AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ

ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ
ವಿಮಾನImage Credit source: iStock
TV9 Web
| Edited By: |

Updated on:Oct 14, 2022 | 12:02 PM

Share

ನವದೆಹಲಿ: ಮಾಸ್ಕೋದಿಂದ ದೆಹಲಿಗೆ (Moscow- Delhi Flight) ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಲಾಗಿದ್ದು, ಇದು ಸಾಕಷ್ಟು ಆತಂಕಕ್ಕೆ ಕಾರಣವಾಯಿತು. ನಿನ್ನೆ ರಾತ್ರಿ ವಿಮಾನಕ್ಕೆ ಬಾಂಬ್​ ಇಟ್ಟಿರುವುದಾಗಿ (Bomb Threat) ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕೋ-ದೆಹಲಿ ಮಾರ್ಗದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ.

ವಿಮಾನದಲ್ಲಿ ಬಾಂಬ್​ ಇದೆ ಎಂದು ನಿನ್ನೆ ಮಧ್ಯರಾತ್ರಿ ಫೋನ್ ಬಂದಿತ್ತು. ಈ ಬಾಂಬ್​ ಕರೆ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸಿದ್ದರು. ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ. ಆದರೆ, ವಿಮಾನದಲ್ಲಿ ಯಾವುದೇ ರೀತಿಯ ಬಾಂಬ್​ ಪತ್ತೆಯಾಗಿಲ್ಲ.

ಇದನ್ನೂ ಓದಿ: ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಬಳಿ ಇರುವ ಮಸೀದಿಯಲ್ಲಿ ಬಾಂಬ್​​ ಸ್ಫೋಟ; 4 ಸಾವು

“ಕಳೆದ ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ನಿನ್ನೆ ರಾತ್ರಿ ಕರೆ ಬಂದಿತ್ತು. ಆ ವಿಮಾನವು ಇಂದು ಮುಂಜಾನೆ 3.20ರ ಸುಮಾರಿಗೆ ದೆಹಲಿಗೆ ಬಂದಿಳಿಯಿತು. ತಕ್ಷಣ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಇಳಿಸಲಾಯಿತು. ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆ ನಡೆಸಲಾಗುತ್ತಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Fri, 14 October 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ