AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ಗಿಲ್ಲ ಬಿಜೆಪಿ ಟಿಕೆಟ್​

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್​ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ಗೆ ಬಿಜಪಿ ಟಿಕೆಟ್​ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಗೃಹ ಸಚಿವ ಅಮಿತ್​ ಶಾ ಲಕ್ನೋ ಪ್ರವಾಸದಲ್ಲಿದ್ದು ಈ ವಿಚಾರದ ಕುರಿತು ಬ್ರಿಜ್​ ಭೂಷಣ್​ ಅವರ ಬಳಿ ಚರ್ಚಿಸಲಿದ್ದು ಬ್ರಿಜ್​ ಭೂಷಣ್​ ಒಪ್ಪಿದರೆ ಅವರ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ಗಿಲ್ಲ ಬಿಜೆಪಿ ಟಿಕೆಟ್​
ಬ್ರಿಜ್​ ಭೂಷಣ್​ ಶರಣ್​ ಸಿಂಗ್
Follow us
ನಯನಾ ರಾಜೀವ್
|

Updated on:May 02, 2024 | 11:04 AM

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್(Brij Bhushan Sharan Singh)​ಗೆ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಬಿಜೆಪಿ(BJP) ಟಿಕೆಟ್​ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಗೃಹ ಸಚಿವ ಅಮಿತ್​ ಶಾ ಲಕ್ನೋ ಪ್ರವಾಸದಲ್ಲಿದ್ದು ಈ ವಿಚಾರದ ಕುರಿತು ಬ್ರಿಜ್​ ಭೂಷಣ್​ ಅವರ ಬಳಿ ಚರ್ಚಿಸಲಿದ್ದು ಬ್ರಿಜ್​ ಭೂಷಣ್​ ಒಪ್ಪಿದರೆ ಅವರ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸಂಸದ ಮತ್ತು ಮಾಜಿ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ನೀಡಿ ತೊಂದರೆಗೆ ಸಿಲುಕಿದ್ದರು. ಕೇಸರ್‌ಗಂಜ್ ಕ್ಷೇತ್ರದಿಂದ ಅವರಿಗೆ ಲೋಕಸಭೆ ಚುನಾವಣೆಗೆ ಪಕ್ಷ ಟಿಕೆಟ್ ನೀಡದಿರುವ ಬಗ್ಗೆ ಮೊದಲಿನಿಂದಲೂ ಊಹಾಪೋಹ ಇತ್ತು.

ಇದೀಗ ಮೂಲಗಳು ಇದನ್ನು ಖಚಿತಪಡಿಸುತ್ತಿದ್ದು, ಪಕ್ಷದಿಂದ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗುತ್ತಿದೆ. ಮತ್ತೊಂದೆಡೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಪಾಳಯದಲ್ಲಿ ಸಂಸದರ ಕಿರಿಯ ಪುತ್ರ ಹಾಗೂ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಅಧ್ಯಕ್ಷ ಕರಣ್ ಭೂಷಣ್ ಶರಣ್ ಸಿಂಗ್ ಹೆಸರು ಚರ್ಚೆಯಲ್ಲಿದೆ.

ರಾಷ್ಟ್ರೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್​ ಸತತ ಮೂರು ಅವಧಿಗೆ ಪ್ರತಿನಿಧಿಸಿರುವ ಉತ್ತರ ಪ್ರದೇಶದ ಕೇಸರ್‌ಗಂಜ್‌ನಿಂದ ಈ ಬಾರಿ ಟಿಕೆಟ್ ಸಿಗದಿರಬಹುದು ಎಂದು ಬಿಜೆಪಿ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಮತ್ತಷ್ಟು ಓದಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್​ಗೆ ಮಧ್ಯಂತರ ಜಾಮೀನು

ಪಕ್ಷದ ನಾಯಕತ್ವವು ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ಮಾತನಾಡಿದೆ ಮತ್ತು ಅವರ ಮಗ ಕರಣ್ ಭೂಷಣ್ ಸಿಂಗ್ ಅವರನ್ನು ಕೇಸರ್‌ಗಂಜ್‌ನಿಂದ ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ. ಹೆವಿವೇಯ್ಟ್ ರಾಜಕಾರಣಿ, ಇದು ತಿಳಿದುಬಂದಿದೆ. ಕೇಸರ್‌ಗಂಜ್ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮೇ 20 ರಂದು ಮತದಾನ ನಡೆಯಲಿದೆ.

ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ತನ್ನ ಅಭ್ಯರ್ಥಿಯ ಘೋಷಣೆ ಮಾಡುವ ನಿರೀಕ್ಷೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:46 am, Thu, 2 May 24

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು