AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಅಹಮದಾಬಾದ್​ನಲ್ಲಿ ಕಟ್ಟಡದ ಲಿಫ್ಟ್​​ ಕುಸಿದು 7 ಕಾರ್ಮಿಕರು ದುರ್ಮರಣ, ಓರ್ವ ಗಂಭೀರ

ಅಹಮದಾಬಾದ್​ನಲ್ಲಿ ಲಿಫ್ಟ್​​ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದ ಕಟ್ಟಡದ ಲಿಫ್ಟ್​​ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದಾರೆ.

Breaking News: ಅಹಮದಾಬಾದ್​ನಲ್ಲಿ ಕಟ್ಟಡದ ಲಿಫ್ಟ್​​ ಕುಸಿದು 7 ಕಾರ್ಮಿಕರು ದುರ್ಮರಣ, ಓರ್ವ ಗಂಭೀರ
ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 14, 2022 | 2:29 PM

Share

ಅಹಮದಾಬಾದ್: ಅಹಮದಾಬಾದ್‌ನಲ್ಲಿ (Ahmedabad) ನಿರ್ಮಾಣ ಹಂತದ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಏಳು ಕಾರ್ಮಿಕರು ಸಾವಿಗೀಡಾಗಿದ್ದು ಓರ್ವ  ಗಂಭೀರವಾಗಿ ಗಾಯಗೊಂಡಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಗುಜರಾತ್ ವಿಶ್ವವಿದ್ಯಾನಿಲಯದ ಬಳಿ ಸುಮಾರು 10 ಗಂಟೆಯ ಸುಮಾರಿಗೆ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಕಟ್ಟಡದ ಆಸ್ಪೈರ್ 2 ನ ಏಳನೇ ಮಹಡಿಯಲ್ಲಿ ಮೇಕ್-ಶಿಫ್ಟ್ ಲಿಫ್ಟ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತು. ಘಟನೆಯ ಸಮಯದಲ್ಲಿ, ತಾತ್ಕಾಲಿಕ ಲಿಫ್ಟ್ ವ್ಯವಸ್ಥೆಯಲ್ಲಿ ಎಂಟು ಕಾರ್ಮಿಕರಿದ್ದರು. ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಂವಹನ ಅಥವಾ ಕರೆಯನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ. ಅಗ್ನಿಶಾಮಕ ಮತ್ತು ಪೊಲೀಸ್ ತಂಡ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಥಳಕ್ಕೆ ತಲುಪಿತು.

ಇಂಥಾ ಘಟನೆ ನಡೆದಿದೆ ಎಂದು ಮಾಧ್ಯಮ ವರದಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳಿಂದ ಬಂದ ದೂರವಾಣಿ ಕರೆಗಳಿಂದ ನಮಗೆ ತಿಳಿಯಿತು. ಅಲ್ಲಿ ಏನಾಗಿದೆ ಎಂದು ಪರಿಶೀಲಿಸಲು ಸ್ಥಳಕ್ಕೆ ಬಂದೆವು. ಡೆವಲಪರ್‌ಗಳು ಅಥವಾ ಇತರ ಯಾವುದೇ ಏಜೆನ್ಸಿಯಿಂದ ಯಾವುದೇ ಅಧಿಕೃತ ಸಂವಹನ ಅಥವಾ ಮಾಹಿತಿಯನ್ನು ನಮಗೆ ಸಿಕ್ಕಿಲ್ಲ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ಹೇಳಿರುವುದಾಗಿ ದಿ ಇಂಡಿಯನ್  ಎಕ್ಸ್​​ಪ್ರೆಸ್ ವರದಿ ಮಾಡಿದೆ.

ಇದು ಖಾಸಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡವಾಗಿದೆ, ಆದ್ದರಿಂದ ಘಟನೆಯ ವಿಚಾರಣೆಯ ಸಮಯದಲ್ಲಿ ನಿರ್ಮಾಣ ಯೋಜನೆಗಳು ಮತ್ತು ಇತರ ಅನುಮೋದನೆಗಳನ್ನು ಪರಿಶೀಲಿಸಲಾಗುವುದು ಎಂದು ಎಎಂಸಿ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಶ್ ಬರೋಟ್ ಹೇಳಿದ್ದಾರೆ.

Published On - 1:06 pm, Wed, 14 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?