AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿ ಜತೆ ಪ್ರೀತಿ, ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಜನ

ಅಪ್ರಾಪ್ತ ಬಾಲಕಿಯನ್ನು ಭೇಟಿಯಾಗಲು ಆಕೆಯ ಮನೆಗೆ ಬಂದಿದ್ದ ಯುವಕನನ್ನು ಹಿಡಿದು ಥಳಿಸಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯನ್ನು ಭೇಟಿಯಾಗಲು ಹೋದ 21 ವರ್ಷದ ಯುವಕನನ್ನು ಹುಡುಗಿಯ ಕುಟುಂಬದವರು ವಿವಸ್ತ್ರಗೊಳಿಸಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಪೊಲೀಸರು ಶುಕ್ರವಾರ ಈ ಪ್ರಕರಣದಲ್ಲಿ ಐದು ಜನರನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿ ಜತೆ ಪ್ರೀತಿ, ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಜನ
ನಯನಾ ರಾಜೀವ್
|

Updated on:Apr 13, 2025 | 1:35 PM

Share

ಛತ್ತೀಸ್​ಗಢ, ಏಪ್ರಿಲ್ 13: ಅಪ್ರಾಪ್ತ ಬಾಲಕಿ(Girl)ಯನ್ನು ಭೇಟಿ ಮಾಡಲು ಹೋಗಿದ್ದ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ತನ್ನ ಗೆಳತಿಯನ್ನು ಭೇಟಿಯಾಗಲು ಆಕೆಯ ಮನೆಗೆ ಬಂದಿದ್ದ ಹುಡುಗನನ್ನು ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಥಳಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯನ್ನು ಭೇಟಿಯಾಗಲು ಹೋದ 21 ವರ್ಷದ ಯುವಕನನ್ನು ಹುಡುಗಿಯ ಕುಟುಂಬದವರು ವಿವಸ್ತ್ರಗೊಳಿಸಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಪೊಲೀಸರು ಶುಕ್ರವಾರ ಈ ಪ್ರಕರಣದಲ್ಲಿ ಐದು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಏಪ್ರಿಲ್ 8 ರ ರಾತ್ರಿ ಮಲ್ಖರೋಡಾ ಪೊಲೀಸ್ ಠಾಣೆ ವ್ಯಾಪ್ತಿಯ ಬಡೆ ರಾವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಸತ್ನಾಮಿ ಸಮುದಾಯಕ್ಕೆ ಸೇರಿದ ದಾಬ್ರಾ ಪೊಲೀಸ್ ಠಾಣೆ ಪ್ರದೇಶದ ನಿವಾಸಿ ರಾಹುಲ್ ಅಂಚಲ್, ಇತರ ಹಿಂದುಳಿದ ವರ್ಗದ (ಒಬಿಸಿ) 16 ವರ್ಷದ ಬಾಲಕಿಯನ್ನು ಭೇಟಿಯಾಗಲು ಬಂದಿದ್ದ.

ಹುಡುಗಿಯ ಕುಟುಂಬವು ರಾತ್ರಿ ಯುವಕನನ್ನು ತಮ್ಮ ಮನೆಯಲ್ಲಿ ಹಿಡಿದು ಒತ್ತೆಯಾಳಾಗಿ ಇರಿಸಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳು ರಾತ್ರಿಯಿಡೀ ರಾಹುಲ್‌ಗೆ ಚಪ್ಪಲಿ, ಕೇಬಲ್‌ಗಳು ಮತ್ತು ಪೈಪ್‌ಗಳಿಂದ ಹೊಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 9 ರ ಬೆಳಿಗ್ಗೆ ಗ್ರಾಮದ ಬೀದಿಗಳಲ್ಲಿ ರಾಹುಲ್‌ನನ್ನು ಬೆತ್ತಲೆಯಾಗಿಸಿ ಥಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ಅಯೋಧ್ಯೆ: ಪತ್ನಿ, ಮೂರು ವರ್ಷದ ಮಗುವನ್ನು ಕೊಂದು ವ್ಯಕ್ತಿ ಪರಾರಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ವ್ಯಕ್ತಿ ಕುಳಿತಿರುವುದನ್ನು ಕಾಣಬಹುದು. ಹಗ್ಗದಿಂದ ಅವನ ಕಾಲುಗಳಿಗೆ ಹೊಡೆಯುತ್ತಿರುವುದು ಈ ವಿಡಿಯೋದಲ್ಲಿದೆ. ಬಾಲಕಿಯ ಪೋಷಕರು ತನ್ನನ್ನು ಕೋಣೆಯಲ್ಲಿ ಕೂಡಿಹಾಕಿ, ನಂತರ ಇತರರಿಗೆ ಕರೆ ಮಾಡಿ ನಂತರ ರಾತ್ರಿಯಿಡೀ ಥಳಿಸಿದ್ದಾರೆ.

ರಾಹುಲ್‌ನನ್ನು ರಾಯಗಢ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಯುವಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ. ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಪೊಲೀಸರು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಐವರ ವಿರುದ್ಧ ಎಫ್​ಐಆರ್ ದಾಖಲಿಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:35 pm, Sun, 13 April 25

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ