AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: PMLA ಪ್ರಕರಣ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶ್‌ಮುಖ್‌ಗೆ ಜಾಮೀನು

ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅನಿಲ್ ದೇಶ್‌ಮುಖ್‌ಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

Breaking: PMLA ಪ್ರಕರಣ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶ್‌ಮುಖ್‌ಗೆ ಜಾಮೀನು
TV9 Web
| Edited By: |

Updated on:Oct 04, 2022 | 3:21 PM

Share

ಮಹಾರಾಷ್ಟ್ರ: ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅನಿಲ್ ದೇಶ್‌ಮುಖ್‌ಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

1 ಲಕ್ಷ ರೂ. ಶ್ಯೂರಿಟಿ ಮೊತ್ತದ ಮೇಲೆ ಜಾಮೀನು ನೀಡಲಾಗಿದೆ. ಇಡಿ ಎರಡು ವಾರಗಳ ಕಾಲ ಆದೇಶದ ಕಾರ್ಯಾಚರಣೆಗೆ ತಡೆ ಕೋರಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ದೇಶ್‌ಮುಖ್ ಅವರನ್ನು ಬಂಧಿಸಲಾಗಿತ್ತು ಮತ್ತು ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಈ ವರ್ಷದ ಆರಂಭದಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಇಡಿ ಪ್ರಕರಣದಲ್ಲಿ ದೇಶ್‌ಮುಖ್‌ಗೆ ಜಾಮೀನು ಸಿಕ್ಕಿದ್ದರೂ, ಕಳೆದ ವರ್ಷ ಏಪ್ರಿಲ್‌ನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬಂಧನದಲ್ಲಿಯೇ ಇರುತ್ತಾರೆ.

ಇದಕ್ಕೂ ಮುನ್ನ, ಎನ್‌ಸಿಪಿ ನಾಯಕನ ಅರ್ಜಿಯು ಆರು ತಿಂಗಳಿನಿಂದ ಬಾಕಿ ಉಳಿದಿರುವುದರಿಂದ ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಮಾನಿಸುವಂತೆ ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ಸೂಚಿಸಿತ್ತು.

ಎನ್‌ಸಿಪಿಯ ಹಿರಿಯ ನಾಯಕನ ವಯಸ್ಸು (72), ಆರೋಗ್ಯ ಮತ್ತು ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನಲೆಗಳಿಲ್ಲದಿರುವ ಅಂಶವನ್ನು ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ದೇಶಮುಖ್ ಪರ ವಕೀಲರಾದ ವಿಕ್ರಮ್ ಚೌಧರಿ ಮತ್ತು ಅನಿಕೇತ್ ನಿಕಮ್ ಹೇಳಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ 4.7 ಕೋಟಿ ರೂ. ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ದೇಶ್‌ಮುಖ್‌ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿದ ನಂತರ ಇಡಿ ಅವರನ್ನು ಬಂಧಿಸಿತ್ತು .

Published On - 3:11 pm, Tue, 4 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ