Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ವಧು..ಆಕೆಗೆ ಸಹಾಯ ಮಾಡಿದ ಚಿಕ್ಕಪ್ಪನ ವಿರುದ್ಧ ಎಫ್​ಐಆರ್​

ವಿಡಿಯೋ ವ್ಯಾಪಕವಾಗಿ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ.

Viral Video: ಮದುವೆ ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ವಧು..ಆಕೆಗೆ ಸಹಾಯ ಮಾಡಿದ ಚಿಕ್ಕಪ್ಪನ ವಿರುದ್ಧ ಎಫ್​ಐಆರ್​
ಉತ್ತರ ಪ್ರದೇಶದಲ್ಲೊಂದು ವಿಭಿನ್ನ ಮದುವೆ
Follow us
TV9 Web
| Updated By: Lakshmi Hegde

Updated on:Jun 02, 2021 | 5:21 PM

ಈ ಜನ ಡಿಫರೆಂಟ್​ ಆಗಿ ಏನೇನೆಲ್ಲ ಮಾಡೋಕೆ ಹೋಗ್ತಾರೋ..! ಇಲ್ಲೊಬ್ಬಳು ವಧು, ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡಲು ಹೋಗಿ ಇದೀಗ ಆಕೆಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಅಷ್ಟೇ ಅಲ್ಲ, ಅವಳ ಚಿಕ್ಕಪ್ಪನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮದುವೆ ಸ್ಪೆಶಲ್​ ಆಗಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಹಾಗೇ ಈ ವಧು ತಾನು ಮಂಟಪಕ್ಕೆ ಇನ್ನಷ್ಟು ವಿಭಿನ್ನವಾಗಿ ಪ್ರವೇಶಿಸಬೇಕು ಎಂದು ಬಯಸಿ ಬರುಬರುತ್ತಲೇ ಗನ್​​ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಉತ್ತರಪ್ರದೇಶದ ಪ್ರತಾಪ್​ಗಢ್​ನ ಜೇತ್ವಾರಾ ಎಂಬಲ್ಲಿ ಘಟನೆ ನಡೆದಿದೆ. ತನ್ನ ಮದುವೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ವಧು ಇದೀಗ ಪೊಲೀಸ್​ ಕೇಸ್ ಎದುರಿಸುವಂತಾಗಿದೆ. ಯುವತಿಯ ಹೆಸರು ರೂಪಾ ಪಾಂಡೆ.

ವರನೊಂದಿಗೆ ಮಂಟಪವಿದ್ದ ವೇದಿಕೆಗೆ ಬರುತ್ತಾಳೆ. ಆ ಹೊತ್ತಲ್ಲಿ ಆಕೆಯ ಚಿಕ್ಕಪ್ಪ ರಾಮ್​ನಿವಾಸ್ ಪಾಂಡೆ ಅವಳ ಕೈಗೆ ರಿವಾಲ್ವರ್​ನ್ನು ನೀಡುತ್ತಾರೆ. ಅದನ್ನು ತೆಗೆದುಕೊಂಡ ರೂಪಾ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ. ಇದು ಲೈಸೆನ್ಸ್ ಇರುವ ರಿವಾಲ್ವರ್​ ಆಗಿದ್ದು, ಆಕೆ ಶೂಟ್ ಮಾಡುತ್ತಿದ್ದಂತೆ ನೆರೆದಿದ್ದ ಅತಿಥಿಗಳೆಲ್ಲ ಫುಲ್ ಖುಷಿಯಿಂದ ಚಿಯರ್ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಡಿಯೋ ವ್ಯಾಪಕವಾಗಿ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ ಆರೋಪದಡಿ ವಧು ಮತ್ತು ಆಕೆಯ ಚಿಕ್ಕಪ್ಪನ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ.

ಬರೀ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರ ಬಳಕೆ ಮಾಡಿದ್ದಷ್ಟೇ ಅಲ್ಲದೆ, ಕೊವಿಡ್​ 19 ಮಧ್ಯೆ ವಿವಾಹದಲ್ಲಿ ಹಲವು ಜನ ಸೇರುವ ಮೂಲಕ ಕೊರೊನಾ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದೂ ಕೇಸ್​​ನಲ್ಲಿ ಉಲ್ಲೇಖಿಸಿದ್ದಾರೆ. ಪೊಲೀಸರು ಆ ರಿವಾಲ್ವರ್​​ಗೆ ನೀಡಿದ್ದ ಲೈಸೆನ್ಸ್ ಕ್ಯಾನ್ಸಲ್​ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಬಿಮ್ಸ್​ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ಸಹೋದ್ಯೋಗಿಗಳ ಅಸಹಕಾರ: ದೀರ್ಘಾವಧಿ ರಜೆ ಹಾಕಿ ತೆರಳಿದ ನಿರ್ದೇಶಕ

Published On - 5:18 pm, Wed, 2 June 21

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ