AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ

ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ
ವಿಮಾನImage Credit source: iStock
TV9 Web
| Edited By: |

Updated on:Oct 14, 2022 | 12:02 PM

Share

ನವದೆಹಲಿ: ಮಾಸ್ಕೋದಿಂದ ದೆಹಲಿಗೆ (Moscow- Delhi Flight) ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಲಾಗಿದ್ದು, ಇದು ಸಾಕಷ್ಟು ಆತಂಕಕ್ಕೆ ಕಾರಣವಾಯಿತು. ನಿನ್ನೆ ರಾತ್ರಿ ವಿಮಾನಕ್ಕೆ ಬಾಂಬ್​ ಇಟ್ಟಿರುವುದಾಗಿ (Bomb Threat) ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕೋ-ದೆಹಲಿ ಮಾರ್ಗದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ.

ವಿಮಾನದಲ್ಲಿ ಬಾಂಬ್​ ಇದೆ ಎಂದು ನಿನ್ನೆ ಮಧ್ಯರಾತ್ರಿ ಫೋನ್ ಬಂದಿತ್ತು. ಈ ಬಾಂಬ್​ ಕರೆ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸಿದ್ದರು. ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ. ಆದರೆ, ವಿಮಾನದಲ್ಲಿ ಯಾವುದೇ ರೀತಿಯ ಬಾಂಬ್​ ಪತ್ತೆಯಾಗಿಲ್ಲ.

ಇದನ್ನೂ ಓದಿ: ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಬಳಿ ಇರುವ ಮಸೀದಿಯಲ್ಲಿ ಬಾಂಬ್​​ ಸ್ಫೋಟ; 4 ಸಾವು

“ಕಳೆದ ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ನಿನ್ನೆ ರಾತ್ರಿ ಕರೆ ಬಂದಿತ್ತು. ಆ ವಿಮಾನವು ಇಂದು ಮುಂಜಾನೆ 3.20ರ ಸುಮಾರಿಗೆ ದೆಹಲಿಗೆ ಬಂದಿಳಿಯಿತು. ತಕ್ಷಣ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಇಳಿಸಲಾಯಿತು. ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆ ನಡೆಸಲಾಗುತ್ತಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Fri, 14 October 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್