Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಬೇಕಂದ್ರೆ 10 ಲಕ್ಷ ಕೊಡಿ ಅಂದಿತ್ತು ಆ ಒಂದು ಧ್ವನಿ! ಹಾಗೆ ಭಯ ಹುಟ್ಸಿದ್ದು ಯಾರು ಗೊತ್ತಾ?

ಚೆನ್ನೈ: ನಿಮ್ಮ ಮಗನನ್ನು ನಾವು ಕಿಡ್ನಾಪ್​ ಮಾಡಿದ್ದೀವಿ. ಅವನನ್ನು ಜೀವಂತವಾಗಿ ನೋಡಬೇಕಂದ್ರೆ 10 ಲಕ್ಷ ರೂಪಾಯಿ ಮೊತ್ತವನ್ನು ಕೊಡಬೇಕು ಅಂತಾ ಚೆನ್ನೈನ ಟ್ರಿಪ್ಲಿಕೇನ್​ ಬಡಾವಣೆಯ ಕುಟುಂಬ ಒಂದಕ್ಕೆ ಕಳೆದ ಬುಧವಾರ ರಾತ್ರಿ ದೂರವಾಣಿ ಕರೆ ಬಂದಿತ್ತು. ಮಗನ ಅಪಹರಣದ ಸುದ್ದಿ ಕೇಳಿ ಕೊಂಚ ಶಾಕ್​ ಆದ ತಂದೆ ಕೂಡಲೇ ಪೊಲೀಸರ ಮೊರೆ ಹೋಗುತ್ತಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಖಾಕಿ ಪಡೆ ಕರೆ ಬಂದ ಮೊಬೈಲ್​ ನಂಬರ್​ನ ಪತ್ತೆ ಹಚ್ಚೋಕೆ ಮುಂದಾದರು. ಮೊಬೈಲ್​ ಟವರ್​ ಲೊಕೇಷನ್​ ಮುಖಾಂತರ ಅಪಹರಣದ ಕರೆ […]

ಮಗ ಬೇಕಂದ್ರೆ 10 ಲಕ್ಷ ಕೊಡಿ ಅಂದಿತ್ತು ಆ ಒಂದು ಧ್ವನಿ! ಹಾಗೆ ಭಯ ಹುಟ್ಸಿದ್ದು ಯಾರು ಗೊತ್ತಾ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 09, 2020 | 2:28 PM

ಚೆನ್ನೈ: ನಿಮ್ಮ ಮಗನನ್ನು ನಾವು ಕಿಡ್ನಾಪ್​ ಮಾಡಿದ್ದೀವಿ. ಅವನನ್ನು ಜೀವಂತವಾಗಿ ನೋಡಬೇಕಂದ್ರೆ 10 ಲಕ್ಷ ರೂಪಾಯಿ ಮೊತ್ತವನ್ನು ಕೊಡಬೇಕು ಅಂತಾ ಚೆನ್ನೈನ ಟ್ರಿಪ್ಲಿಕೇನ್​ ಬಡಾವಣೆಯ ಕುಟುಂಬ ಒಂದಕ್ಕೆ ಕಳೆದ ಬುಧವಾರ ರಾತ್ರಿ ದೂರವಾಣಿ ಕರೆ ಬಂದಿತ್ತು. ಮಗನ ಅಪಹರಣದ ಸುದ್ದಿ ಕೇಳಿ ಕೊಂಚ ಶಾಕ್​ ಆದ ತಂದೆ ಕೂಡಲೇ ಪೊಲೀಸರ ಮೊರೆ ಹೋಗುತ್ತಾರೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಖಾಕಿ ಪಡೆ ಕರೆ ಬಂದ ಮೊಬೈಲ್​ ನಂಬರ್​ನ ಪತ್ತೆ ಹಚ್ಚೋಕೆ ಮುಂದಾದರು. ಮೊಬೈಲ್​ ಟವರ್​ ಲೊಕೇಷನ್​ ಮುಖಾಂತರ ಅಪಹರಣದ ಕರೆ ಚೆಪಾಕ್​ ಏರಿಯಾದಿಂದ ಬಂದಿತ್ತು ಎಂದು ಪೊಲೀಸರು ಪತ್ತೆ ಹಚ್ಚುತ್ತಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಅಲ್ಲಿ 14 ವರ್ಷದ ಹುಡುಗನೊಬ್ಬ ಸಿಕ್ಕ. ಆತ ಮತ್ತು ಏರಿಯಾದ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ತಂದು ಪರಿಶೀಲಿಸಲು ಮುಂದಾದರು.

ಹುಡುಗನನ್ನು ವಿಚಾರಿಸಿದಾಗ ಪೊಲೀಸರಿಗೆ ಗೊತ್ತಾಯ್ತು ಕಿಡ್ನಾಪ್​ ಆದ ಹುಡುಗ ಈತನೇ ಎಂದು. ಏನಪ್ಪಾ ನಿನ್ನ ಲೀಲೆ ಎಂದು ವಿಚಾರಿಸಿದಾಗ ಸಾರ್​ ನಮ್ಮ ತಂದೆ ನನ್ನನ್ನು ಸದಾ ತೆಗಳುತ್ತಿದ್ದರು. ಹಾಗಾಗಿ, ಅವರ ಸಹಾನುಭೂತಿ ಗಿಟ್ಟಿಸಲು ನಾನು ಹೀಗೆ ಮಾಡಿದೆ ಎಂದು ಬಾಯಿಬಿಟ್ಟಿದ್ದಾನೆ. ಅಂದ ಹಾಗೆ, ಫೋನ್​ನಲ್ಲಿ ನಿನ್ನ ವಾಯ್ಸ್​ ಬೇರೆ ಥರನೇ ಇತ್ತಲ್ಲ ಅಂದಿದ್ದಕ್ಕೆ ನನ್ನ ಮೊಬೈಲ್​ನಲ್ಲಿದ್ದ ಌಪ್​ನಿಂದ ದನಿ ಬದಲಾಯಿಸಿಕೊಂಡು ಕಾಲ್​ ಮಾಡ್ದೇ ಸಾರ್​ ಅಂತಾ ಹುಡುಗ ತುಂಟ ನಗೆ ಬೀರಿದ್ದಾನೆ.

ಜೊತೆಗೆ, ಇದು ನಿಜವಾದ ಅಪಹರಣ ಎಂದು ನಮ್ಮ ತಂದೆಯನ್ನ ನಂಬಿಸಲು ಹಣಕ್ಕಾಗಿ ಬೇಡಿಕೆಯಿಟ್ಟೆ ಎಂದು ಹೇಳಿದ್ದಾನೆ. ಮರುಗಿದ ಪೊಲೀಸರು ಮತ್ತೆ ಹೀಗೆ ಮಾಡದಂತೆ ಹುಡುಗನಿಗೆ ವಾರ್ನಿಂಗ್​ ಕೊಟ್ಟು, ಅವನ ಪೋಷಕರಿಂದ ಮುಚ್ಚಳಿಕೆ ಬರೆಸಿ ಕಳುಹಿಸಿಕೊಟ್ಟಿದ್ದಾರೆ.

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ