AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BrahMos Missile: ಐಎನ್​ಎಸ್ ವಿಶಾಖಪಟ್ಟಣಂ ಯುದ್ಧನೌಕೆಯಿಂದ ಬ್ರಹ್ಮೋಸ್ ಸೂಪರ್​ಸಾನಿಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

Sea to Sea Missile: ಸಾಗರದಿಂದ ಉಡಾವಣೆಗೊಂಡು ಸಾಗರದಲ್ಲಿರುವ ಗುರಿಯನ್ನು ಬೆನ್ನತ್ತುವ ತಂತ್ರಜ್ಞಾನದ ಈ ಕ್ಷಿಪಣಿಯು ಗರಿಷ್ಠ ದೂರದಲ್ಲಿದ್ದ ನೌಕೆಯ ಮೇಲೆ ಯಶಸ್ವಿಯಾಗಿ ಅಪ್ಪಳಿಸಿತು.

BrahMos Missile: ಐಎನ್​ಎಸ್ ವಿಶಾಖಪಟ್ಟಣಂ ಯುದ್ಧನೌಕೆಯಿಂದ ಬ್ರಹ್ಮೋಸ್ ಸೂಪರ್​ಸಾನಿಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ
ಯುದ್ಧನೌಕೆಯಿಂದ ಬ್ರಹ್ಮೋಸ್ ಸೂಪರ್​ಸಾನಿಕ್ ಕ್ರೂಸ್ ಕ್ಷಿಪಣಿ
TV9 Web
| Edited By: |

Updated on: Jan 11, 2022 | 9:28 PM

Share

ದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (Defence Research and Development Organisation – DRDO) ಮಂಗಳವಾರ ಭಾರತೀಯ ನೌಕಾಪಡೆಯು ಯುದ್ಧನೌಕೆ ಐಎನ್​ಎಸ್ ವಿಕ್ರಮಾದಿತ್ಯದಿಂದ ಬ್ರಹ್ಮೋಸ್ ಸೂಪರ್​ಸಾನಿಕ್ ಕ್ರೂಸ್ ಕ್ಷಿಪಣಿಯನ್ನು (BrahMos Supersonic Cruise Missile) ಯಶಸ್ವಿಯಾಗಿ ಪರೀಕ್ಷಿಸಿತು. ಪಾಕ್ ಮತ್ತು ಚೀನಾದ ಭೂಗಡಿಗೆ ಸಮೀಪವಿರುವ ದೇಶದ ಪಶ್ಚಿಮ ಕರಾವಳಿಯಲ್ಲಿ ಈ ಪರೀಕ್ಷೆ ನಡೆದಿರುವುದು ಮಹತ್ವದ ವಿದ್ಯಮಾನ ಎನಿಸಿದೆ. ಸಾಗರದಿಂದ ಉಡಾವಣೆಗೊಂಡು ಸಾಗರದಲ್ಲಿರುವ (Sea to Sea) ಗುರಿಯನ್ನು ಬೆನ್ನತ್ತುವ ತಂತ್ರಜ್ಞಾನದ ಈ ಕ್ಷಿಪಣಿಯು ಗರಿಷ್ಠ ದೂರದಲ್ಲಿದ್ದ ನೌಕೆಯ ಮೇಲೆ ಯಶಸ್ವಿಯಾಗಿ ಅಪ್ಪಳಿಸಿತು.

ಇದಕ್ಕೂ ಮೊದಲು ಡಿಸೆಂಬರ್ 8ರಂದು ವಿಮಾನದಿಂದ ಹಾರಿಬಿಡುವ ಬ್ರಹ್ಮೋಸ್​ ಸೂಪರ್​ಸಾನಿಕ್ ಕ್ರೂಸ್​ ಕ್ಷಿಪಣಿಯ ಏರ್​ ಟು ಏರ್ (Air to Air) ಮಾದರಿಯನ್ನು ಕಳೆದ ಡಿಸೆಂಬರ್ 8ರಂದು ಒಡಿಶಾದ ಚಂಡಿಪುರ ಕಡಲ ತೀರದಿಂದ ಪರೀಕ್ಷಾರ್ಥ ಉಡಾವಣೆ ಮಾಡಲಾಗಿತ್ತು. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಈ ವಿದ್ಯಮಾನನ್ನು ಬ್ರಹ್ಮೋಸ್ ಸಂಶೋಧನೆಯಲ್ಲಿ ಪ್ರಮುಖ ಮೈಲಿಗಲ್ಲು ಎಂದು ಹೇಳಿತ್ತು. ಶಬ್ದಾತೀತ ವೇಗದಲ್ಲಿ ಸಂಚರಿಸುವ ಸುಖೋಯ್ ಫೈಟರ್ ವಿಮಾನವು ಏರ್​ ಟು ಏರ್ ಮಾದರಿಯ ಕ್ಷಿಪಣಿಯನ್ನು ಗುರಿಯತ್ತ ಉಡಾಯಿಸಿತ್ತು. ಈ ಉಡಾವಣೆಯು ಏರ್​-ಟು-ಏರ್ ಮಾದರಿಯ ಬ್ರಹ್ಮೋಸ್ ಕ್ಷಿಪಣಿಗಳ ಉತ್ಪಾದನೆಯನ್ನು ದೊಡ್ಡಮಟ್ಟದಲ್ಲಿ ಆರಂಭಿಸಲು ಈ ಪರೀಕ್ಷೆಯು ನೆರವಾಗುತ್ತದೆ ಎಂದು ವಿಶ್ಲೇಷಿಸಲಾಗಿದೆ. ಪ್ರಸ್ತುತ ಇದು ದೇಶದ ಅತ್ಯಂತ ಸುಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆ ಎನಿಸಿದೆ. ಭಾರತ ಸರ್ಕಾರದ ಮೇಕ್​ ಇನ್ ಇಂಡಿಯಾ ಉಪಕ್ರಮದ ಭಾಗವಾಗಿ ಬ್ರಹ್ಮೋಸ್​ ಕ್ಷಿಪಣಿಗೆ ಹೆಚ್ಚು ಪ್ರೋತ್ಸಾಹ ಸಿಗುತ್ತಿದೆ.

ಬ್ರಹ್ಮೋಸ್ ಕ್ಷಿಪಣಿಗಳ ವೈಶಿಷ್ಟ್ಯವೇನು? ಬ್ರಹ್ಮೋಸ್ ಕ್ಷಿಪಣಿಗಳ ನಿಖರತೆ ಅದನ್ನು ಹೆಚ್ಚು ಮಾರಣಾಂತಿಕ ಎನಿಸುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ಅದರ ವ್ಯಾಪ್ತಿಯನ್ನು ಮತ್ತಷ್ಟು ಹಿಗ್ಗಿಸಬಹುದು. ಈ ಕ್ಷಿಪಣಿಗೆ ಶತ್ರುಗಳ ರಾಡಾರ್​ ಕಣ್ತಪ್ಪಿಸುವ ಸಾಮರ್ಥ್ಯವೂ ಇದೆ. ರಷ್ಯಾದ ಸಹಯೋಗದಲ್ಲಿ ಭಾರತ ಅಭಿವೃದ್ಧಿಪಡಿಸಿರುವ ಈ ಕ್ಷಿಪಣಿ ಸರಣಿಗಳಿಗೆ ಭಾರತದ ಬ್ರಹ್ಮಪುತ್ರ ಮತ್ತು ರಷ್ಯಾದ ಮೊಸ್ಖಾ ನದಿಗಳನ್ನು ಸಮೀಕರಿಸಿ ಬ್ರಹ್ಮೋಸ್ ಎಂದು ಹೆಸರಿಸಲಾಗಿದೆ. 21ನೇ ಶತಮಾನದ ಅತ್ಯಂತ ನಿಖರ ಮತ್ತು ಅಪಾಯಕಾರಿ ಕ್ಷಿಪಣಿಗಳ ಪೈಕಿ ಬ್ರಹ್ಮೋಸ್ ಸಹ ಒಂದಾಗಿದೆ. ಗಂಟೆಗೆ 4300 ಕಿಮೀ ವೇಗದಲ್ಲಿ ಸಂಚರಿಸುವ ಬ್ರಹ್ಮೋಸ್ ಕ್ಷಿಪಣಿಯು ಶತ್ರುಗಳ ನೆಲೆಗಳ ಮೇಲೆ ಕರಾರುವಾಕ್ಕಾಗಿ ಅಪ್ಪಳಿಸಿ, ನಾಶಪಡಿಸಲಿದೆ. 400 ಕಿಮೀ ಒಳಗಿರುವ ನೆಲೆಗಳ ಮೇಲೆಯೂ ಬ್ರಹ್ಮೋಸ್ ದಾಳಿ ನಡೆಸುವ ಸಾಮರ್ಥ್ಯ ಹೊಂದಿದೆ.

ಲಖನೌದಲ್ಲಿ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ಬ್ರಹ್ಮೋಸ್ ಕ್ಷಿಪಣಿಗಳ ಉತ್ಪಾದನಾ ಘಟಕಕ್ಕೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ಶಿಲಾನ್ಯಾಸ ನೆರವೇರಿಸಿದ್ದರು. ಈ ಘಟಕದಲ್ಲಿ ಬ್ರಹ್ಮೋಸ್ ಕ್ಷಿಪಣಿಗಳ ಉತ್ಪಾದನೆ ಶೀಘ್ರ ಆರಂಭವಾಗಲಿದೆ. ಕ್ಷಿಪಣಿಯ ಜೊತೆಗೆ ಇತರ ರಕ್ಷಣಾ ಉಪಕರಣಗಳು ಹಾಗೂ ಶಸ್ತ್ರಾಸ್ತ್ರಗಳನ್ನೂ ಉತ್ಪಾದಿಸುತ್ತಿರುವುದಾಗಿ ಬ್ರಹ್ಮೋಸ್ ಹೇಳಿತ್ತು. ಯಾವುದೇ ದೇಶವನ್ನು ಗಮನದಲ್ಲಿರಿಸಿಕೊಂಡು ಈ ಕ್ಷಿಪಣಿಯನ್ನು ನಾವು ರೂಪಿಸಿಲ್ಲ ಎಂದು ಬ್ರಹ್ಮೋಸ್ ಕಂಪನಿಯು ಈ ಹಿಂದೆ ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ: Missile Power: ಕ್ಷಿಪಣಿ ತಂತ್ರಜ್ಞಾನದಲ್ಲಿ ಭಾರತದ ಸ್ವಾವಲಂಬನೆ, ಮೇಲುಗೈಗೆ ಸಾಕ್ಷಿಯಾದ ಸೂಪರ್​ಸಾನಿಕ್ ಬ್ರಹ್ಮೋಸ್, ಸಬ್​ಸಾನಿಕ್ ನಿರ್ಭಯ್ ಇದನ್ನೂ ಓದಿ: ಬ್ರಹ್ಮೋಸ್ ‘ಸರ್​ಫೇಸ್ ಟು ಸರ್​ಫೇಸ್’ ಕ್ಷಿಪಣಿ ಪ್ರಯೋಗ ಯಶಸ್ವಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ