AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಬಿಎಸ್​ಪಿಯನ್ನು ಅಧಿಕಾರಕ್ಕೆ ತರಲು ದಲಿತರು- ಬ್ರಾಹ್ಮಣರು ಒಗ್ಗಟ್ಟಾಗಿ; ಮಾಯಾವತಿ ಕರೆ

ಉತ್ತರ ಪ್ರದೇಶದಲ್ಲಿ ಬಹುಜನ ಬಿಎಸ್​ಪಿ ಅಧಿಕಾರಕ್ಕೆ ಬರಬೇಕೆಂದರೆ ದಲಿತ ಮತ್ತು ಬ್ರಾಹ್ಮಣರು ಒಗ್ಗಟ್ಟಾಗಬೇಕು. ಈ ಚುನಾವಣೆಯಲ್ಲಿ ಬಿಎಸ್​ಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮಾಯಾವತಿ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಎಸ್​ಪಿಯನ್ನು ಅಧಿಕಾರಕ್ಕೆ ತರಲು ದಲಿತರು- ಬ್ರಾಹ್ಮಣರು ಒಗ್ಗಟ್ಟಾಗಿ; ಮಾಯಾವತಿ ಕರೆ
ಮಾಯಾವತಿ
TV9 Web
| Edited By: |

Updated on: Sep 07, 2021 | 7:52 PM

Share

ಲಕ್ನೋ: ಬಿಜೆಪಿ ಹಾಗೂ ಸಮಾಜವಾದಿ ಪಕ್ಷ ಜನರಿಗೆ ಕೇವಲ ಭರವಸೆ ನೀಡುತ್ತಿದೆ. ಆ ಭರವಸೆಯನ್ನು ಈಡೇರಿಸಲು ಯಾವುದೇ ಕ್ರಮಗಳನ್ನೂ ತೆಗೆದುಕೊಳ್ಳುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್​ಪಿ) ಅಧಿಕಾರಕ್ಕೆ ಬರಬೇಕೆಂದರೆ ದಲಿತ ಮತ್ತು ಬ್ರಾಹ್ಮಣರು ಒಗ್ಗಟ್ಟಾಗಬೇಕು. ಈ ಚುನಾವಣೆಯಲ್ಲಿ ಬಿಎಸ್​ಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬಿಎಸ್​ಪಿ ಅಧ್ಯಕ್ಷೆ ಮಾಯಾವತಿ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದ ಬ್ರಾಹ್ಮಣರು ಸೇರಿದಂತೆ ಮೇಲ್ಜಾತಿಯವರನ್ನು ಬಿಎಸ್​ಪಿಯತ್ತ ಸೆಳೆಯುವ ಸಲುವಾಗಿ 1 ತಿಂಗಳಿನಿಂದ ಆಯೋಜಿಸಿರುವ ಪ್ರಬುದ್ಧ ವರ್ಗ ಸಮ್ಮೇಳನದಲ್ಲಿ ಇಂದು ಭಾಗವಹಿಸಿದ್ದ ಮಾಯಾವತಿ, ಬಿಜೆಪಿ ಮತ್ತು ಎಸ್​ಪಿ ದಲಿತರು ಹಾಗೂ ಬ್ರಾಹ್ಮಣರ ಮತಗಳನ್ನು ಪಡೆಯಲು ಏನೇನೋ ಆಮಿಷಗಳನ್ನು ಒಡ್ಡುತ್ತಿವೆ. ಆದರೆ, ಅದ್ಯಾವುದನ್ನೂ ಈಡೇರಿಸಲು ಪ್ರಯತ್ನ ಮಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಬಿಜೆಪಿ ಮತ್ತು ಎಸ್‌ಪಿಗಳಂತೆ ಬಿಎಸ್‌ಪಿ ಕೇವಲ ಭರವಸೆ ನೀಡುವ ಪಕ್ಷವಲ್ಲ. ನಾವು ಏನು ಆಶ್ವಾಸನೆ ನೀಡುತ್ತೇವೋ ಅದನ್ನು ಮಾಡಿ ತೋರಿಸುತ್ತೇವೆ. 2007ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ಆಡಳಿತ ನಡೆಸಿದಾಗ ದಲಿತರ ಮತ್ತು ಬ್ರಾಹ್ಮಣರ ಭದ್ರತೆ ಹಾಗೂ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿತ್ತು ಎಂದು ಮಾಯಾವತಿ ಹೇಳಿದ್ದಾರೆ.

ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕರೆ ದಲಿತರು ಹಾಗೂ ಬ್ರಾಹ್ಮಣರ ಮೇಲಿನ ದೌರ್ಜನ್ಯದ ಪ್ರಕರಣಗಳ ತನಿಖೆಗೆ ಆದೇಶಿಸುತ್ತೇವೆ. ಹಾಗೇ, ಈ ಬಾರಿಯ ಚುನಾವಣೆಯಲ್ಲಿ ಬ್ರಾಹ್ಮಣ ಅಭ್ಯರ್ಥಿಗಳಿಗೆ ಹೆಚ್ಚು ಟಿಕೆಟ್​ಗಳನ್ನು ನೀಡುತ್ತೇವೆ ಎಂದು ಮಾಯಾವತಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ

ಚುನಾವಣೆಯಲ್ಲಿ ಗೆದ್ದರೆ ಪಾರ್ಕ್,ಸ್ಮಾರಕ ನಿರ್ಮಿಸುವುದಿಲ್ಲ: ಬಿಎಸ್​ಪಿ ನಾಯಕಿ ಮಾಯಾವತಿ

(Brahmins Security Top Focus if BSP Wins in Uttar Pradesh Election Mayawati calls for Dalit-Brahmin unity to win Polls)

Follow Us
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್