AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IED Blast: ಮಣಿಪುರ, ನಾಗಾಲ್ಯಾಂಡ್​ ಸಂಪರ್ಕಿಸುವ ಸೇತುವೆ ಮೇಲೆ ಐಇಡಿ ಸ್ಫೋಟ

ಇಂಫಾಲ್ ಮತ್ತು ಮಣಿಪುರವನ್ನು ಸಂಪರ್ಕಿಸುವ ಸೇತುವೆಯಲ್ಲಿ ಐಇಡಿ ಸ್ಫೋಟಗೊಂಡು ಸೇತುವೆಗೆ ಹಾನಿಯಾಗಿದೆ. ಸೇತುವೆಯ ಮೇಲೆ ವಾಹನಗಳ ನಿರ್ಬಂಧ ಹೇರಲಾಗಿದೆ. ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

IED Blast: ಮಣಿಪುರ, ನಾಗಾಲ್ಯಾಂಡ್​ ಸಂಪರ್ಕಿಸುವ ಸೇತುವೆ ಮೇಲೆ ಐಇಡಿ ಸ್ಫೋಟ
ಐಇಡಿ ಸ್ಫೋಟ
ನಯನಾ ರಾಜೀವ್
|

Updated on:Apr 24, 2024 | 11:28 AM

Share

ಮಣಿಪುರ(Manipur)ದ ಇಂಫಾಲ್ ಮತ್ತು ನಾಗಾಲ್ಯಾಂಡ್‌ನ ದಿಮಾಪುರವನ್ನು ಸಂಪರ್ಕಿಸುವ ಸೇತುವೆಯಲ್ಲಿ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡಿದೆ. ಸೇತುವೆಯು ರಾಷ್ಟ್ರೀಯ ಹೆದ್ದಾರಿ 2 ರಲ್ಲಿದೆ ಮತ್ತು ಮಣಿಪುರದ ಕುಬ್ರುದಲ್ಲಿದೆ ಲಿಖಾ ಸಪರ್ಮಿನಾ ಗ್ರಾಮಗಳು ಮತ್ತು ಕಾಂಗ್ಪೋಕ್ಪಿ ಜಿಲ್ಲೆಯ ಮೂಲಕ ಹಾದುಹೋಗಲಿದೆ.

ಮಂಗಳವಾರ ಮಧ್ಯರಾತ್ರಿ 12.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಪೊಲೀಸರ ಪ್ರಕಾರ, ಸ್ಫೋಟದ ಪರಿಣಾಮವಾಗಿ ಸೇತುವೆಯ ಮಧ್ಯದಲ್ಲಿ ಮೂರು ಕುಳಿಗಳು, ಎರಡೂ ತುದಿಗಳಲ್ಲಿ ಬಿರುಕುಗಳು ಉಂಟಾಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಇದೇ ವೇಳೆ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಕಳೆದ ವರ್ಷವೂ ಇಂಥದ್ದೇ ಘಟನೆ ನಡೆದಿತ್ತು ಕಳೆದ ವರ್ಷ ಜೂನ್‌ನಲ್ಲಿ ಮಣಿಪುರದಲ್ಲಿ ಮೂವರು ಗಾಯಗೊಂಡಿದ್ದ ಐಇಡಿ ಸ್ಫೋಟದಲ್ಲಿ ಪ್ರಮುಖ ಸಂಚುಕೋರ ಸೇರಿದಂತೆ ಇಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆರೋಪಪಟ್ಟಿ ಸಲ್ಲಿಸಿದೆ.

ಬಿಷ್ಣುಪುರ ಜಿಲ್ಲೆಯ ಕ್ವಾಕ್ಟಾದಲ್ಲಿ ವಾಹನದೊಳಗೆ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿಯಾಗಿತ್ತು.

ಮತ್ತಷ್ಟು ಓದಿ: ಛತ್ತೀಸ್​ಗಢ ಚುನಾವಣೆ: ಮತದಾನಕ್ಕೂ ಮುನ್ನ ಐಇಡಿ ಸ್ಫೋಟ, ಯೋಧರು, ಮತಗಟ್ಟೆ ಸಿಬ್ಬಂದಿ ಸೇರಿ ನಾಲ್ವರಿಗೆ ಗಾಯ

ಆರೋಪಿಗಳನ್ನು ಸೆಮಿನ್ಲುನ್ ಗಂಗ್ಟೆ ಅಲಿಯಾಸ್ ಮಿನ್ಲುನ್ ಮತ್ತು ಮೊಹಮ್ಮದ್ ನೂರ್ ಹುಸೇನ್ ಅಲಿಯಾಸ್ ಟೊಂಬಾ ಅಲಿಯಾಸ್ ಮೊಹಮ್ಮದ್ ನೂರ್ ಹಸನ್ ಎಂದು ಗುರುತಿಸಲಾಗಿತ್ತು. ಆದರೆ ಈಗ ನಡೆದಿರುವ ಐಇಡಿ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:22 am, Wed, 24 April 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ