AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ

ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ
ವಿಮಾನImage Credit source: iStock
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 14, 2022 | 12:02 PM

ನವದೆಹಲಿ: ಮಾಸ್ಕೋದಿಂದ ದೆಹಲಿಗೆ (Moscow- Delhi Flight) ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಲಾಗಿದ್ದು, ಇದು ಸಾಕಷ್ಟು ಆತಂಕಕ್ಕೆ ಕಾರಣವಾಯಿತು. ನಿನ್ನೆ ರಾತ್ರಿ ವಿಮಾನಕ್ಕೆ ಬಾಂಬ್​ ಇಟ್ಟಿರುವುದಾಗಿ (Bomb Threat) ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕೋ-ದೆಹಲಿ ಮಾರ್ಗದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ.

ವಿಮಾನದಲ್ಲಿ ಬಾಂಬ್​ ಇದೆ ಎಂದು ನಿನ್ನೆ ಮಧ್ಯರಾತ್ರಿ ಫೋನ್ ಬಂದಿತ್ತು. ಈ ಬಾಂಬ್​ ಕರೆ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸಿದ್ದರು. ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ. ಆದರೆ, ವಿಮಾನದಲ್ಲಿ ಯಾವುದೇ ರೀತಿಯ ಬಾಂಬ್​ ಪತ್ತೆಯಾಗಿಲ್ಲ.

ಇದನ್ನೂ ಓದಿ: ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಬಳಿ ಇರುವ ಮಸೀದಿಯಲ್ಲಿ ಬಾಂಬ್​​ ಸ್ಫೋಟ; 4 ಸಾವು

“ಕಳೆದ ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ನಿನ್ನೆ ರಾತ್ರಿ ಕರೆ ಬಂದಿತ್ತು. ಆ ವಿಮಾನವು ಇಂದು ಮುಂಜಾನೆ 3.20ರ ಸುಮಾರಿಗೆ ದೆಹಲಿಗೆ ಬಂದಿಳಿಯಿತು. ತಕ್ಷಣ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಇಳಿಸಲಾಯಿತು. ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆ ನಡೆಸಲಾಗುತ್ತಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Fri, 14 October 22

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?