ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!

ತಕ್ಷಣವೇ ಸ್ಥಳಕ್ಕೆ ವೈದ್ಯರನ್ನು ಕರೆಸಲಾಗುತ್ತದೆ. ವಧುವನ್ನು(ಸುರಭಿ) ಪರಿಶೀಲಿಸಿದ ವೈದ್ಯರು ಹೃದಯಾಘಾತದಿಂದ ಸಾವಿಗೀಡಾಗಿರುವ ವಿಷಯ ತಿಳಿಸುತ್ತಾರೆ. ಆದರೆ, ಎರಡೂ ಕುಟುಂಬದವರು ರಾಜಿ ಮಾಡಿಕೊಂಡು ಮಧುವಿನ ಸಹೋದರಿಯನ್ನು(ನಿಶಾ) ವರನಿಗೆ ಕೊಟ್ಟು ಮದುವೆ ಮಾಡುವುದಾಗಿ ನಿರ್ಧರಿಸುತ್ತಾರೆ.

ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!
ಪ್ರಾತಿನಿಧಿಕ
Follow us
|

Updated on:May 30, 2021 | 2:17 PM

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿಯೂ ಮದುವೆ ಸಮಾರಂಭಗಳು ವಿಪರೀತವಾಗಿವೆ. ಎರಡು ದಿನಗಳ ಹಿಂದೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಮದುವೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಮದುವೆ ಸಮಾರಂಭ ನಡೆಯುತ್ತಿರುವಾಗ ಮನಕಲಕುವ ಘಟನೆಯೊಂದು ನಡೆದಿದ್ದು, ಮಂಟಪದಲ್ಲಿ ನಿಂತಿದ್ದಾಗ ಇದ್ದಕ್ಕಿದ್ದಂತೆಯೇ ವಧು ಕುಸಿದು ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. 

ತಕ್ಷಣವೇ ಸ್ಥಳಕ್ಕೆ ವೈದ್ಯರನ್ನು ಕರೆಸಲಾಗುತ್ತದೆ. ವಧುವನ್ನು(ಸುರಭಿ) ಪರಿಶೀಲಿಸಿದ ವೈದ್ಯರು ಹೃದಯಾಘಾತದಿಂದ ಸಾವಿಗೀಡಾಗಿರುವ ವಿಷಯ ತಿಳಿಸುತ್ತಾರೆ. ಆದರೆ, ಎರಡೂ ಕುಟುಂಬದವರು ರಾಜಿ ಮಾಡಿಕೊಂಡು ಮಧುವಿನ ಸಹೋದರಿಯನ್ನು(ನಿಶಾ) ವರನಿಗೆ ಕೊಟ್ಟು ಮದುವೆ ಮಾಡುವುದಾಗಿ ನಿರ್ಧರಿಸುತ್ತಾರೆ.

‘ಇಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಎಂಬುದು ತಿಳಿಯಲಿಲ್ಲ. ಎರಡು ಕುಟುಂಬಗಳ ನಡುವೆ ತಂಗಿ ನಿಶಾಳನ್ನು ಕೊಟ್ಟು ಮದುವೆ ಮಾಡುವ ಪ್ರಸ್ತಾಪವಾಯಿತು. ಎರಡೂ ಕುಟುಂಬದವರು ಒಪ್ಪಂದ ಮಾಡಿಕೊಂಡೆವು’ ಎಂದು ಸುರಭಿಯ ಸಹೋದರ ಸೌರಭ್​ ಹೇಳಿದ್ದಾರೆ.

ಹೀಗಾಗಿ ಸುರಭಿಯ ಮೃತದೇಹವನ್ನು ಒಂದು ಕೋಣೆಯಲ್ಲಿ ಇಟ್ಟರು. ವರ ಮುಂಜೇಶ್​ಗೆ ತಂಗಿ ನಿಶಾಳನ್ನು ಕೊಟ್ಟು ಮದುವೆ ಮಾಡಲಾಯಿತು. ಸಮಾರಂಭ ಮುಗಿದ ಬಳಿಕ ಸುರಭಿಯ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಸೌರಭ್​ ಹೇಳಿದ್ದಾರೆ.

‘ನಮ್ಮ ಕುಟುಂಬಕ್ಕೆ ಅದು ಕಷ್ಟದ ಸಮಯವಾಗಿತ್ತು. ಒಂದು ಕಡೆ ಒಂದು ಮಗಳ ಶವ ಕೋಣೆಯಲ್ಲಿದೆ. ಇನ್ನೊಂದು ಮಗಳನ್ನು ವಿವಾಹ ಮಾಡಿಕೊಡಬೇಕಿದೆ. ಇಂತಹ ಪರಿಸ್ಥಿತಿಯನ್ನು ನಾನು ಎಂದಿಗೂ ಯೋಚಿಸಿಯೂ ಇರಲಿಲ್ಲ’ ಎಂದು ಸುರಭಿ ಚಿಕ್ಕಪ್ಪ ಅಜಾಬ್​ ಸಿಂಗ್​ ಹೆಳಿದ್ದಾರೆ.

ಇದನ್ನೂ ಓದಿ:

ಯಾದಗಿರಿ: ಇಂದು ಒಂದೇ ದಿನ 3 ಬಾಲ್ಯ ವಿವಾಹ ತಡೆದ ಅಧಿಕಾರಿಗಳು

Published On - 2:13 pm, Sun, 30 May 21

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ