಹತ್ಯೆ ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮನಾಲಿಯ 32 ವರ್ಷದ ದೀಪಾ ಎಂದು ಗುರುತಿಸಲಾಗಿದ್ದು, ಆಕೆ ಅವಿವಾಹಿತೆಯಾಗಿದ್ದಳು. ಚೆನ್ನೈನ ದಕ್ಷಿಣ ಉಪನಗರದ ತೊರೈಪಾಕ್ಕಂ ಬಳಿ ಈ ಭೀಕರ ಹತ್ಯೆ ನಡೆದಿದೆ. ಪೊಲೀಸರು ಶಿವಗಂಗಾ ಜಿಲ್ಲೆಯ ನಿವಾಸಿ ಮಣಿಕಂದನ್ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ

ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ
ಕ್ರೈಂ Image Credit source: NDTV
ನಯನಾ ರಾಜೀವ್
|

Updated on: May 12, 2025 | 11:38 AM

Share

ಗುವಾಹಟಿ, ಮೇ 12: ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ(Murder) ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್​ಕೇಸ್​ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು.

ತನಿಖೆಯ ಸಮಯದಲ್ಲಿ, ಪತಿಯಿಂದ ಬೇರ್ಪಟ್ಟ ಮಹಿಳೆ ಜಿತುಮೋನಿ ಹಲೋಯ್ ಎಂಬ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಪೊಲೀಸರಿಗೆ ತಿಳಿದುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.

ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದ್ದು, ಕೊಲೆಯಲ್ಲಿ ಆಕೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆಯಿಂದ ಬೇರ್ಪಟ್ಟಿರುವ ಮಗುವಿನ ತಂದೆ ಕೂಡ ಪೊಲೀಸರಲ್ಲಿ ಹೇಳಿಕೆ ದಾಖಲಿಸಿದ್ದಾರೆ.

ಇದನ್ನೂ ಓದಿ
Image
ಮೀರತ್​ ಕೊಲೆ ಪ್ರಕರಣ: ಮುಸ್ಕಾನ್​ ಸೌರಭ್​ನನ್ನು ತುಂಡು ತುಂಡಾಗಿ ಕತ್ತರಿಸಿದ
Image
ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು
Image
ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ಮತ್ತಷ್ಟು ಓದಿ: ಕೋಲ್ಕತ್ತಾ: ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು

ಮತ್ತೊಂದು ಪ್ರಕರಣ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಚೆನ್ನೈನ ಕುಮಾರನ್ ಕುಡಿಲ್ ನಿವಾಸಿಯೊಬ್ಬರು ಮುಂಜಾನೆ 5.30ರ ಸುಮಾರಿಗೆ ತೊರೈಪಾಕ್ಕಂ ಪ್ರದೇಶದಲ್ಲಿ ಬಿದ್ದಿರುವ ಸೂಟ್‌ಕೇಸ್ ಬಗ್ಗೆ ಪೊಲೀಸರಿಗೆ ತಿಳಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಆಕೆಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನೂ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಮೃತ ಮಹಿಳೆಯನ್ನು ಮನಾಲಿಯ 32 ವರ್ಷದ ದೀಪಾ ಎಂದು ಗುರುತಿಸಲಾಗಿದ್ದು, ಆಕೆ ಅವಿವಾಹಿತೆಯಾಗಿದ್ದಳು. ಚೆನ್ನೈನ ದಕ್ಷಿಣ ಉಪನಗರದ ತೊರೈಪಾಕ್ಕಂ ಬಳಿ ಈ ಭೀಕರ ಹತ್ಯೆ ನಡೆದಿದೆ. ಪೊಲೀಸರು ಶಿವಗಂಗಾ ಜಿಲ್ಲೆಯ ನಿವಾಸಿ ಮಣಿಕಂದನ್ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್