AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ವಧು..ಆಕೆಗೆ ಸಹಾಯ ಮಾಡಿದ ಚಿಕ್ಕಪ್ಪನ ವಿರುದ್ಧ ಎಫ್​ಐಆರ್​

ವಿಡಿಯೋ ವ್ಯಾಪಕವಾಗಿ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ.

Viral Video: ಮದುವೆ ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ವಧು..ಆಕೆಗೆ ಸಹಾಯ ಮಾಡಿದ ಚಿಕ್ಕಪ್ಪನ ವಿರುದ್ಧ ಎಫ್​ಐಆರ್​
ಉತ್ತರ ಪ್ರದೇಶದಲ್ಲೊಂದು ವಿಭಿನ್ನ ಮದುವೆ
TV9 Web
| Edited By: |

Updated on:Jun 02, 2021 | 5:21 PM

Share

ಈ ಜನ ಡಿಫರೆಂಟ್​ ಆಗಿ ಏನೇನೆಲ್ಲ ಮಾಡೋಕೆ ಹೋಗ್ತಾರೋ..! ಇಲ್ಲೊಬ್ಬಳು ವಧು, ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡಲು ಹೋಗಿ ಇದೀಗ ಆಕೆಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಅಷ್ಟೇ ಅಲ್ಲ, ಅವಳ ಚಿಕ್ಕಪ್ಪನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮದುವೆ ಸ್ಪೆಶಲ್​ ಆಗಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಹಾಗೇ ಈ ವಧು ತಾನು ಮಂಟಪಕ್ಕೆ ಇನ್ನಷ್ಟು ವಿಭಿನ್ನವಾಗಿ ಪ್ರವೇಶಿಸಬೇಕು ಎಂದು ಬಯಸಿ ಬರುಬರುತ್ತಲೇ ಗನ್​​ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಉತ್ತರಪ್ರದೇಶದ ಪ್ರತಾಪ್​ಗಢ್​ನ ಜೇತ್ವಾರಾ ಎಂಬಲ್ಲಿ ಘಟನೆ ನಡೆದಿದೆ. ತನ್ನ ಮದುವೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ವಧು ಇದೀಗ ಪೊಲೀಸ್​ ಕೇಸ್ ಎದುರಿಸುವಂತಾಗಿದೆ. ಯುವತಿಯ ಹೆಸರು ರೂಪಾ ಪಾಂಡೆ.

ವರನೊಂದಿಗೆ ಮಂಟಪವಿದ್ದ ವೇದಿಕೆಗೆ ಬರುತ್ತಾಳೆ. ಆ ಹೊತ್ತಲ್ಲಿ ಆಕೆಯ ಚಿಕ್ಕಪ್ಪ ರಾಮ್​ನಿವಾಸ್ ಪಾಂಡೆ ಅವಳ ಕೈಗೆ ರಿವಾಲ್ವರ್​ನ್ನು ನೀಡುತ್ತಾರೆ. ಅದನ್ನು ತೆಗೆದುಕೊಂಡ ರೂಪಾ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ. ಇದು ಲೈಸೆನ್ಸ್ ಇರುವ ರಿವಾಲ್ವರ್​ ಆಗಿದ್ದು, ಆಕೆ ಶೂಟ್ ಮಾಡುತ್ತಿದ್ದಂತೆ ನೆರೆದಿದ್ದ ಅತಿಥಿಗಳೆಲ್ಲ ಫುಲ್ ಖುಷಿಯಿಂದ ಚಿಯರ್ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಡಿಯೋ ವ್ಯಾಪಕವಾಗಿ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ ಆರೋಪದಡಿ ವಧು ಮತ್ತು ಆಕೆಯ ಚಿಕ್ಕಪ್ಪನ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ.

ಬರೀ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರ ಬಳಕೆ ಮಾಡಿದ್ದಷ್ಟೇ ಅಲ್ಲದೆ, ಕೊವಿಡ್​ 19 ಮಧ್ಯೆ ವಿವಾಹದಲ್ಲಿ ಹಲವು ಜನ ಸೇರುವ ಮೂಲಕ ಕೊರೊನಾ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದೂ ಕೇಸ್​​ನಲ್ಲಿ ಉಲ್ಲೇಖಿಸಿದ್ದಾರೆ. ಪೊಲೀಸರು ಆ ರಿವಾಲ್ವರ್​​ಗೆ ನೀಡಿದ್ದ ಲೈಸೆನ್ಸ್ ಕ್ಯಾನ್ಸಲ್​ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಬಿಮ್ಸ್​ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ಸಹೋದ್ಯೋಗಿಗಳ ಅಸಹಕಾರ: ದೀರ್ಘಾವಧಿ ರಜೆ ಹಾಕಿ ತೆರಳಿದ ನಿರ್ದೇಶಕ

Published On - 5:18 pm, Wed, 2 June 21

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ