AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Helicopter Crash in Kedarnath: ಕೇದಾರನಾಥ ಬಳಿ ಹೆಲಿಕಾಪ್ಟರ್​ ಪತನ; 7 ಮಂದಿ ದುರ್ಮರಣ

ಕೇದಾರನಾಥ ಬಳಿ ಹೆಲಿಕಾಪ್ಟರ್​ ಪತನಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ನಡೆದಿದೆ.

Helicopter Crash in Kedarnath: ಕೇದಾರನಾಥ ಬಳಿ ಹೆಲಿಕಾಪ್ಟರ್​ ಪತನ; 7 ಮಂದಿ ದುರ್ಮರಣ
ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ
TV9 Web
| Updated By: Digi Tech Desk|

Updated on:Oct 19, 2022 | 12:58 PM

Share

ಕೇದಾರನಾಥ: ಕೇದಾರನಾಥ (Kedarnath) ಬಳಿ ಹೆಲಿಕಾಪ್ಟರ್  (Helicopter)ಪತನಗೊಂಡು 7 ಮಂದಿ ಸಾವಿಗೀಡಾಗಿದ್ದಾರೆ. ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ನಡೆದಿದೆ. ಹೆಲಿಕಾಪ್ಟರ್​​ನಲ್ಲಿದ್ದ 8 ಜನರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಕೇದಾರನಾಥದ 2 ಕಿ.ಮೀ. ದೂರದಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿಯವರೆಗೆ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದುರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೇದಾರನಾಥ ಧಾಮ ದೇಗುಲದಿಂದ ಸುಮಾರು 2 ಕಿಮೀ ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಉತ್ತರಾಖಂಡ  ಮುಖ್ಯಮಂತ್ರಿ ಪುಷ್ಕರ್ ಧಾಮಿ ತನಿಖೆಗೆ ಆದೇಶಿಸಿದ್ದಾರೆ. ಕೇದಾರನಾಥ ಬಳಿಯ ಗರುಡ ಚಟ್ಟಿ ಎಂಬಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಕೆಲವು ಜನರು ಸಾವಿಗೀಡಾಗಿರುವ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ಎಸ್  ಡಿಆರ್ ಎಫ್ ಮತ್ತು ಜಿಲ್ಲಾಡಳಿತ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ಧಾವಿಸಿವೆ. ಈ ದುರಂತ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಯಾತ್ರಿಕರನ್ನು ಹೊತ್ತ ಹೆಲಿಕಾಪ್ಟರ್ ಕೇದಾರನಾಥದಿಂದ ಫಾಟಾ ಹೆಲಿಪ್ಯಾಡ್‌ಗೆ ಹಾರುತ್ತಿತ್ತು. ಅಪಘಾತ ಸಂಭವಿಸಿದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಮತ್ತು ಸ್ಥಳೀಯ ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿದರು.

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಅಪಘಾತವು ಅತ್ಯಂತ ದುರದೃಷ್ಟಕರವಾಗಿದೆ. ನಾವು ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ” ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

ಉತ್ತರಾಖಂಡದ ಎಸ್‌ಡಿಆರ್‌ಎಫ್ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಆರು ಸಾವುಗಳನ್ನು ಖಚಿತಪಡಿಸಿದ್ದಾರೆ. ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದು ಪತನವಾಗಿದ್ದು ಪ್ರತಿಕೂಲ ಹವಾಮಾನವೇ ದುರಂತಕ್ಕೆ ಕಾರಣ ಎಂದು ನಂಬಲಾಗಿದೆ.

ಅಯಾನ್ ಏವಿಯೇಷನ್ ಪ್ರೈ.ಲಿ. ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದ್ದು  ಇದು ಈ ಪ್ರದೇಶದಲ್ಲಿ ಹೆಲಿ ಸೇವೆಗಳನ್ನು ಒದಗಿಸುತ್ತದೆ. “ಪ್ರಾಥಮಿಕ ಮಾಹಿತಿಯ ಪ್ರಕಾರ, ದೆಹಲಿ ಮೂಲದ ಆರ್ಯನ್ ಏವಿಯೇಷನ್‌ಗೆ ಸೇರಿದ VT-RPN ಎಂದು ನೋಂದಾಯಿಸಲಾದ ಬೆಲ್ 407 ಹೆಲಿಕಾಪ್ಟರ್ ಕೇದಾರನಾಥದಿಂದ ಗುಪ್ತಕಾಶಿಗೆ ಹೋಗುವ ಮಾರ್ಗದಲ್ಲಿ ಅಪಘಾತಕ್ಕೀಡಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪತನವಾದ ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು.

Published On - 12:32 pm, Tue, 18 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ