AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಗೆ ಸೇರಿದ ₹48.22 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ಸಂಬಂಧಿಸಿದಂತೆ ಮಾಜಿ ಸಚಿವ ಪಾರ್ಥ ಚಟರ್ಜಿ, ಸಹಾಯಕನ 48 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ.

Breaking News: ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಗೆ ಸೇರಿದ ₹48.22 ಕೋಟಿ ಮೌಲ್ಯದ ಆಸ್ತಿ  ಮುಟ್ಟುಗೋಲು
Partha ChatterjeeImage Credit source: NDTV
TV9 Web
| Edited By: |

Updated on:Sep 19, 2022 | 3:29 PM

Share

ಕೊಲ್ಕತ್ತಾ :  ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ(teachers’ recruitment scam) ಆರೋಪಿ ಆಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ (Partha Chatterjee) ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿಗೆ (Arpita Mukherjee) ಸೇರಿದ ₹ 40.33 ಕೋಟಿ ಮೌಲ್ಯದ 40 ಸ್ಥಿರಾಸ್ತಿಗಳು ಮತ್ತು ₹ 7.89 ಕೋಟಿ ಮೊತ್ತವನ್ನು ಹೊಂದಿರುವ 35 ಬ್ಯಾಂಕ್ ಖಾತೆಗಳು ಸೇರಿದಂತೆ ₹ 48.22 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (Enforcement Directorate)  ಮುಟ್ಟುಗೋಲು ಹಾಕಿದೆ. ಮುಟ್ಟುಗೋಲು ಮಾಡಿ ಆಸ್ತಿಗಳಲ್ಲಿ ಫ್ಲಾಟ್‌ಗಳು, ಫಾರ್ಮ್‌ಹೌಸ್, ಕೋಲ್ಕತ್ತಾ ನಗರದಲ್ಲಿ ಪ್ರಧಾನ ಭೂಮಿ ಮತ್ತು ಬ್ಯಾಂಕ್ ಬ್ಯಾಲೆನ್ಸ್ ಸೇರಿವೆ ಎಂದು ಇಡಿ ಸೋಮವಾರ ತಿಳಿಸಿದೆ.ಕೇಂದ್ರೀಯ ಏಜೆನ್ಸಿಯ ಪ್ರಕಾರ ಮುಟ್ಟುಗೋಲು ಹಾಕಲಾದ ಹಲವಾರು ಆಸ್ತಿಗಳನ್ನು ಡಮ್ಮಿ ಕಂಪನಿಗಳು ಮತ್ತು ಸಂಸ್ಥೆಗಳು ಮತ್ತು ಚಟರ್ಜಿಯ ಪ್ರಾಕ್ಸಿಯಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳ ಹೆಸರಿನಲ್ಲಿ ಇರಿಸಲಾಗಿದೆ. ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ವಿವಿಧ ನೆಲೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ನಂತರ ಇಡಿ ಈ ಹಿಂದೆ ಚಟರ್ಜಿ ಮತ್ತು ಅವರ ಆಪ್ತೆ ಮುಖರ್ಜಿ ಅವರನ್ನು ಬಂಧಿಸಿತ್ತು.

ಈ ಹಿಂದೆ ಜುಲೈ 22 ಮತ್ತು ಜುಲೈ 27 ರಂದು ನಡೆಸಿದ ಶೋಧದ ವೇಳೆ ಎರಡು ನಿವೇಶನಗಳಿಂದ ಒಟ್ಟು ₹ 49.80 ಕೋಟಿ ನಗದು ಮತ್ತು ₹ 5.08 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ ಮತ್ತು ಆಭರಣಗಳು ಸೇರಿದಂತೆ ₹ 103.10 ಕೋಟಿ ಮೌಲ್ಯದ ಆಸ್ತಿ ಇಡಿ ವಶಪಡಿಸಿಕೊಂಡಿತ್ತು.

ಪಶ್ಚಿಮ ಬಂಗಾಳದ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಅಕ್ರಮ ನೇಮಕಾತಿಯಲ್ಲಿ ಹಣದ ಜಾಡು ಹಿಡಿದಿರುವ ಏಜೆನ್ಸಿಯ ತನಿಖೆಗೆ ಸಂಬಂಧಿಸಿದಂತೆ ಚಟರ್ಜಿ ಮತ್ತು ಮುಖರ್ಜಿ ಅವರನ್ನು ಜುಲೈ 23 ರಂದು ಇಡಿ ಬಂಧಿಸಿತ್ತು. ತನಿಖೆಯ ಪ್ರಕಾರ ಈ ನೇಮಕಾತಿಗಳನ್ನು ರಾಜಕೀಯ ಪರಿಗಣನೆಯಿಂದ ಮಾಡಲಾಗಿದೆ.  ಅವರ ಬಂಧನದ ನಂತರ, ಬಂಗಾಳದ ಮಾಜಿ ಶಿಕ್ಷಣ ಸಚಿವರು ಇಡಿ ವಶದಲ್ಲಿದ್ದು ಆಮೇಲೆ  ನ್ಯಾಯಾಂಗ ಬಂಧನದಲ್ಲಿದ್ದರು. ಅಲ್ಲಿ ಸಂಸ್ಥೆಯು ಹಲವಾರು ದಿನಗಳವರೆಗೆ ಅವರನ್ನು ಪ್ರಶ್ನಿಸಿತು. ಅವರ ಬಂಧನದ ನಂತರ, ಚಟರ್ಜಿ ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿತ್ತು. ಶುಕ್ರವಾರ ಕೋಲ್ಕತ್ತಾ ನ್ಯಾಯಾಲಯವು ಚಟರ್ಜಿಯ ಜಾಮೀನನ್ನು ತಿರಸ್ಕರಿಸಿದ್ದು.  ಅವರನ್ನು ಸೆಪ್ಟೆಂಬರ್ 21 ರವರೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಕಸ್ಟಡಿಗೆ ಒಪ್ಪಿಸಿದೆ.

Published On - 2:41 pm, Mon, 19 September 22

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​