AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಬಿಎಸ್​ಪಿಯನ್ನು ಅಧಿಕಾರಕ್ಕೆ ತರಲು ದಲಿತರು- ಬ್ರಾಹ್ಮಣರು ಒಗ್ಗಟ್ಟಾಗಿ; ಮಾಯಾವತಿ ಕರೆ

ಉತ್ತರ ಪ್ರದೇಶದಲ್ಲಿ ಬಹುಜನ ಬಿಎಸ್​ಪಿ ಅಧಿಕಾರಕ್ಕೆ ಬರಬೇಕೆಂದರೆ ದಲಿತ ಮತ್ತು ಬ್ರಾಹ್ಮಣರು ಒಗ್ಗಟ್ಟಾಗಬೇಕು. ಈ ಚುನಾವಣೆಯಲ್ಲಿ ಬಿಎಸ್​ಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮಾಯಾವತಿ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಎಸ್​ಪಿಯನ್ನು ಅಧಿಕಾರಕ್ಕೆ ತರಲು ದಲಿತರು- ಬ್ರಾಹ್ಮಣರು ಒಗ್ಗಟ್ಟಾಗಿ; ಮಾಯಾವತಿ ಕರೆ
ಮಾಯಾವತಿ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 07, 2021 | 7:52 PM

Share

ಲಕ್ನೋ: ಬಿಜೆಪಿ ಹಾಗೂ ಸಮಾಜವಾದಿ ಪಕ್ಷ ಜನರಿಗೆ ಕೇವಲ ಭರವಸೆ ನೀಡುತ್ತಿದೆ. ಆ ಭರವಸೆಯನ್ನು ಈಡೇರಿಸಲು ಯಾವುದೇ ಕ್ರಮಗಳನ್ನೂ ತೆಗೆದುಕೊಳ್ಳುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್​ಪಿ) ಅಧಿಕಾರಕ್ಕೆ ಬರಬೇಕೆಂದರೆ ದಲಿತ ಮತ್ತು ಬ್ರಾಹ್ಮಣರು ಒಗ್ಗಟ್ಟಾಗಬೇಕು. ಈ ಚುನಾವಣೆಯಲ್ಲಿ ಬಿಎಸ್​ಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬಿಎಸ್​ಪಿ ಅಧ್ಯಕ್ಷೆ ಮಾಯಾವತಿ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದ ಬ್ರಾಹ್ಮಣರು ಸೇರಿದಂತೆ ಮೇಲ್ಜಾತಿಯವರನ್ನು ಬಿಎಸ್​ಪಿಯತ್ತ ಸೆಳೆಯುವ ಸಲುವಾಗಿ 1 ತಿಂಗಳಿನಿಂದ ಆಯೋಜಿಸಿರುವ ಪ್ರಬುದ್ಧ ವರ್ಗ ಸಮ್ಮೇಳನದಲ್ಲಿ ಇಂದು ಭಾಗವಹಿಸಿದ್ದ ಮಾಯಾವತಿ, ಬಿಜೆಪಿ ಮತ್ತು ಎಸ್​ಪಿ ದಲಿತರು ಹಾಗೂ ಬ್ರಾಹ್ಮಣರ ಮತಗಳನ್ನು ಪಡೆಯಲು ಏನೇನೋ ಆಮಿಷಗಳನ್ನು ಒಡ್ಡುತ್ತಿವೆ. ಆದರೆ, ಅದ್ಯಾವುದನ್ನೂ ಈಡೇರಿಸಲು ಪ್ರಯತ್ನ ಮಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಬಿಜೆಪಿ ಮತ್ತು ಎಸ್‌ಪಿಗಳಂತೆ ಬಿಎಸ್‌ಪಿ ಕೇವಲ ಭರವಸೆ ನೀಡುವ ಪಕ್ಷವಲ್ಲ. ನಾವು ಏನು ಆಶ್ವಾಸನೆ ನೀಡುತ್ತೇವೋ ಅದನ್ನು ಮಾಡಿ ತೋರಿಸುತ್ತೇವೆ. 2007ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ಆಡಳಿತ ನಡೆಸಿದಾಗ ದಲಿತರ ಮತ್ತು ಬ್ರಾಹ್ಮಣರ ಭದ್ರತೆ ಹಾಗೂ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿತ್ತು ಎಂದು ಮಾಯಾವತಿ ಹೇಳಿದ್ದಾರೆ.

ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕರೆ ದಲಿತರು ಹಾಗೂ ಬ್ರಾಹ್ಮಣರ ಮೇಲಿನ ದೌರ್ಜನ್ಯದ ಪ್ರಕರಣಗಳ ತನಿಖೆಗೆ ಆದೇಶಿಸುತ್ತೇವೆ. ಹಾಗೇ, ಈ ಬಾರಿಯ ಚುನಾವಣೆಯಲ್ಲಿ ಬ್ರಾಹ್ಮಣ ಅಭ್ಯರ್ಥಿಗಳಿಗೆ ಹೆಚ್ಚು ಟಿಕೆಟ್​ಗಳನ್ನು ನೀಡುತ್ತೇವೆ ಎಂದು ಮಾಯಾವತಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ

ಚುನಾವಣೆಯಲ್ಲಿ ಗೆದ್ದರೆ ಪಾರ್ಕ್,ಸ್ಮಾರಕ ನಿರ್ಮಿಸುವುದಿಲ್ಲ: ಬಿಎಸ್​ಪಿ ನಾಯಕಿ ಮಾಯಾವತಿ

(Brahmins Security Top Focus if BSP Wins in Uttar Pradesh Election Mayawati calls for Dalit-Brahmin unity to win Polls)

ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ