AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬೇಡವೆಂದು ವರನನ್ನು ಕೊಲ್ಲಲು ಸುಪಾರಿಕೊಟ್ಟ ವಧು

ಮದುವೆಯಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ವರನನ್ನು ಕೊಲ್ಲಲು ಸುಪಾರಿ ಕೊಟ್ಟಿರುವ ಘಟನೆ ಪುಣೆಯಲ್ಲಿ ನಡೆದಿದೆ. ಅಹಲ್ಯಾನಗರದ ಮಯೂರಿ ಸುನಿಲ್ ದಾಂಗ್ಡೆ ಎಂಬ ಆರೋಪಿ, ಮಹಿ ಜಲಗಾಂವ್‌ನ ಸಾಗರ್ ಜಯಸಿಂಗ್ ಕದಮ್ ಅವರನ್ನು ಮದುವೆಯಾಗಬೇಕಿತ್ತು. ಅವರ ನಿಶ್ಚಿತಾರ್ಥ ಮತ್ತು ವಿವಾಹಪೂರ್ವ ಫೋಟೋ ಶೂಟ್ ನಂತರ, ಮಯೂರಿ ಸಾಗರ್ ಅವರನ್ನು ಮದುವೆಯಾಗದಿರಲು ನಿರ್ಧರಿಸಿದ್ದಳು., ಹಾಗಾಗಿ ಆತನನ್ನು ಕೊಲ್ಲಲು ಸುಪಾರಿ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.

ಮದುವೆ ಬೇಡವೆಂದು ವರನನ್ನು ಕೊಲ್ಲಲು ಸುಪಾರಿಕೊಟ್ಟ ವಧು
ಮದುವೆImage Credit source: Business Standard
Follow us
ನಯನಾ ರಾಜೀವ್
|

Updated on: Apr 04, 2025 | 11:35 AM

ಪುಣೆ, ಏಪ್ರಿಲ್ 04: ಮದುವೆ(Marriage) ತಪ್ಪಿಸಲು ಯುವತಿಯೊಬ್ಬಳು ವರನನ್ನು ಕೊಲ್ಲಲು ಸುಪಾರಿ ಕೊಟ್ಟಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದು, ವಧು ಇನ್ನೂ ತಲೆಮರೆಸಿಕೊಂಡಿದ್ದಾಳೆ. ಅಹಲ್ಯಾನಗರದ ಮಯೂರಿ ಸುನಿಲ್ ದಾಂಗ್ಡೆ ಎಂಬ ಆರೋಪಿ, ಮಹಿ ಜಲಗಾಂವ್‌ನ ಸಾಗರ್ ಜಯಸಿಂಗ್ ಕದಮ್ ಅವರನ್ನು ಮದುವೆಯಾಗಬೇಕಿತ್ತು. ಅವರ ನಿಶ್ಚಿತಾರ್ಥ ಮತ್ತು ವಿವಾಹಪೂರ್ವ ಫೋಟೋ ಶೂಟ್ ನಂತರ, ಮಯೂರಿ ಸಾಗರ್ ಅವರನ್ನು ಮದುವೆಯಾಗದಿರಲು ನಿರ್ಧರಿಸಿದ್ದಳು.

ಹಾಗಾಗಿ ಆತನನ್ನು ಕೊಲ್ಲಲು ಸುಪಾರಿ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಮಯೂರಿ ಮತ್ತು ಆಕೆಯ ಸಹಚರ ಸಂದೀಪ್ ಗಾವ್ಡೆ ಸಾಗರ್‌ನನ್ನು ಕೊಲ್ಲಲು 1.50 ಲಕ್ಷ ರೂ.ಗಳನ್ನು ಸುಪಾರಿ ನೀಡಿದ್ದರು ಎಂದು ಆರೋಪಿಸಲಾಗಿದೆ. ಪೊಲೀಸರ ಪ್ರಕಾರ, ಮಾಹಿ ಜಲಗಾಂವ್‌ನ ಹೋಟೆಲ್‌ನಲ್ಲಿ ಅಡುಗೆಯವನಾಗಿ ಕೆಲಸ ಮಾಡುತ್ತಿರುವ ಸಾಗರ್ ಮೇಲೆ ಫೆಬ್ರವರಿ 27 ರಂದು ದೌಂಡ್ ತಾಲೂಕಿನ ಬಳಿ ಹಲ್ಲೆ ನಡೆಸಲಾಯಿತು.

ಹೋಟೆಲ್ ಬಳಿ ಆತನನ್ನು ಕ್ರೂರವಾಗಿ ಥಳಿಸಲಾಯಿತು. ಘಟನೆಯ ನಂತರ, ಯಾವತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲು ಮುರಿದು ತಲೆ ಮತ್ತು ಬೆನ್ನಿಗೆ ಗಾಯಗಳಾಗಿ ಸಾಗರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಇದನ್ನೂ ಓದಿ
Image
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
Image
ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ
Image
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಪತಿ: 5 ವರ್ಷ ಬಳಿಕ ಲವರ್ ಜತೆ ಸಿಕ್ಕ ಪತ್ನಿ
Image
ಪತ್ನಿ ಮೇಲಿನ ಸಿಟ್ಟಿಗೆ ಮೂವರನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮತ್ತಷ್ಟು ಓದಿ: ಮಡಿಕೇರಿ: ಪತ್ನಿಯ ಕೊಲೆಗೆ ಜೈಲುಪಾಲಾಗಿದ್ದ ಪತಿಗೆ ಶಾಕ್, 5 ವರ್ಷದ ಬಳಿಕ ಪ್ರಿಯಕರನ ಜತೆ ರೆಡ್​ಹ್ಯಾಂಡ್ ಆಗಿ ಸಿಕ್ಕ ಹೆಂಡತಿ!

ಪುಣೆ-ಸೋಲಾಪುರ ಹೆದ್ದಾರಿಯಲ್ಲಿ, ಐದು ಜನರು ಸಾಗರ್ ಮೇಲೆ ದಾಳಿ ಮಾಡಿದ್ದಾರೆ. ಪೊಲೀಸ್ ದೂರು ದಾಖಲಾಗಿದೆ, ತನಿಖೆಯಲ್ಲಿ ಆತನನ್ನು ಮದುವೆಯಾಗಬೇಕಿದ್ದವಳೇ  ಕೊಲ್ಲಲು ಅವರನ್ನು ನೇಮಿಸಿಕೊಂಡಿರುವುದು ತಿಳಿದುಬಂದಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

ಅಹಲ್ಯಾನಗರದ ನಿವಾಸಿಗಳಾದ ಆದಿತ್ಯ ಶಂಕರ ದಂಗಡೆ, ಸಂದೀಪ್ ದಾದಾ ಗಾವಡೆ, ಶಿವಾಜಿ ರಾಮದಾಸ್ ಜಾರೆ, ಸೂರಜ್ ದಿಗಂಬರ ಜಾಧವ್ ಮತ್ತು ಇಂದ್ರಭಾನು ಸಖರಾಮ್ ಕೋಲ್ಪೆ ಸೇರಿದಂತೆ ಐವರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಶಂಕಿತರು ತಮ್ಮ ಸಹಚರರೊಂದಿಗೆ ಅಪರಾಧ ಮಾಡಿರುವುದಾಗಿ ಒಪ್ಪಿಕೊಂಡರು. ಯಾವತ್ ಪೊಲೀಸರು ಐದು ಶಂಕಿತರನ್ನು ಬಂಧಿಸಿ ಅಪರಾಧಕ್ಕೆ ಬಳಸಲಾದ ಬಿಳಿ ವೆರ್ನಾ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 109, 61(2), ಮತ್ತು 126(2) ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ