AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಗೆ ಗುಂಡು ಹಾರಿಸಿ ಹತ್ಯೆಗೈದ ಮಾಜಿ ಪ್ರಿಯಕರ

ಬ್ಯೂಟಿ ಪಾರ್ಲರ್​ಗೆ ಬಂದ ಮಾಜಿ ಪ್ರಿಯತಮೆಯನ್ನು ಯುವಕನೊಬ್ಬ ಗುಂಡು ಹಾರಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ, ಯುವಕ ಬೆನ್ನಿಗೊಂದು ಬ್ಯಾಗ್ ಹಾಗೂ ಕೈಯಲ್ಲಿ ಪಿಸ್ತೂಲ್ ಹಿಡಿದು ಬ್ಯೂಟಿ ಪಾರ್ಲರ್​ ಒಳಗೆ ಬಂದು ಗುಂಡು ಹಾರಿಸಿದ್ದಾನೆ.

ಮದುವೆ ದಿನ ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಗೆ ಗುಂಡು ಹಾರಿಸಿ ಹತ್ಯೆಗೈದ ಮಾಜಿ ಪ್ರಿಯಕರ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jun 25, 2024 | 2:15 PM

Share

ಮದುವೆ ದಿನ ಸಿಂಗರಿಸಿಕೊಳ್ಳಲೆಂದು ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಯನ್ನು ಮಾಜಿ ಪ್ರಿಯಕರ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ, ಯುವಕ ಬೆನ್ನಿಗೊಂದು ಬ್ಯಾಗ್ ಹಾಗೂ ಕೈಯಲ್ಲಿ ಪಿಸ್ತೂಲ್ ಹಿಡಿದು ಬ್ಯೂಟಿ ಪಾರ್ಲರ್​ ಒಳಗೆ ಬಂದಿದ್ದಾನೆ.

ಆತ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದ, ನಂತರ 32 ಸೆಕೆಂಡುಗಳಲ್ಲಿ ಯುವಕ ಯುವತಿಯ ಎದೆಗೆ ಎರಡು ಬಾರಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಮಧ್ಯಪ್ರದೇಶದ ದಾತಿಯಾ ನಿವಾಸಿ 20 ವರ್ಷದ ಕಾಜಲ್ ಭಾನುವಾರ ವಿವಾಹವಾಗಬೇಕಿತ್ತು, ಪಕ್ಕದ ಮನೆಯ ಯುವಕ ದೀಪಕ್ ಎಂಬಾತ ಆಕೆಯನ್ನು ಇಷ್ಟಪಟ್ಟಿದ್ದ, ಇಬ್ಬರೂ ಮದುವೆಯಾಗಲು ಬಯಸಿದ್ದರು. ಮದುವೆಗೆ ಸ್ವಲ್ಪ ಸಮಯದ ಮೊದಲು ಕಾಜಲ್ ಕೂಡ ದೀಪಕ್ ಜೊತೆ ಓಡಿ ಹೋಗಿದ್ದಳು. ಆದರೆ ನಂತರ ಅವಳು ತನ್ನ ಕುಟುಂಬ ಆಯ್ಕೆ ಮಾಡಿದ ಹುಡುಗನನ್ನು ಮದುವೆಯಾಗುವುದಾಗಿ ಹೇಳಿದಳು.

ನಂತರ ಕುಟುಂಬವು ಕಾಜಲ್ ಮದುವೆಯನ್ನು ಝಾನ್ಸಿಯ ಚಿರ್ಗಾಂವ್‌ನ ಸಿಂತಾರಿ ಗ್ರಾಮದ ನಿವಾಸಿ ರಾಜ್ ಅವರೊಂದಿಗೆ ನಿಶ್ಚಯಿಸಿತು. ಕಾಜಲ್ ತಂದೆ ವರನಿಗೆ 8 ಲಕ್ಷದ 41 ಸಾವಿರ ರೂಪಾಯಿ ಮೌಲ್ಯದ ಕಾರನ್ನು ಸಹ ನೀಡಿದ್ದರು.

ಮತ್ತಷ್ಟು ಓದಿ: ಪ್ರಿಯತಮೆಗೆ ಬಾಡಿಗೆ ಮನೆ ಮಾಡಿಟ್ಟಿದ್ದ: ಆಗಾಗ ಬಂದು ಹೋಗುತ್ತಿದ್ದವ ನಿನ್ನೆ ಕೊಂದು ಹೋದ

ಆದರೆ ಮದುವೆಗೂ ಮುನ್ನ ಕಾಜಲ್ ದೀಪಕ್ ನಿಂದ ಕೊಲೆಯಾಗಿದ್ದಾಳೆ. ಭಾನುವಾರ ಮದುವೆ ಮೆರವಣಿಗೆಗೂ ಮುನ್ನ ರೆಡಿಯಾಗಲು ಕಾಜಲ್ ಬ್ಯೂಟಿ ಪಾರ್ಲರ್‌ಗೆ ಹೋಗಿದ್ದರು. ಅಷ್ಟರಲ್ಲಿ ದೀಪಕ್ ಅಲ್ಲಿಗೆ ಬಂದು ತನ್ನ ಜತೆ ಬರುವಂತೆ ಕೇಳಿದ್ದಾನೆ.

ಆಕೆ ನಿರಾಕರಿಸಿದಾಗ ಎದೆಗೆ ಎರಡು ಬಾರಿ ಗುಂಡು ಹಾರಿಸಿದ್ದಾನೆ. ನೀನು ನನ್ನವಳಾಗದಿದ್ದರೆ ಬೇರೆಯವರಿಗೂ ನಿನ್ನನ್ನು ಸಿಗಲು ಬಿಡುವುದಿಲ್ಲ ಎಂದು ಹೇಳಿ ಹತ್ಯೆ ಮಾಡಿದ್ದಾನೆ, ಕಾಜಲ್ ಅಲ್ಲಿಯೇ ಸಾವನ್ನಪ್ಪಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ