AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಸಂಜಯ್ ರಾವತ್ ಆಗಸ್ಟ್ 4ರವರೆಗೆ ಇಡಿ ವಶಕ್ಕೆ; ಮನೆಯೂಟ, ವಕೀಲರ ಭೇಟಿಗೆ ಅನುಮತಿ

ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಇಂದು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ.

Breaking News: ಸಂಜಯ್ ರಾವತ್ ಆಗಸ್ಟ್ 4ರವರೆಗೆ ಇಡಿ ವಶಕ್ಕೆ; ಮನೆಯೂಟ, ವಕೀಲರ ಭೇಟಿಗೆ ಅನುಮತಿ
ಸಂಜಯ್ ರಾವತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 04, 2022 | 2:02 PM

Share

ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ (Sanjay Raut) ಅವರನ್ನು ಇಂದು (ಸೋಮವಾರ) ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು ಆದರೆ ವಿಶೇಷ ನ್ಯಾಯಾಲಯ ಒಪ್ಪಲಿಲ್ಲ ಮತ್ತು 4 ದಿನಗಳ ಕಾಲ ಕಸ್ಟಡಿಗೆ ನೀಡಿತು. ಕಸ್ಟಡಿ ವಿಚಾರಣೆ ಅಗತ್ಯ ಎಂದು ನನಗನಿಸಿದೆ.ಪ್ರವೀಣ್ ರಾವತ್ ವಿರುದ್ಧ ಈ ಹಿಂದೆಯೇ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂಬುದನ್ನು ನಿರ್ಲಕ್ಷಿಸುವಂತಿಲ್ಲ. ಎಲ್ಲವನ್ನೂ  ಈಗಾಗಲೇ ದಾಖಲಿಸಲಾಗಿದ್ದು, ವಿಚಾರಣೆಯಿಂದ ತನಿಖೆವರೆಗೆ ಲಭ್ಯವಾಗಿದೆ. ಸಂಜಯ್ ರಾವತ್ ಅವರ ಪತ್ನಿಯ ಬ್ಯಾಂಕ್  ಖಾತೆಯಲ್ಲಿರುವ ಹಣದ ಬಗ್ಗೆಯೂ ತನಿಖೆ ನಡೆಸಲಾಗುವುದು. ಹಾಗಾಗಿ  ನನ್ನ ಅಭಿಪ್ರಾಯ ಏನೆಂದರೆ ಎಂಟು ದಿನಗಳ ಇಡಿ  ಕಸ್ಟಡಿ ಸಾಧ್ಯವಿಲ್ಲ.  ಅಪರಾಧದ ಬಗ್ಗೆ ವಿಚಾರಣೆ ನಡೆಸಲು ಆಗಸ್ಟ್ 4 ವರೆಗೆ ಆರೋಪಿಯನ್ನು ಕಸ್ಟಡಿಯಲ್ಲಿರಿಸಬಹುದು ಎಂದು  ವಿಶೇಷ ನ್ಯಾಯಮೂರ್ತಿ ಎಂಜಿ ದೇಶಪಾಂಡೆ  ಹೇಳಿದ್ದಾರೆ.

ಮನೆಯೂಟ, ವಕೀಲರನ್ನು ಭೇಟಿ ಮಾಡಲು ಅನುಮತಿ

ಇಡಿ ಕಸ್ಟಡಿಯಲ್ಲಿರುವಾಗ ರಾವತ್ ಅವರಿಗೆ ಮನೆಯೂಟ ಮತ್ತು ವಕೀಲರನ್ನು ಭೇಟಿ ಮಾಡಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

ಸಂಜಯ್ ರಾವತ್ ಕುಟುಂಬ ಭೇಟಿ ಮಾಡಿದ ಉದ್ಧವ್

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಸಂಜಯ್ ರಾವತ್ ಅವರ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಸಬರ್ ಬನ್ ಮುಂಬೈನ ಭಂದೂಪ್ ನಲ್ಲಿರುವ ರಾವತ್ ಮನೆಗೆ ಸಂಸದ ಅರವಿಂದ್ ಸಾವಂತ್, ಶಾಸಕ ರವೀಂದ್ರ ವೈಕಾರ್ ಮತ್ತು ಶಿವಸೇನಾ ನೇತಾರ ಮಿಲಿಂದ್ ನರ್ವೇಕರ್ ಜತೆಗೆ ಠಾಕ್ರೆ ಭೇಟಿ ನೀಡಿದ್ದಾರೆ.

ಏನಿದು ಪ್ರಕರಣ?

ಮುಂಬೈನ ಪತ್ರಾ ಚಾವ್ಲ್ ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವ ಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿದೆ. 1,034 ಕೋಟಿ ರೂ. ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನು ಈ ಹಿಂದೆ 2 ಬಾರಿ ವಿಚಾರಣೆ ನಡೆಸಲಾಗಿತ್ತು. ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ 9 ಗಂಟೆಗಳ ಕಾಲ ವಿಚಾರಣೆಯ ನಂತರ 60 ವರ್ಷದ ಸಂಜಯ್ ರಾವತ್ ಅವರನ್ನು ಬಂಧಿಸಲಾಯಿತು. ಸೋಮವಾರ ಮಧ್ಯರಾತ್ರಿ 12:05 ಗಂಟೆಗೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಅವರು ತನಿಖೆಗೆ ಸಹಕರಿಸದ ಕಾರಣ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 4:48 pm, Mon, 1 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ