AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ವಧು..ಆಕೆಗೆ ಸಹಾಯ ಮಾಡಿದ ಚಿಕ್ಕಪ್ಪನ ವಿರುದ್ಧ ಎಫ್​ಐಆರ್​

ವಿಡಿಯೋ ವ್ಯಾಪಕವಾಗಿ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ.

Viral Video: ಮದುವೆ ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ವಧು..ಆಕೆಗೆ ಸಹಾಯ ಮಾಡಿದ ಚಿಕ್ಕಪ್ಪನ ವಿರುದ್ಧ ಎಫ್​ಐಆರ್​
ಉತ್ತರ ಪ್ರದೇಶದಲ್ಲೊಂದು ವಿಭಿನ್ನ ಮದುವೆ
TV9 Web
| Edited By: |

Updated on:Jun 02, 2021 | 5:21 PM

Share

ಈ ಜನ ಡಿಫರೆಂಟ್​ ಆಗಿ ಏನೇನೆಲ್ಲ ಮಾಡೋಕೆ ಹೋಗ್ತಾರೋ..! ಇಲ್ಲೊಬ್ಬಳು ವಧು, ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡಲು ಹೋಗಿ ಇದೀಗ ಆಕೆಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಅಷ್ಟೇ ಅಲ್ಲ, ಅವಳ ಚಿಕ್ಕಪ್ಪನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮದುವೆ ಸ್ಪೆಶಲ್​ ಆಗಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಹಾಗೇ ಈ ವಧು ತಾನು ಮಂಟಪಕ್ಕೆ ಇನ್ನಷ್ಟು ವಿಭಿನ್ನವಾಗಿ ಪ್ರವೇಶಿಸಬೇಕು ಎಂದು ಬಯಸಿ ಬರುಬರುತ್ತಲೇ ಗನ್​​ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಉತ್ತರಪ್ರದೇಶದ ಪ್ರತಾಪ್​ಗಢ್​ನ ಜೇತ್ವಾರಾ ಎಂಬಲ್ಲಿ ಘಟನೆ ನಡೆದಿದೆ. ತನ್ನ ಮದುವೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ವಧು ಇದೀಗ ಪೊಲೀಸ್​ ಕೇಸ್ ಎದುರಿಸುವಂತಾಗಿದೆ. ಯುವತಿಯ ಹೆಸರು ರೂಪಾ ಪಾಂಡೆ.

ವರನೊಂದಿಗೆ ಮಂಟಪವಿದ್ದ ವೇದಿಕೆಗೆ ಬರುತ್ತಾಳೆ. ಆ ಹೊತ್ತಲ್ಲಿ ಆಕೆಯ ಚಿಕ್ಕಪ್ಪ ರಾಮ್​ನಿವಾಸ್ ಪಾಂಡೆ ಅವಳ ಕೈಗೆ ರಿವಾಲ್ವರ್​ನ್ನು ನೀಡುತ್ತಾರೆ. ಅದನ್ನು ತೆಗೆದುಕೊಂಡ ರೂಪಾ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ. ಇದು ಲೈಸೆನ್ಸ್ ಇರುವ ರಿವಾಲ್ವರ್​ ಆಗಿದ್ದು, ಆಕೆ ಶೂಟ್ ಮಾಡುತ್ತಿದ್ದಂತೆ ನೆರೆದಿದ್ದ ಅತಿಥಿಗಳೆಲ್ಲ ಫುಲ್ ಖುಷಿಯಿಂದ ಚಿಯರ್ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಡಿಯೋ ವ್ಯಾಪಕವಾಗಿ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ ಆರೋಪದಡಿ ವಧು ಮತ್ತು ಆಕೆಯ ಚಿಕ್ಕಪ್ಪನ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ.

ಬರೀ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರ ಬಳಕೆ ಮಾಡಿದ್ದಷ್ಟೇ ಅಲ್ಲದೆ, ಕೊವಿಡ್​ 19 ಮಧ್ಯೆ ವಿವಾಹದಲ್ಲಿ ಹಲವು ಜನ ಸೇರುವ ಮೂಲಕ ಕೊರೊನಾ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದೂ ಕೇಸ್​​ನಲ್ಲಿ ಉಲ್ಲೇಖಿಸಿದ್ದಾರೆ. ಪೊಲೀಸರು ಆ ರಿವಾಲ್ವರ್​​ಗೆ ನೀಡಿದ್ದ ಲೈಸೆನ್ಸ್ ಕ್ಯಾನ್ಸಲ್​ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಬಿಮ್ಸ್​ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ಸಹೋದ್ಯೋಗಿಗಳ ಅಸಹಕಾರ: ದೀರ್ಘಾವಧಿ ರಜೆ ಹಾಕಿ ತೆರಳಿದ ನಿರ್ದೇಶಕ

Published On - 5:18 pm, Wed, 2 June 21

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ