AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ದಾಳಿಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದ ಉತ್ತರಾಖಂಡದ ಬಾಲಕ

ಉತ್ತರಾಖಂಡದ ಬಾಲಕ ಹುಲಿ ದಾಳಿಯಿಂದ ಪಾರಾಗಿದ್ದಾರೆ, ಇದು 2023ರ ನವೆಂಬರ್​ನಲ್ಲಿ ನಡೆದ ಘಟನೆ, ಇದೀಗ ಬಾಲಕ ಚೇತರಿಸಿಕೊಳ್ಳುತ್ತಿದ್ದು, ಇನ್ನೂ ಅನೇಕ ಶಸ್ತ್ರಚಿಕಿತ್ಸೆಗಳು ಬಾಕಿ ಇವೆ ಎಂದು ವೈದ್ಯರು ತಿಳಿಸಿದ್ದಾರೆ.

ಹುಲಿ ದಾಳಿಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದ ಉತ್ತರಾಖಂಡದ ಬಾಲಕ
ಅಂಕಿತ್Image Credit source: India Today
ನಯನಾ ರಾಜೀವ್
|

Updated on: Mar 14, 2024 | 8:36 AM

Share

ಇನ್ನೇನು ಹುಲಿ ಬಾಯಿಗೆ ಸಿಕ್ಕಿ ಜೀವ ಬಿಡುತ್ತಾನೆ ಅನ್ನುವಷ್ಟರಲ್ಲಿ ಹೇಗೋ ದಾಳಿಯಿಂದ ಬಾಲಕ ಪಾರಾಗಿದ್ದ. ಈ ಘಟನೆ ಉತ್ತರಾಖಂಡದಲ್ಲಿ ನಡೆದಿದೆ, 17 ವರ್ಷದ ಬಾಲಕ ಕಾಲೇಜಿನಿಂದ ಮನೆಗೆ ಹೋಗುತ್ತಿರುವಾಗ ಹುಲಿ ದಾಳಿ ನಡೆಸಿದೆ. ರಾಮನಗರ ಪಟ್ಟಣದ ನಿವಾಸಿ ಅಂಕಿತ್ ಅವರು ಮಾರಣಾಂತಿಕ ದಾಳಿಯ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ, ಈಗ ಎಲ್ಲರಂತೆ ಜೀವನ ನಡೆಸುತ್ತಿದ್ದಾನೆ.

ನವೆಂಬರ್ 2023 ರಲ್ಲಿ ದೊಡ್ಡ ಬೆಕ್ಕು ಅವನ ಮೇಲೆ ದಾಳಿ ಮಾಡಿದ ನಂತರ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ನ್ನ ಸ್ನೇಹಿತರೊಂದಿಗೆ ಶಾಲೆಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮರದ ಮೇಲೆ ಕುಳಿತಿದ್ದ ಹುಲಿ ಹಿಂದಿನಿಂದ ದಾಳಿ ಮಾಡಿ ಆತನ ಕತ್ತು ಹಿಡಿದು ತಲೆ ಕಚ್ಚಿತ್ತು.

ದಾಳಿಯ ಸಮಯದಲ್ಲಿ ಹುಲಿ ತನ್ನ ಹಿಡಿತವನ್ನು ಕಳೆದುಕೊಂಡಿದ್ದರಿಂದ, ಅಂಕಿತ್ ತಕ್ಷಣವೇ ತನ್ನ ಬಲಗೈಯನ್ನು ಮುಂದೆ ಒಡ್ಡಿ ಹುಲಿಯ ನಾಲಿಗೆಯನ್ನು ಹಿಡಿದೆಳೆದಿದ್ದಾನೆ. ಆಗ ಹುಲಿ ಆತನನ್ನು ಬಿಟ್ಟಿತ್ತು, ಆತ ಕೂಡಲೇ ಅಲ್ಲಿಂದ ಓಡಿ ಜೀವ ಉಳಿಸಿಕೊಂಡಿದ್ದ. ಆತನ ಜತೆಗಿದ್ದ ಸ್ನೇಹಿತರ ಪ್ರಾಣವೂ ಉಳಿದಿತ್ತು. ಆದರೆ ಆತನ ಕುತ್ತಿಗೆ, ನೆತ್ತಿ ಹಾಗೂ ಬಲಗೈಗೆ ತೀವ್ರ ಗಾಯಗಳಾಗಿತ್ತು.

ತಕ್ಷಣ ಸ್ನೇಹಿತರು ಆತನಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು. ಆತನ ಸ್ಥಿತಿ ತುಂಬಾ ಗಂಭೀರವಾಗಿತ್ತು, ಹುಲಿಯ ಬಾಯಿಂದ ತಪ್ಪಿಸಿಕೊಂಡು ಬಂದ ಬಾಲಕನ ಬಗ್ಗೆ ವೈದ್ಯರು ಕೂಡ ಇದು ಹೇಗೆ ಸಾಧ್ಯವಾಯಿತು ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದರು.

ಮತ್ತಷ್ಟು ಓದಿ: ಚಾಮರಾಜನಗರ: ಕುರಿಗಾಹಿಗಳ ಮೇಲೆ ಹುಲಿ ದಾಳಿ: ಇಬ್ಬರಿಗೆ ಗಾಯ

ಆಸ್ಪತ್ರೆಗೆ ದಾಖಲಾಗುವ ವೇಳೆ ಸಾಕಷ್ಟು ರಕ್ತ ನಷ್ಟವಾಗಿತ್ತು. ಬಲ ಕಿವಿ ತೂಗಾಡುತ್ತಿತ್ತು, ತಲೆಗೂ ಗಂಭೀರ ಗಾಯವಾಗಿ ಮಾಂಸ ಹೊರಬಂದಿತ್ತು. ಮುಖವನ್ನು ಪರಚಿತ್ತು, ಬಲಗೈ ಹೆಬ್ಬೆರೆಳು ಭಾಗಶಃ ಕತ್ತರಿಸಿದಂತಾಗಿತ್ತು.

ಅವರ ಮುಖ ಹಾಗೂ ದೇಹವನ್ನು ಮೊದಲಿನಂತೆ ಮಾಡಲು ಇನ್ನೂ ಕೆಲವು ಶಸ್ತ್ರ ಚಿಕಿತ್ಸೆಗಳು ಬೇಕಾಗುತ್ತವೆ ಎಂದು ವೈದ್ಯರು ಹೇಳಿದ್ದಾರೆ. ಅವರ ತಲೆ ಹಾಗೂ ಕೈಯನ್ನು ಸರಿಪಡಿಸಲು ತಿಂಗಳುಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ