AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಕಾಂಗ್ರೆಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಗುಲಾಂ ನಬಿ ಬೆನ್ನಲ್ಲೇ ಮತ್ತಷ್ಟು ಹಿರಿಯ ನಾಯಕರ ರಾಜೀನಾಮೆ

ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ 5 ಕಾಂಗ್ರೆಸ್ ಹಿರಿಯ ನಾಯಕರು ರಾಜೀನಾಮೆ ನೀಡಿದ್ದಾರೆ

Breaking: ಕಾಂಗ್ರೆಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಗುಲಾಂ ನಬಿ ಬೆನ್ನಲ್ಲೇ ಮತ್ತಷ್ಟು ಹಿರಿಯ ನಾಯಕರ ರಾಜೀನಾಮೆ
Ghulam Nabi Azad
TV9 Web
| Edited By: |

Updated on:Aug 26, 2022 | 3:48 PM

Share

ದೆಹಲಿ: GM ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್ ಅವರು ಗುಲಾಂ ನಬಿ ಆಜಾದ್ (Ghulam Nabi Azad) ಅವರನ್ನು ಬೆಂಬಲಿಸಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ (Congress Leader), ಸಚಿವ ಗುಲಾಂ ನಬಿ ಆಜಾದ್ (Ghulam Nabi Azad) ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೂ ಶುಕ್ರವಾರ (ಆಗಸ್ಟ್ 26) ರಾಜೀನಾಮೆ ನೀಡಿದ್ದಾರೆ. ಐದು ಪುಟಗಳ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ಪಕ್ಷವು ಸುಧಾರಿಸಲು ಸಾಧ್ಯವಾಗದ ಸ್ಥಿತಿ ತಲುಪಿದೆ ಎಂದು ಬರೆದಿದ್ದಾರೆ.

ಇತ್ತೀಚೆಗಷ್ಟೇ ಅವರು ಆರೋಗ್ಯದ ಕಾರಣ ಮುಂದಿಟ್ಟು ಜಮ್ಮು ಮತ್ತು ಕಾಶ್ಮೀರ ಘಟಕದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಈ ಮೂಲಕ ಪಕ್ಷದ ಉನ್ನತ ನಾಯಕತ್ವದ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನವನ್ನು ಮತ್ತೆ ಹೊರಹಾಕಿದ್ದರು. ಪಕ್ಷದ ನಾಯಕತ್ವ ಕಾರ್ಯನಿರ್ವಹಿಸುತ್ತಿರುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದ ಜಿ-23 ಸಮಿತಿಯಲ್ಲಿ ಗುಲಾಂ ನಬಿ ಆಜಾದ್ ಸಹ ಇದ್ದರು. ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ (JKCC) ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು.

ಗುಲಾಂ ನಬಿ ಆಜಾದ್ ರಾಜೀನಾಮೆ ಬೆನ್ನಲ್ಲೇ GM ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್, ಮಾಜಿ ಸಚಿವ ಆರ್ ಎಸ್ ಚಿಬ್ ಗುಲಾಂ ನಬಿ ಅವರನ್ನು ಬೆಂಬಲಿಸಿ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Published On - 3:34 pm, Fri, 26 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ