AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಗೆ ಗುಂಡು ಹಾರಿಸಿ ಹತ್ಯೆಗೈದ ಮಾಜಿ ಪ್ರಿಯಕರ

ಬ್ಯೂಟಿ ಪಾರ್ಲರ್​ಗೆ ಬಂದ ಮಾಜಿ ಪ್ರಿಯತಮೆಯನ್ನು ಯುವಕನೊಬ್ಬ ಗುಂಡು ಹಾರಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ, ಯುವಕ ಬೆನ್ನಿಗೊಂದು ಬ್ಯಾಗ್ ಹಾಗೂ ಕೈಯಲ್ಲಿ ಪಿಸ್ತೂಲ್ ಹಿಡಿದು ಬ್ಯೂಟಿ ಪಾರ್ಲರ್​ ಒಳಗೆ ಬಂದು ಗುಂಡು ಹಾರಿಸಿದ್ದಾನೆ.

ಮದುವೆ ದಿನ ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಗೆ ಗುಂಡು ಹಾರಿಸಿ ಹತ್ಯೆಗೈದ ಮಾಜಿ ಪ್ರಿಯಕರ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jun 25, 2024 | 2:15 PM

Share

ಮದುವೆ ದಿನ ಸಿಂಗರಿಸಿಕೊಳ್ಳಲೆಂದು ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಯನ್ನು ಮಾಜಿ ಪ್ರಿಯಕರ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ, ಯುವಕ ಬೆನ್ನಿಗೊಂದು ಬ್ಯಾಗ್ ಹಾಗೂ ಕೈಯಲ್ಲಿ ಪಿಸ್ತೂಲ್ ಹಿಡಿದು ಬ್ಯೂಟಿ ಪಾರ್ಲರ್​ ಒಳಗೆ ಬಂದಿದ್ದಾನೆ.

ಆತ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದ, ನಂತರ 32 ಸೆಕೆಂಡುಗಳಲ್ಲಿ ಯುವಕ ಯುವತಿಯ ಎದೆಗೆ ಎರಡು ಬಾರಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಮಧ್ಯಪ್ರದೇಶದ ದಾತಿಯಾ ನಿವಾಸಿ 20 ವರ್ಷದ ಕಾಜಲ್ ಭಾನುವಾರ ವಿವಾಹವಾಗಬೇಕಿತ್ತು, ಪಕ್ಕದ ಮನೆಯ ಯುವಕ ದೀಪಕ್ ಎಂಬಾತ ಆಕೆಯನ್ನು ಇಷ್ಟಪಟ್ಟಿದ್ದ, ಇಬ್ಬರೂ ಮದುವೆಯಾಗಲು ಬಯಸಿದ್ದರು. ಮದುವೆಗೆ ಸ್ವಲ್ಪ ಸಮಯದ ಮೊದಲು ಕಾಜಲ್ ಕೂಡ ದೀಪಕ್ ಜೊತೆ ಓಡಿ ಹೋಗಿದ್ದಳು. ಆದರೆ ನಂತರ ಅವಳು ತನ್ನ ಕುಟುಂಬ ಆಯ್ಕೆ ಮಾಡಿದ ಹುಡುಗನನ್ನು ಮದುವೆಯಾಗುವುದಾಗಿ ಹೇಳಿದಳು.

ನಂತರ ಕುಟುಂಬವು ಕಾಜಲ್ ಮದುವೆಯನ್ನು ಝಾನ್ಸಿಯ ಚಿರ್ಗಾಂವ್‌ನ ಸಿಂತಾರಿ ಗ್ರಾಮದ ನಿವಾಸಿ ರಾಜ್ ಅವರೊಂದಿಗೆ ನಿಶ್ಚಯಿಸಿತು. ಕಾಜಲ್ ತಂದೆ ವರನಿಗೆ 8 ಲಕ್ಷದ 41 ಸಾವಿರ ರೂಪಾಯಿ ಮೌಲ್ಯದ ಕಾರನ್ನು ಸಹ ನೀಡಿದ್ದರು.

ಮತ್ತಷ್ಟು ಓದಿ: ಪ್ರಿಯತಮೆಗೆ ಬಾಡಿಗೆ ಮನೆ ಮಾಡಿಟ್ಟಿದ್ದ: ಆಗಾಗ ಬಂದು ಹೋಗುತ್ತಿದ್ದವ ನಿನ್ನೆ ಕೊಂದು ಹೋದ

ಆದರೆ ಮದುವೆಗೂ ಮುನ್ನ ಕಾಜಲ್ ದೀಪಕ್ ನಿಂದ ಕೊಲೆಯಾಗಿದ್ದಾಳೆ. ಭಾನುವಾರ ಮದುವೆ ಮೆರವಣಿಗೆಗೂ ಮುನ್ನ ರೆಡಿಯಾಗಲು ಕಾಜಲ್ ಬ್ಯೂಟಿ ಪಾರ್ಲರ್‌ಗೆ ಹೋಗಿದ್ದರು. ಅಷ್ಟರಲ್ಲಿ ದೀಪಕ್ ಅಲ್ಲಿಗೆ ಬಂದು ತನ್ನ ಜತೆ ಬರುವಂತೆ ಕೇಳಿದ್ದಾನೆ.

ಆಕೆ ನಿರಾಕರಿಸಿದಾಗ ಎದೆಗೆ ಎರಡು ಬಾರಿ ಗುಂಡು ಹಾರಿಸಿದ್ದಾನೆ. ನೀನು ನನ್ನವಳಾಗದಿದ್ದರೆ ಬೇರೆಯವರಿಗೂ ನಿನ್ನನ್ನು ಸಿಗಲು ಬಿಡುವುದಿಲ್ಲ ಎಂದು ಹೇಳಿ ಹತ್ಯೆ ಮಾಡಿದ್ದಾನೆ, ಕಾಜಲ್ ಅಲ್ಲಿಯೇ ಸಾವನ್ನಪ್ಪಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?