AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ವಧು..ಆಕೆಗೆ ಸಹಾಯ ಮಾಡಿದ ಚಿಕ್ಕಪ್ಪನ ವಿರುದ್ಧ ಎಫ್​ಐಆರ್​

ವಿಡಿಯೋ ವ್ಯಾಪಕವಾಗಿ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ.

Viral Video: ಮದುವೆ ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ವಧು..ಆಕೆಗೆ ಸಹಾಯ ಮಾಡಿದ ಚಿಕ್ಕಪ್ಪನ ವಿರುದ್ಧ ಎಫ್​ಐಆರ್​
ಉತ್ತರ ಪ್ರದೇಶದಲ್ಲೊಂದು ವಿಭಿನ್ನ ಮದುವೆ
TV9 Web
| Edited By: |

Updated on:Jun 02, 2021 | 5:21 PM

Share

ಈ ಜನ ಡಿಫರೆಂಟ್​ ಆಗಿ ಏನೇನೆಲ್ಲ ಮಾಡೋಕೆ ಹೋಗ್ತಾರೋ..! ಇಲ್ಲೊಬ್ಬಳು ವಧು, ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡಲು ಹೋಗಿ ಇದೀಗ ಆಕೆಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಅಷ್ಟೇ ಅಲ್ಲ, ಅವಳ ಚಿಕ್ಕಪ್ಪನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮದುವೆ ಸ್ಪೆಶಲ್​ ಆಗಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಹಾಗೇ ಈ ವಧು ತಾನು ಮಂಟಪಕ್ಕೆ ಇನ್ನಷ್ಟು ವಿಭಿನ್ನವಾಗಿ ಪ್ರವೇಶಿಸಬೇಕು ಎಂದು ಬಯಸಿ ಬರುಬರುತ್ತಲೇ ಗನ್​​ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಉತ್ತರಪ್ರದೇಶದ ಪ್ರತಾಪ್​ಗಢ್​ನ ಜೇತ್ವಾರಾ ಎಂಬಲ್ಲಿ ಘಟನೆ ನಡೆದಿದೆ. ತನ್ನ ಮದುವೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ವಧು ಇದೀಗ ಪೊಲೀಸ್​ ಕೇಸ್ ಎದುರಿಸುವಂತಾಗಿದೆ. ಯುವತಿಯ ಹೆಸರು ರೂಪಾ ಪಾಂಡೆ.

ವರನೊಂದಿಗೆ ಮಂಟಪವಿದ್ದ ವೇದಿಕೆಗೆ ಬರುತ್ತಾಳೆ. ಆ ಹೊತ್ತಲ್ಲಿ ಆಕೆಯ ಚಿಕ್ಕಪ್ಪ ರಾಮ್​ನಿವಾಸ್ ಪಾಂಡೆ ಅವಳ ಕೈಗೆ ರಿವಾಲ್ವರ್​ನ್ನು ನೀಡುತ್ತಾರೆ. ಅದನ್ನು ತೆಗೆದುಕೊಂಡ ರೂಪಾ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ. ಇದು ಲೈಸೆನ್ಸ್ ಇರುವ ರಿವಾಲ್ವರ್​ ಆಗಿದ್ದು, ಆಕೆ ಶೂಟ್ ಮಾಡುತ್ತಿದ್ದಂತೆ ನೆರೆದಿದ್ದ ಅತಿಥಿಗಳೆಲ್ಲ ಫುಲ್ ಖುಷಿಯಿಂದ ಚಿಯರ್ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಡಿಯೋ ವ್ಯಾಪಕವಾಗಿ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ ಆರೋಪದಡಿ ವಧು ಮತ್ತು ಆಕೆಯ ಚಿಕ್ಕಪ್ಪನ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ.

ಬರೀ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರ ಬಳಕೆ ಮಾಡಿದ್ದಷ್ಟೇ ಅಲ್ಲದೆ, ಕೊವಿಡ್​ 19 ಮಧ್ಯೆ ವಿವಾಹದಲ್ಲಿ ಹಲವು ಜನ ಸೇರುವ ಮೂಲಕ ಕೊರೊನಾ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದೂ ಕೇಸ್​​ನಲ್ಲಿ ಉಲ್ಲೇಖಿಸಿದ್ದಾರೆ. ಪೊಲೀಸರು ಆ ರಿವಾಲ್ವರ್​​ಗೆ ನೀಡಿದ್ದ ಲೈಸೆನ್ಸ್ ಕ್ಯಾನ್ಸಲ್​ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಬಿಮ್ಸ್​ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ಸಹೋದ್ಯೋಗಿಗಳ ಅಸಹಕಾರ: ದೀರ್ಘಾವಧಿ ರಜೆ ಹಾಕಿ ತೆರಳಿದ ನಿರ್ದೇಶಕ

Published On - 5:18 pm, Wed, 2 June 21

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು