AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ದೇಶದ ವಿವಿಧೆಡೆ NIA, ED ನಡೆಸಿದ ದಾಳಿಯಲ್ಲಿ 106 PFI ಕಾರ್ಯಕರ್ತರ ಬಂಧನ

ದೇಶ ವಿವಿಧೆಡೆ NIA, ED ನಡೆಸಿದ ದಾಳಿಯಲ್ಲಿ 106 PFI ಕಾರ್ಯಕರ್ತರ ಬಂಧನ ಮಾಡಲಾಗಿದೆ. ಆಂಧ್ರಪ್ರದೇಶ (5), ಅಸ್ಸಾಂ (9), ದೆಹಲಿ (3), ಕರ್ನಾಟಕ (20), ಕೇರಳ (22) ಸೇರಿದಂತೆ 11 ರಾಜ್ಯಗಳಲ್ಲಿ NIA, ED ಮತ್ತು ರಾಜ್ಯ ಪೊಲೀಸರ ಜೆಟಿ ತಂಡವು ನಡೆಸಿದ ದಾಳಿಗಳಲ್ಲಿ ಒಟ್ಟು 106 PFI ಸದಸ್ಯರನ್ನು ಬಂಧಿಸಲಾಗಿದೆ.

Breaking News: ದೇಶದ ವಿವಿಧೆಡೆ NIA, ED ನಡೆಸಿದ ದಾಳಿಯಲ್ಲಿ 106 PFI ಕಾರ್ಯಕರ್ತರ ಬಂಧನ
NIA AND ED
TV9 Web
| Edited By: |

Updated on:Sep 22, 2022 | 12:58 PM

Share

ದೇಶ ವಿವಿಧೆಡೆ NIA, ED ನಡೆಸಿದ ದಾಳಿಯಲ್ಲಿ 106 PFI ಕಾರ್ಯಕರ್ತರ ಬಂಧನ ಮಾಡಲಾಗಿದೆ. ಆಂಧ್ರಪ್ರದೇಶ (5), ಅಸ್ಸಾಂ (9), ದೆಹಲಿ (3), ಕರ್ನಾಟಕ (20), ಕೇರಳ (22) ಸೇರಿದಂತೆ 11 ರಾಜ್ಯಗಳಲ್ಲಿ NIA, ED ಮತ್ತು ರಾಜ್ಯ ಪೊಲೀಸರ ಜಂಟಿ ತಂಡವು ನಡೆಸಿದ ದಾಳಿಗಳಲ್ಲಿ ಒಟ್ಟು 106 PFI ಸದಸ್ಯರನ್ನು ಬಂಧಿಸಲಾಗಿದೆ. ಮಧ್ಯಪ್ರದೇಶ (4), ಮಹಾರಾಷ್ಟ್ರ (20), ಪುದುಚೇರಿ (3), ರಾಜಸ್ಥಾನ (2), ಟಿಎನ್ (10) ಮತ್ತು ಯುಪಿ (8) ಜನರನ್ನು ಬಂಧನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಗುರುವಾರ ನಸುಕಿನಲ್ಲಿ ನಗರ ಸೇರಿದಂತೆ ದೇಶಾದ್ಯಂತ ವಿವಿಧೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಎಸ್​ಡಿಪಿಐ ಕಚೇರಿಗಳು ಹಾಗೂ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯನ್ನು ವಿರೋಧಿಸಿ ಕೇರಳದ ವಿವಿಧೆಡೆ ಮತ್ತು ಮಂಗಳೂರು ನಗರದಲ್ಲಿ ಹಲವರು ‘ಎನ್​ಐಎ ಗೋಬ್ಯಾಕ್’ (NIA Go Back) ಪ್ರತಿಭಟನೆಗೆ ಮುಂದಾಗಿದ್ದಾರೆ.

ಮಂಗಳೂರು ಸೇರಿದಂತೆ ಬೆಂಗಳೂರಿನ ರಿಚ್​ಮಂಡ್ ಟೌನ್​ನಲ್ಲಿರುವ ಅಪಾರ್ಟ್​ಮೆಂಟ್ ಒಂದರ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದ್ದು, ರಸ್ತೆಯಲ್ಲಿ ಸಂಚರಿಸುವವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಕೇರಳದ ಮಾಂಜೇರಿ, ಮಲಪ್ಪುರಂ ಜಿಲ್ಲಾ ಪಿಎಫ್​ಐ ಘಟಕಗಳ ಅಧ್ಯಕ್ಷ ಒ.ಎಂ.ಎ.ಸಲ್ಮಾನ್ ಮತ್ತು ಇತರರ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ಎನ್​ಐಎ ದಾಳಿ ನಡೆಸಿದೆ. ಭಯೋತ್ಪಾದಕರಿಗೆ ಹಣದ ನೆರವು ಒದಗಿಸುವುದು, ತರಬೇತಿ ಶಿಬಿರ ಆಯೋಜನೆ ಮತ್ತು ಸಾರ್ವಜನಿಕರನ್ನು ಉಗ್ರಗಾಮಿ ಸಂಘಟನೆಗಳಿಗೆ ಸೇರ್ಪಡೆಗೊಳ್ಳಲು ಮನವೊಲಿಸುವುದು ಸೇರಿದಂತೆ ಹಲವು ಆಯಾಮದಲ್ಲಿ ತನಿಖೆ ನಡೆಯುತ್ತಿದೆ.

ತಮಿಳುನಾಡಿನ ಕೊಯಮತ್ತೂರು, ಕಡಲೂರು, ರಾಮ್​ನದ್, ದಿಂಡಿಗಲ್, ತೇಣಿ ಮತ್ತು ತೆನ್​ಕಾಸಿ ನಗರಗಳಲ್ಲಿ ಎನ್​ಐಎ ದಾಳಿ ನಡೆದಿದೆ. ಚೆನ್ನೈನ ಪುರಸವಕ್ಕಮ್​ ಪ್ರದೇಶದಲ್ಲಿರುವ ಪಿಎಫ್​ಐ ರಾಜ್ಯ ಘಟಕದ ಮುಖ್ಯ ಕಚೇರಿಗೂ ಅಧಿಕಾರಿಗಳು ಪ್ರವೇಶಿಸಿ ತಪಾಸಣೆ ನಡೆಸಲಾಗಿದೆ. ಇದೀಗ ದೇಶ ವಿವಿಧೆಡೆ NIA, ED ನಡೆಸಿದ ದಾಳಿಯಲ್ಲಿ 106 PFI ಕಾರ್ಯಕರ್ತರ ಬಂಧನ ಮಾಡಲಾಗಿದೆ. ಆಂಧ್ರಪ್ರದೇಶ (5), ಅಸ್ಸಾಂ (9), ದೆಹಲಿ (3), ಕರ್ನಾಟಕ (20), ಕೇರಳ (22) ಸೇರಿದಂತೆ 11 ರಾಜ್ಯಗಳಲ್ಲಿ NIA, ED ಮತ್ತು ರಾಜ್ಯ ಪೊಲೀಸರ ಜಂಟಿ ತಂಡವು ನಡೆಸಿದ ದಾಳಿಗಳಲ್ಲಿ ಒಟ್ಟು 106 PFI ಸದಸ್ಯರನ್ನು ಬಂಧಿಸಲಾಗಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಎಸ್​ಡಿಪಿಐ (SDPI) ಸಂಘಟನೆಗಳ ಪದಾಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (National Investigation Agency – NIA) ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿವಿಧ ಭದ್ರತಾ ಏಜೆನ್ಸಿಗಳ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ. ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುತ್ತಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್​’. ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಗುಪ್ತಚರ ವಿಭಾಗವನ್ನು ನಿಯಂತ್ರಿಸುವ (National Security Advisor – NSA) ಅಜಿತ್ ಡೊಬಾಲ್ (Ajit Doval) ಸಹ ಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಸಭೆಯು ಹೆಚ್ಚು ಮಹತ್ವ ಪಡೆದುಕೊಂಡಿದೆ.

Published On - 12:43 pm, Thu, 22 September 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ