AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Helicopter Crash in Kedarnath: ಕೇದಾರನಾಥ ಬಳಿ ಹೆಲಿಕಾಪ್ಟರ್​ ಪತನ; 7 ಮಂದಿ ದುರ್ಮರಣ

ಕೇದಾರನಾಥ ಬಳಿ ಹೆಲಿಕಾಪ್ಟರ್​ ಪತನಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ನಡೆದಿದೆ.

Helicopter Crash in Kedarnath: ಕೇದಾರನಾಥ ಬಳಿ ಹೆಲಿಕಾಪ್ಟರ್​ ಪತನ; 7 ಮಂದಿ ದುರ್ಮರಣ
ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ
TV9 Web
| Edited By: |

Updated on:Oct 19, 2022 | 12:58 PM

Share

ಕೇದಾರನಾಥ: ಕೇದಾರನಾಥ (Kedarnath) ಬಳಿ ಹೆಲಿಕಾಪ್ಟರ್  (Helicopter)ಪತನಗೊಂಡು 7 ಮಂದಿ ಸಾವಿಗೀಡಾಗಿದ್ದಾರೆ. ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ನಡೆದಿದೆ. ಹೆಲಿಕಾಪ್ಟರ್​​ನಲ್ಲಿದ್ದ 8 ಜನರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಕೇದಾರನಾಥದ 2 ಕಿ.ಮೀ. ದೂರದಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿಯವರೆಗೆ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದುರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೇದಾರನಾಥ ಧಾಮ ದೇಗುಲದಿಂದ ಸುಮಾರು 2 ಕಿಮೀ ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಉತ್ತರಾಖಂಡ  ಮುಖ್ಯಮಂತ್ರಿ ಪುಷ್ಕರ್ ಧಾಮಿ ತನಿಖೆಗೆ ಆದೇಶಿಸಿದ್ದಾರೆ. ಕೇದಾರನಾಥ ಬಳಿಯ ಗರುಡ ಚಟ್ಟಿ ಎಂಬಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಕೆಲವು ಜನರು ಸಾವಿಗೀಡಾಗಿರುವ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ಎಸ್  ಡಿಆರ್ ಎಫ್ ಮತ್ತು ಜಿಲ್ಲಾಡಳಿತ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ಧಾವಿಸಿವೆ. ಈ ದುರಂತ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಯಾತ್ರಿಕರನ್ನು ಹೊತ್ತ ಹೆಲಿಕಾಪ್ಟರ್ ಕೇದಾರನಾಥದಿಂದ ಫಾಟಾ ಹೆಲಿಪ್ಯಾಡ್‌ಗೆ ಹಾರುತ್ತಿತ್ತು. ಅಪಘಾತ ಸಂಭವಿಸಿದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಮತ್ತು ಸ್ಥಳೀಯ ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿದರು.

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಅಪಘಾತವು ಅತ್ಯಂತ ದುರದೃಷ್ಟಕರವಾಗಿದೆ. ನಾವು ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ” ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

ಉತ್ತರಾಖಂಡದ ಎಸ್‌ಡಿಆರ್‌ಎಫ್ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಆರು ಸಾವುಗಳನ್ನು ಖಚಿತಪಡಿಸಿದ್ದಾರೆ. ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದು ಪತನವಾಗಿದ್ದು ಪ್ರತಿಕೂಲ ಹವಾಮಾನವೇ ದುರಂತಕ್ಕೆ ಕಾರಣ ಎಂದು ನಂಬಲಾಗಿದೆ.

ಅಯಾನ್ ಏವಿಯೇಷನ್ ಪ್ರೈ.ಲಿ. ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದ್ದು  ಇದು ಈ ಪ್ರದೇಶದಲ್ಲಿ ಹೆಲಿ ಸೇವೆಗಳನ್ನು ಒದಗಿಸುತ್ತದೆ. “ಪ್ರಾಥಮಿಕ ಮಾಹಿತಿಯ ಪ್ರಕಾರ, ದೆಹಲಿ ಮೂಲದ ಆರ್ಯನ್ ಏವಿಯೇಷನ್‌ಗೆ ಸೇರಿದ VT-RPN ಎಂದು ನೋಂದಾಯಿಸಲಾದ ಬೆಲ್ 407 ಹೆಲಿಕಾಪ್ಟರ್ ಕೇದಾರನಾಥದಿಂದ ಗುಪ್ತಕಾಶಿಗೆ ಹೋಗುವ ಮಾರ್ಗದಲ್ಲಿ ಅಪಘಾತಕ್ಕೀಡಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪತನವಾದ ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು.

Published On - 12:32 pm, Tue, 18 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ