AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಸಂಜಯ್ ರಾವತ್ ಆಗಸ್ಟ್ 4ರವರೆಗೆ ಇಡಿ ವಶಕ್ಕೆ; ಮನೆಯೂಟ, ವಕೀಲರ ಭೇಟಿಗೆ ಅನುಮತಿ

ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಇಂದು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ.

Breaking News: ಸಂಜಯ್ ರಾವತ್ ಆಗಸ್ಟ್ 4ರವರೆಗೆ ಇಡಿ ವಶಕ್ಕೆ; ಮನೆಯೂಟ, ವಕೀಲರ ಭೇಟಿಗೆ ಅನುಮತಿ
ಸಂಜಯ್ ರಾವತ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 04, 2022 | 2:02 PM

Share

ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ (Sanjay Raut) ಅವರನ್ನು ಇಂದು (ಸೋಮವಾರ) ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು ಆದರೆ ವಿಶೇಷ ನ್ಯಾಯಾಲಯ ಒಪ್ಪಲಿಲ್ಲ ಮತ್ತು 4 ದಿನಗಳ ಕಾಲ ಕಸ್ಟಡಿಗೆ ನೀಡಿತು. ಕಸ್ಟಡಿ ವಿಚಾರಣೆ ಅಗತ್ಯ ಎಂದು ನನಗನಿಸಿದೆ.ಪ್ರವೀಣ್ ರಾವತ್ ವಿರುದ್ಧ ಈ ಹಿಂದೆಯೇ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂಬುದನ್ನು ನಿರ್ಲಕ್ಷಿಸುವಂತಿಲ್ಲ. ಎಲ್ಲವನ್ನೂ  ಈಗಾಗಲೇ ದಾಖಲಿಸಲಾಗಿದ್ದು, ವಿಚಾರಣೆಯಿಂದ ತನಿಖೆವರೆಗೆ ಲಭ್ಯವಾಗಿದೆ. ಸಂಜಯ್ ರಾವತ್ ಅವರ ಪತ್ನಿಯ ಬ್ಯಾಂಕ್  ಖಾತೆಯಲ್ಲಿರುವ ಹಣದ ಬಗ್ಗೆಯೂ ತನಿಖೆ ನಡೆಸಲಾಗುವುದು. ಹಾಗಾಗಿ  ನನ್ನ ಅಭಿಪ್ರಾಯ ಏನೆಂದರೆ ಎಂಟು ದಿನಗಳ ಇಡಿ  ಕಸ್ಟಡಿ ಸಾಧ್ಯವಿಲ್ಲ.  ಅಪರಾಧದ ಬಗ್ಗೆ ವಿಚಾರಣೆ ನಡೆಸಲು ಆಗಸ್ಟ್ 4 ವರೆಗೆ ಆರೋಪಿಯನ್ನು ಕಸ್ಟಡಿಯಲ್ಲಿರಿಸಬಹುದು ಎಂದು  ವಿಶೇಷ ನ್ಯಾಯಮೂರ್ತಿ ಎಂಜಿ ದೇಶಪಾಂಡೆ  ಹೇಳಿದ್ದಾರೆ.

ಮನೆಯೂಟ, ವಕೀಲರನ್ನು ಭೇಟಿ ಮಾಡಲು ಅನುಮತಿ

ಇಡಿ ಕಸ್ಟಡಿಯಲ್ಲಿರುವಾಗ ರಾವತ್ ಅವರಿಗೆ ಮನೆಯೂಟ ಮತ್ತು ವಕೀಲರನ್ನು ಭೇಟಿ ಮಾಡಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

ಸಂಜಯ್ ರಾವತ್ ಕುಟುಂಬ ಭೇಟಿ ಮಾಡಿದ ಉದ್ಧವ್

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಸಂಜಯ್ ರಾವತ್ ಅವರ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಸಬರ್ ಬನ್ ಮುಂಬೈನ ಭಂದೂಪ್ ನಲ್ಲಿರುವ ರಾವತ್ ಮನೆಗೆ ಸಂಸದ ಅರವಿಂದ್ ಸಾವಂತ್, ಶಾಸಕ ರವೀಂದ್ರ ವೈಕಾರ್ ಮತ್ತು ಶಿವಸೇನಾ ನೇತಾರ ಮಿಲಿಂದ್ ನರ್ವೇಕರ್ ಜತೆಗೆ ಠಾಕ್ರೆ ಭೇಟಿ ನೀಡಿದ್ದಾರೆ.

ಏನಿದು ಪ್ರಕರಣ?

ಮುಂಬೈನ ಪತ್ರಾ ಚಾವ್ಲ್ ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವ ಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿದೆ. 1,034 ಕೋಟಿ ರೂ. ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನು ಈ ಹಿಂದೆ 2 ಬಾರಿ ವಿಚಾರಣೆ ನಡೆಸಲಾಗಿತ್ತು. ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ 9 ಗಂಟೆಗಳ ಕಾಲ ವಿಚಾರಣೆಯ ನಂತರ 60 ವರ್ಷದ ಸಂಜಯ್ ರಾವತ್ ಅವರನ್ನು ಬಂಧಿಸಲಾಯಿತು. ಸೋಮವಾರ ಮಧ್ಯರಾತ್ರಿ 12:05 ಗಂಟೆಗೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಅವರು ತನಿಖೆಗೆ ಸಹಕರಿಸದ ಕಾರಣ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 4:48 pm, Mon, 1 August 22

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ