AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಗೋವಾ ಬಳಿ MiG-29K ಯುದ್ಧ ವಿಮಾನ ಪತನ; ಪೈಲಟ್‌ ಪ್ರಾಣಾಪಾಯದಿಂದ ಪಾರು

MiG 29K ಯುದ್ಧ ವಿಮಾನವು ಬೇಸ್‌ಗೆ ಮರಳುತ್ತಿರುವಾಗ ತಾಂತ್ರಿಕ ದೋಷದಿಂದ ಗೋವಾದ ಸಮುದ್ರದ ಮೇಲೆ ಪತನಗೊಂಡಿತು.

Breaking News: ಗೋವಾ ಬಳಿ MiG-29K ಯುದ್ಧ ವಿಮಾನ ಪತನ; ಪೈಲಟ್‌ ಪ್ರಾಣಾಪಾಯದಿಂದ ಪಾರು
MiG-29K ಯುದ್ಧ ವಿಮಾನ
TV9 Web
| Edited By: |

Updated on:Oct 12, 2022 | 12:25 PM

Share

ಗೋವಾ: ನೌಕಾ ಪಡೆಯ MiG-29K ಯುದ್ಧ ವಿಮಾನ (Fighter Jet) ಗೋವಾದಿಂದ ಹೊರಡುವ ವೇಳೆ ಪತನವಾಗಿದ್ದು, ಪೈಲಟ್‌ ಸುರಕ್ಷಿತವಾಗಿ ಹೊರಕ್ಕೆ ಬಂದಿದ್ದಾರೆ. ನೌಕಾ ಪಡೆಯ MiG-29K ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ  ಇಂದು ಗೋವಾದ (Goa) ಬಳಿ MiG-29K ಯುದ್ಧ ವಿಮಾನ ಪತನಗೊಂಡಿದೆ.

MiG 29K ಯುದ್ಧ ವಿಮಾನವು ಬೇಸ್‌ಗೆ ಮರಳುತ್ತಿರುವಾಗ ತಾಂತ್ರಿಕ ದೋಷದಿಂದ ಗೋವಾದ ಸಮುದ್ರದ ಮೇಲೆ ಪತನಗೊಂಡಿತು. ಈ ವೇಳೆ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೈಲಟ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕನಿಂದ ₹ 27 ಕೋಟಿ ಮೌಲ್ಯದ ವಜ್ರಖಚಿತ ಚಿನ್ನದ ವಾಚ್ ವಶ

MiG 29K ವಿಮಾನವು ಅತ್ಯಾಧುನಿಕ, ವಾಯು ಪ್ರಾಬಲ್ಯದ ಫೈಟರ್ ಜೆಟ್ ಆಗಿದ್ದು, ಸುಮಾರು 2000 kmph ಗರಿಷ್ಠ ವೇಗವನ್ನು ಹೊಂದಿದೆ. ಇದು 65,000 ಅಡಿಗಿಂತಲೂ ಎತ್ತರಕ್ಕೆ ಏರುವ ಸಾಮರ್ಥ್ಯ ಹೊಂದಿದೆ. ಈ ಘಟನೆಯ ಹಿಂದಿನ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ.

2020ರಲ್ಲಿ, ಭಾರತೀಯ ನೌಕಾಪಡೆಯ ಪೈಲಟ್ ನಿಶಾಂತ್ ಸಿಂಗ್ ಅವರು ತಮ್ಮ MiG-29K ಯುದ್ಧ ವಿಮಾನ ಅರೇಬಿಯನ್ ಸಮುದ್ರದಲ್ಲಿ ಪತನಗೊಂಡು ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 am, Wed, 12 October 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ