AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!

ತಕ್ಷಣವೇ ಸ್ಥಳಕ್ಕೆ ವೈದ್ಯರನ್ನು ಕರೆಸಲಾಗುತ್ತದೆ. ವಧುವನ್ನು(ಸುರಭಿ) ಪರಿಶೀಲಿಸಿದ ವೈದ್ಯರು ಹೃದಯಾಘಾತದಿಂದ ಸಾವಿಗೀಡಾಗಿರುವ ವಿಷಯ ತಿಳಿಸುತ್ತಾರೆ. ಆದರೆ, ಎರಡೂ ಕುಟುಂಬದವರು ರಾಜಿ ಮಾಡಿಕೊಂಡು ಮಧುವಿನ ಸಹೋದರಿಯನ್ನು(ನಿಶಾ) ವರನಿಗೆ ಕೊಟ್ಟು ಮದುವೆ ಮಾಡುವುದಾಗಿ ನಿರ್ಧರಿಸುತ್ತಾರೆ.

ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!
ಪ್ರಾತಿನಿಧಿಕ
shruti hegde
|

Updated on:May 30, 2021 | 2:17 PM

Share

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿಯೂ ಮದುವೆ ಸಮಾರಂಭಗಳು ವಿಪರೀತವಾಗಿವೆ. ಎರಡು ದಿನಗಳ ಹಿಂದೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಮದುವೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಮದುವೆ ಸಮಾರಂಭ ನಡೆಯುತ್ತಿರುವಾಗ ಮನಕಲಕುವ ಘಟನೆಯೊಂದು ನಡೆದಿದ್ದು, ಮಂಟಪದಲ್ಲಿ ನಿಂತಿದ್ದಾಗ ಇದ್ದಕ್ಕಿದ್ದಂತೆಯೇ ವಧು ಕುಸಿದು ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. 

ತಕ್ಷಣವೇ ಸ್ಥಳಕ್ಕೆ ವೈದ್ಯರನ್ನು ಕರೆಸಲಾಗುತ್ತದೆ. ವಧುವನ್ನು(ಸುರಭಿ) ಪರಿಶೀಲಿಸಿದ ವೈದ್ಯರು ಹೃದಯಾಘಾತದಿಂದ ಸಾವಿಗೀಡಾಗಿರುವ ವಿಷಯ ತಿಳಿಸುತ್ತಾರೆ. ಆದರೆ, ಎರಡೂ ಕುಟುಂಬದವರು ರಾಜಿ ಮಾಡಿಕೊಂಡು ಮಧುವಿನ ಸಹೋದರಿಯನ್ನು(ನಿಶಾ) ವರನಿಗೆ ಕೊಟ್ಟು ಮದುವೆ ಮಾಡುವುದಾಗಿ ನಿರ್ಧರಿಸುತ್ತಾರೆ.

‘ಇಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಎಂಬುದು ತಿಳಿಯಲಿಲ್ಲ. ಎರಡು ಕುಟುಂಬಗಳ ನಡುವೆ ತಂಗಿ ನಿಶಾಳನ್ನು ಕೊಟ್ಟು ಮದುವೆ ಮಾಡುವ ಪ್ರಸ್ತಾಪವಾಯಿತು. ಎರಡೂ ಕುಟುಂಬದವರು ಒಪ್ಪಂದ ಮಾಡಿಕೊಂಡೆವು’ ಎಂದು ಸುರಭಿಯ ಸಹೋದರ ಸೌರಭ್​ ಹೇಳಿದ್ದಾರೆ.

ಹೀಗಾಗಿ ಸುರಭಿಯ ಮೃತದೇಹವನ್ನು ಒಂದು ಕೋಣೆಯಲ್ಲಿ ಇಟ್ಟರು. ವರ ಮುಂಜೇಶ್​ಗೆ ತಂಗಿ ನಿಶಾಳನ್ನು ಕೊಟ್ಟು ಮದುವೆ ಮಾಡಲಾಯಿತು. ಸಮಾರಂಭ ಮುಗಿದ ಬಳಿಕ ಸುರಭಿಯ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಸೌರಭ್​ ಹೇಳಿದ್ದಾರೆ.

‘ನಮ್ಮ ಕುಟುಂಬಕ್ಕೆ ಅದು ಕಷ್ಟದ ಸಮಯವಾಗಿತ್ತು. ಒಂದು ಕಡೆ ಒಂದು ಮಗಳ ಶವ ಕೋಣೆಯಲ್ಲಿದೆ. ಇನ್ನೊಂದು ಮಗಳನ್ನು ವಿವಾಹ ಮಾಡಿಕೊಡಬೇಕಿದೆ. ಇಂತಹ ಪರಿಸ್ಥಿತಿಯನ್ನು ನಾನು ಎಂದಿಗೂ ಯೋಚಿಸಿಯೂ ಇರಲಿಲ್ಲ’ ಎಂದು ಸುರಭಿ ಚಿಕ್ಕಪ್ಪ ಅಜಾಬ್​ ಸಿಂಗ್​ ಹೆಳಿದ್ದಾರೆ.

ಇದನ್ನೂ ಓದಿ:

ಯಾದಗಿರಿ: ಇಂದು ಒಂದೇ ದಿನ 3 ಬಾಲ್ಯ ವಿವಾಹ ತಡೆದ ಅಧಿಕಾರಿಗಳು

Published On - 2:13 pm, Sun, 30 May 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ