AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಆರೋಪ: ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚನೆ

K Surendran: ಈ ತಿಂಗಳ ಆರಂಭದಲ್ಲಿ ಜೆಆರ್‌ಎಸ್ ರಾಜ್ಯ ಖಜಾಂಚಿ ಪ್ರಸೀದಾ ಅಳಿಕ್ಕೋಡ್ ಅವರು ಚುನಾವಣೆಗೆ ಮುನ್ನ ಎನ್‌ಡಿಎಗೆ ಮರಳಲು ಜಾನು ಸುರೇಂದ್ರನ್ ಅವರಿಂದ 10 ಕೋಟಿ ರೂ ಬೇಡಿಕೆ ಒಡ್ಡಿದ್ದರು. ಕೊನೆಗೆ ಸುರೇಂದ್ರನ್ ಜಾನುಗೆ 10 ಲಕ್ಷ ರೂಪಾಯಿಗಳನ್ನು ನೀಡಿದರು. ನಂತರ ಅವರು ವಯನಾಡಿನ ಸುಲ್ತಾನ್ ಬತ್ತೇರಿಯಿಂದ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದರು, ಆದರೆ ಅವರು ಅಲ್ಲಿ ಪರಾಭವಗೊಂಡರು.

ಲಂಚ ಆರೋಪ: ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚನೆ
ಕೆ.ಸುರೇಂದ್ರನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 17, 2021 | 4:17 PM

ವಯನಾಡ್: ಲಂಚ ಸೇರಿದಂತೆ ವಿವಿಧ ಆರೋಪಗಳ ಮೇಲೆ ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಜನಾಧಿಪತ್ಯ ರಾಷ್ಟ್ರೀಯ ಸಭಾ (JRS) ನಾಯಕಿ ಸಿ ಕೆ ಜಾನು ವಿರುದ್ಧ ಪ್ರಕರಣ ದಾಖಲಿಸುವಂತೆ ವಯನಾಡ್ ನ ನ್ಯಾಯಾಲಯ ಬುಧವಾರ ಪೊಲೀಸರಿಗೆ ಸೂಚಿಸಿದೆ. ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ಸುರೇಂದ್ರನ್ ಅವರು ಎನ್‌ಡಿಎಗೆ ಮರಳಲು ಜಾನುಗೆ 10 ಲಕ್ಷ ರೂಪಾಯಿಗಳನ್ನು ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷ ಪಿ ಕೆ ನವಾಸ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿಜ ವಯನಾಡ್ ನ ಕಲ್ಪೆಟ್ಟಾದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈ ಆದೇಶ ನೀಡಿದೆ. ಐಪಿಸಿ ಸೆಕ್ಷನ್ಸ್ 171 ಬಿ (ಯಾವುದೇ ಚುನಾವಣಾ ಹಕ್ಕನ್ನು ಚಲಾಯಿಸಲು ಅವನನ್ನು ಅಥವಾ ಇನ್ನಾವುದೇ ವ್ಯಕ್ತಿಯನ್ನು ಪ್ರೇರೇಪಿಸುವ ಉದ್ದೇಶದಿಂದ ಯಾವುದೇ ವ್ಯಕ್ತಿಗೆ ಲಂಚ ), 171 ಇ (ಲಂಚ) ಮತ್ತು 171 ಎಫ್ (ಅನಗತ್ಯ ಪ್ರಭಾವ ಅಥವಾ ವ್ಯಕ್ತಿತ್ವ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಈ ಹಿಂದೆ ಅರ್ಜಿದಾರರು ಸುರೇಂದ್ರನ್ ಮತ್ತು ಜಾನು ವಿರುದ್ಧ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಸಂಪರ್ಕಿಸಿದ್ದರು. ಯಾವುದೇ ಪ್ರಕರಣ ದಾಖಲಾಗದ ಕಾರಣ ಅವರು ನ್ಯಾಯಾಲಯವನ್ನು ಸಂಪರ್ಕಿಸಿದರು.

ಈ ತಿಂಗಳ ಆರಂಭದಲ್ಲಿ, ಜೆಆರ್‌ಎಸ್ ರಾಜ್ಯ ಖಜಾಂಚಿ ಪ್ರಸೀದಾ ಅಳಿಕ್ಕೋಡ್ ಅವರು ಚುನಾವಣೆಗೆ ಮುನ್ನ ಎನ್‌ಡಿಎಗೆ ಮರಳಲು ಜಾನು ಸುರೇಂದ್ರನ್ ಅವರಿಂದ 10 ಕೋಟಿ ರೂ ಬೇಡಿಕೆ ಒಡ್ಡಿದ್ದರು. ಕೊನೆಗೆ ಸುರೇಂದ್ರನ್ ಜಾನುಗೆ 10 ಲಕ್ಷ ರೂಪಾಯಿಗಳನ್ನು ನೀಡಿದರು. ನಂತರ ಅವರು ವಯನಾಡಿನ ಸುಲ್ತಾನ್ ಬತ್ತೇರಿಯಿಂದ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದರು, ಆದರೆ ಅವರು ಅಲ್ಲಿ ಪರಾಭವಗೊಂಡರು.

ಈ ಡೀಲ್ ಬಗ್ಗೆ ಸುರೇಂದ್ರನ್ ಮತ್ತು ಪ್ರಸೀದಾ ನಡುವಿನ ಉದ್ದೇಶಿತ ಸಂಭಾಷಣೆಯ ಆಡಿಯೊ ಕ್ಲಿಪ್ ಎಲ್ಲೆಡೆ ಪ್ರಸಾರವಾಗಿತ್ತು.

ಸುರೇಂದ್ರನ್ ಮತ್ತು ಜಾನು ಇಬ್ಬರೂ ಆರೋಪಗಳನ್ನು ನಿರಾಕರಿಸಿದ್ದರೂ ಪ್ರಸೀದಾ ಅಳಿಕ್ಕೋಡ್ ಸಂಭಾಷಣೆಯ ಹೆಚ್ಚಿನ ಆಡಿಯೋ ತುಣುಕುಗಳನ್ನು ಬಿಡುಗಡೆ ಮಾಡಿದರು. ಒಂದು ಆಡಿಯೊ ಕ್ಲಿಪ್‌ನಲ್ಲಿ, ಜಾನು ತಮ್ಮ ಒಪ್ಪಂದವನ್ನು ತಮ್ಮ ಪಕ್ಷದ ಸಹೋದ್ಯೋಗಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಪಿ.ಕೆ.ಕೃಷ್ಣ ದಾಸ್ ಅವರಿಗೆ ಬಹಿರಂಗಪಡಿಸುತ್ತಾರೆಯೇ ಎಂದು ಅಳಿಕ್ಕೋಡ್ ಅವರಲ್ಲಿ ಸುರೇಂದ್ರನ್ ಕೇಳಿದ್ದಾರೆ.

ಕಳೆದ ವಾರ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಹಿಂತೆಗೆದುಕೊಳ್ಳಲು ಬಿಎಸ್ಪಿ ಅಭ್ಯರ್ಥಿ ಕೆ ಸುಂದರ ಅವರಿಗೆ ಲಂಚ ನೀಡಿದ ಆರೋಪದ ಮೇಲೆ ಕಾಸರಗೋಡಿನ ಪೊಲೀಸರು ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸುರೇಂದ್ರನ್ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಾಮಪತ್ರ ಹಿಂತೆಗೆದುಕೊಂಡು ಬಿಜೆಪಿಗೆ ಸೇರಿದ ಸುಂದರ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು 2.5 ಲಕ್ಷ ರೂ. ನೀಡಿದ್ದರು.

ಏತನ್ಮಧ್ಯೆ, ವಿಧಾನಸಭಾ ಚುನಾವಣೆಗೆ ಮೂರು ದಿನಗಳ ಮೊದಲು ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ಆ ಹಣ ಬಿಜೆಪಿಗೆ ಸೇರಿದೆ ಎಂದು ತ್ರಿಶೂರ್ ಪೊಲೀಸರು ನ್ಯಾಯಾಲಯದಲ್ಲಿ ಹೇಳಿಕೆ ಸಲ್ಲಿಸಿದ್ದಾರೆ. ಈವರೆಗೆ ವಶಪಡಿಸಿಕೊಂಡ ಹಣವನ್ನು ಬಿಡುಗಡೆ ಮಾಡಲು ನ್ಯಾಯಾಲಯದ ನಿರ್ದೇಶನವನ್ನು ಕೋರಿ ಆರ್‌ಎಸ್‌ಎಸ್ ಕಾರ್ಯಕರ್ತ ಎ.ಕೆ ಧರ್ಮರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಪೊಲೀಸರು ಪ್ರಶ್ನಿಸಿದ್ದಾರೆ.

ಹಣ ಸರಬರಾಜು ಮಾಡಿದ ವಾಹನದ ಚಾಲಕನ ಪ್ರಕಾರ, ಹಣ ಧರ್ಮರಾಜನ್‌ಗೆ ಸೇರಿದೆ. 25 ಲಕ್ಷ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂದು ಚಾಲಕ ತನ್ನ ದೂರಿನಲ್ಲಿ ಹೇಳಿದರೆ, ಪೊಲೀಸರು ಈವರೆಗೆ 1.25 ಕೋಟಿ ರೂ ವಶಪಡಿಸಿಕೊಂಡಿದ್ದಾರೆ. ತಮ್ಮ ಅರ್ಜಿಯಲ್ಲಿ ಧರ್ಮರಾಜನ್ ಅವರು 3.5 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ ಮತ್ತು ಹಣವು ಅವರಿಗೆ ಸೇರಿದೆ ಎಂದು ಹೇಳಿದ್ದಾರೆ.

ಈ ಹಣ ಬಿಜೆಪಿಗೆ ಸೇರಿದ್ದು, ಕರ್ನಾಟಕದಿಂದ ಬಿಜೆಪಿ ಆಲಪ್ಪುಳ ಜಿಲ್ಲಾ ಖಜಾಂಚಿ ಕೆ ಜಿ ಕಾರ್ತಾ ಅವರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಹಣವನ್ನು ತರಲು ಧರ್ಮರಾಜನ್ ಹವಾಲಾ ಮಾರ್ಗವನ್ನು ಆಶ್ರಯಿಸಿದ್ದಾರೆ ಎಂದು ಪೊಲೀಸ್ ವರದಿ ತಿಳಿಸಿದೆ. ಜೂನ್ 23 ರಂದು ಧರ್ಮರಾಜನ್ ಅವರ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಲಿದೆ.

ಇದನ್ನು ಓದಿ:  ಕೇರಳದ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಲು ಕಾಸರಗೋಡು ನ್ಯಾಯಾಲಯ ಅನುಮತಿ

(Bribery Case court in Wayanad directed the police to register a case against Kerala BJP chief K Surendran )

Published On - 4:14 pm, Thu, 17 June 21

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್