AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಅಹಮದಾಬಾದ್​ನಲ್ಲಿ ಕಟ್ಟಡದ ಲಿಫ್ಟ್​​ ಕುಸಿದು 7 ಕಾರ್ಮಿಕರು ದುರ್ಮರಣ, ಓರ್ವ ಗಂಭೀರ

ಅಹಮದಾಬಾದ್​ನಲ್ಲಿ ಲಿಫ್ಟ್​​ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದ ಕಟ್ಟಡದ ಲಿಫ್ಟ್​​ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದಾರೆ.

Breaking News: ಅಹಮದಾಬಾದ್​ನಲ್ಲಿ ಕಟ್ಟಡದ ಲಿಫ್ಟ್​​ ಕುಸಿದು 7 ಕಾರ್ಮಿಕರು ದುರ್ಮರಣ, ಓರ್ವ ಗಂಭೀರ
ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು
TV9 Web
| Edited By: |

Updated on:Sep 14, 2022 | 2:29 PM

Share

ಅಹಮದಾಬಾದ್: ಅಹಮದಾಬಾದ್‌ನಲ್ಲಿ (Ahmedabad) ನಿರ್ಮಾಣ ಹಂತದ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಏಳು ಕಾರ್ಮಿಕರು ಸಾವಿಗೀಡಾಗಿದ್ದು ಓರ್ವ  ಗಂಭೀರವಾಗಿ ಗಾಯಗೊಂಡಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಗುಜರಾತ್ ವಿಶ್ವವಿದ್ಯಾನಿಲಯದ ಬಳಿ ಸುಮಾರು 10 ಗಂಟೆಯ ಸುಮಾರಿಗೆ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಕಟ್ಟಡದ ಆಸ್ಪೈರ್ 2 ನ ಏಳನೇ ಮಹಡಿಯಲ್ಲಿ ಮೇಕ್-ಶಿಫ್ಟ್ ಲಿಫ್ಟ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತು. ಘಟನೆಯ ಸಮಯದಲ್ಲಿ, ತಾತ್ಕಾಲಿಕ ಲಿಫ್ಟ್ ವ್ಯವಸ್ಥೆಯಲ್ಲಿ ಎಂಟು ಕಾರ್ಮಿಕರಿದ್ದರು. ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಂವಹನ ಅಥವಾ ಕರೆಯನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ. ಅಗ್ನಿಶಾಮಕ ಮತ್ತು ಪೊಲೀಸ್ ತಂಡ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಥಳಕ್ಕೆ ತಲುಪಿತು.

ಇಂಥಾ ಘಟನೆ ನಡೆದಿದೆ ಎಂದು ಮಾಧ್ಯಮ ವರದಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳಿಂದ ಬಂದ ದೂರವಾಣಿ ಕರೆಗಳಿಂದ ನಮಗೆ ತಿಳಿಯಿತು. ಅಲ್ಲಿ ಏನಾಗಿದೆ ಎಂದು ಪರಿಶೀಲಿಸಲು ಸ್ಥಳಕ್ಕೆ ಬಂದೆವು. ಡೆವಲಪರ್‌ಗಳು ಅಥವಾ ಇತರ ಯಾವುದೇ ಏಜೆನ್ಸಿಯಿಂದ ಯಾವುದೇ ಅಧಿಕೃತ ಸಂವಹನ ಅಥವಾ ಮಾಹಿತಿಯನ್ನು ನಮಗೆ ಸಿಕ್ಕಿಲ್ಲ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ಹೇಳಿರುವುದಾಗಿ ದಿ ಇಂಡಿಯನ್  ಎಕ್ಸ್​​ಪ್ರೆಸ್ ವರದಿ ಮಾಡಿದೆ.

ಇದು ಖಾಸಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡವಾಗಿದೆ, ಆದ್ದರಿಂದ ಘಟನೆಯ ವಿಚಾರಣೆಯ ಸಮಯದಲ್ಲಿ ನಿರ್ಮಾಣ ಯೋಜನೆಗಳು ಮತ್ತು ಇತರ ಅನುಮೋದನೆಗಳನ್ನು ಪರಿಶೀಲಿಸಲಾಗುವುದು ಎಂದು ಎಎಂಸಿ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಶ್ ಬರೋಟ್ ಹೇಳಿದ್ದಾರೆ.

Published On - 1:06 pm, Wed, 14 September 22

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು