AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಹಿಜಾಬ್ ಪ್ರಕರಣದ ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಇಂದು ಮುಕ್ತಾಯಗೊಳಿಸಿ, ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿರುವ ಸುಪ್ರೀಂ ಇಂದು ಈ ಪ್ರಕರಣದ ತೀರ್ಪುನ್ನು ಕಾಯ್ದಿರಿಸಿದೆ.

Breaking News: ಹಿಜಾಬ್ ಪ್ರಕರಣದ ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ
ಹಿಜಾಬ್ ವಿವಾದImage Credit source: Live Law
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 22, 2022 | 2:31 PM

Share

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು (Hijab Ban) ಕರ್ನಾಟಕ ಹೈಕೋರ್ಟ್ (Karnataka High Court)ಎತ್ತಿ ಹಿಡಿದಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್  (Supreme Court)ಇಂದು (ಗುರುವಾರ) ಕಾಯ್ದಿರಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮುಸ್ಲಿಂ ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲ ದುಷ್ಯಂತ್ ದವೆ, ನಂಬಿಕೆ ಇರುವವರಿಗೆ ಇದು (ಹಿಜಾಬ್) ಅತ್ಯಗತ್ಯ. ನಂಬಿಕೆಯಿಲ್ಲದವರಿಗೆ ಇದು ಅನಿವಾರ್ಯವಲ್ಲ ಎಂದಿದ್ದಾರೆ. ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಅಧಿಕಾರ ನೀಡಿತು. ಇದಕ್ಕೂ ಮುನ್ನ, ಕರ್ನಾಟಕ ಹಿಜಾಬ್ ನಿಷೇಧವನ್ನು ಪ್ರಶ್ನಿಸಿದ ಮುಸ್ಲಿಂ ಮೇಲ್ಮನವಿದಾರರು ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ಶಾಲೆಗಳಲ್ಲಿ ಉಡುಪುಗಳನ್ನು ಧರಿಸುವುದರ ವಿರುದ್ಧದ ನಿರ್ದೇಶನವು ಅಲ್ಪಸಂಖ್ಯಾತ ಸಮುದಾಯಗಳನ್ನು ಬದಿಗೊತ್ತುವ ಮಾದರಿಯ ಭಾಗವಾಗಿದೆ ಎಂದು ಹೇಳಿದರು. 10 ದಿನಗಳ ಕಾಲ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ.

ದುರದೃಷ್ಟವಶಾತ್ ನಾನು ಯಾವುದೇ ವ್ಯಕ್ತಿಯನ್ನು ಅಥವಾ ಯಾವುದನ್ನೂ ದೂಷಿಸುತ್ತಿಲ್ಲ, ಆದರೆ ಈ ಆಯೋಗದ ಮತ್ತು ಲೋಪಗಳ ಕಾರ್ಯಗಳು ಅಲ್ಪಸಂಖ್ಯಾತ ಸಮುದಾಯಗಳನ್ನು ಅಂಚಿನಲ್ಲಿಡುವ ಮಾದರಿಯಿದೆ ಎಂಬುದನ್ನು ತೋರಿಸುತ್ತವೆ. ಎಂದು ಕೆಲವು ಮೇಲ್ಮನವಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲ ದುಷ್ಯಂತ್ ದವೆ, ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠಕ್ಕೆ ತಿಳಿಸಿದರು. ದವೆ ಅವರು “ಲವ್ ಜಿಹಾದ್” ನಂತಹ ವಿವಾದಗಳನ್ನು ಉಲ್ಲೇಖಿಸಿದ್ದು, ನಾವು ಇಂದು ನೋಡುತ್ತಿರುವ ರೀತಿಯ ವಾತಾವರಣದ ಬೆಳಕಿನಲ್ಲಿ ಇದನ್ನು ಪರಿಗಣಿಸಬೇಕಾಗಿದೆ. ನಾವೀಗ 5,000 ವರ್ಷಗಳ ಹಿಂದಿನ ಪ್ರಗತಿಪರದಿಂದ ದೂರ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.

10 ದಿನಗಳ ವಿಚಾರಣೆಯಲ್ಲಿ ರಾಜ್ಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕರ್ನಾಟಕದ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ಕೆ ನಾವಡಗಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್ ವಾದ ಮಂಡಿಸಿದ್ದು, ಹಿರಿಯ ವಕೀಲರಾದ ದುಷ್ಯಂತ್ ದವೆ ಮತ್ತು ಸಲ್ಮಾನ್ ಖುರ್ಷಿದ್ ಮುಸ್ಲಿಂ ಅರ್ಜಿದಾರರ ಅಭಿಪ್ರಾಯಗಳನ್ನು ಮಂಡಿಸಿದರು.

Published On - 1:25 pm, Thu, 22 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ