AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಲ್ಲಿ ಆಪ್ತ; ಮೇಲುಗೈ ಸಾಧಿಸಿದ್ದೇನೆ ಎಂದ ಬ್ರಿಜ್ ಭೂಷಣ್ ಶರಣ್ ಸಿಂಗ್

Brij Bhushan Sharan Singh: ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಪಡೆದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರನ್ನು ಪರಾಭವಗೊಳಿಸಿದ್ದಾರೆ. ಸಂಜಯ್ ಸಿಂಗ್ ಗೆಲುವಿಗೆ ಖುಷಿ ವ್ಯಕ್ತ ಪಡಿಸಿದ ಬ್ರಿಜ್ ಭೂಷಣ್, ನಾನು ಮೇಲುಗೈ ಸಾಧಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.

ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಲ್ಲಿ ಆಪ್ತ; ಮೇಲುಗೈ ಸಾಧಿಸಿದ್ದೇನೆ ಎಂದ ಬ್ರಿಜ್ ಭೂಷಣ್ ಶರಣ್ ಸಿಂಗ್
ಬ್ರಿಜ್ ಭೂಷಣ್ ಜತೆ ಸಂಜಯ್ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 21, 2023 | 6:54 PM

Share

ದೆಹಲಿ ಡಿಸೆಂಬರ್ 21: ಭಾರತದ ಕುಸ್ತಿ ಫೆಡರೇಶನ್‌ಗೆ (Wrestling Federation of India)ನಡೆದ ಚುನಾವಣೆಯಲ್ಲಿ ತಮ್ಮ ಆಪ್ತ ಸಂಜಯ್ ಸಿಂಗ್ (Sanjay Singh) ಅಧ್ಯಕ್ಷ ಸ್ಥಾನಕ್ಕೇರುತ್ತಿದ್ದಂತೆ ಸಂಸ್ಥೆಯ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ದಬ್ದಬಾ ಥಾ, ದಬ್ದಬಾ ರಹೇಗಾ (ಮೇಲುಗೈ ಇತ್ತು, ಮೇಲುಗೈ ಸಾಧಿಸಿದ್ದೇನೆ) ಎಂದು ಹೇಳಿದ್ದಾರೆ. ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಹೊರಿಸಿ ತಿಂಗಳುಗಳ ಕಾಲ  ಪ್ರತಿಭಟನೆ ನಡೆಸಿದ್ದರು.

ಗುರುವಾರ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಪಡೆದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರನ್ನು ಪರಾಭವಗೊಳಿಸಿದ್ದಾರೆ . ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟಿಸಿದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಕುಸ್ತಿಪಟುಗಳು ಶೆರಾನ್ ಅವರನ್ನು ಬೆಂಬಲಿಸಿದ್ದರು.

ಸಂಜಯ್ ಸಿಂಗ್ ವಾರಣಾಸಿಯವರಾಗಿದ್ದು WFI ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿ. “ಜಿನ್ಕೋ ಕುಸ್ತಿ ಕರ್ನಿ ಹೈ ವೋ ಕುಸ್ತಿ ಕರೇಂ. ಜಿನ್ಕೋ ರಾಜನೀತಿ ಕರನೀ ಹೈಂ ವೋ ರಾಜನೀತಿ ಕರೇಂ. (ಸ್ಪರ್ಧಿಸಲು ಬಯಸುವ ಕುಸ್ತಿಪಟುಗಳು ಕುಸ್ತಿಯಾಡಬಹುದು.. ರಾಜಕೀಯ ಮಾಡಲು ಬಯಸುವವರು ರಾಜಕೀಯ ಮಾಡಬೇಕು). ಕಳೆದ ಏಳು-ಎಂಟು ತಿಂಗಳಲ್ಲಿ ನೋವು ಅನುಭವಿಸಿದ ದೇಶದ ಸಾವಿರಾರು ಕುಸ್ತಿಪಟುಗಳ ಗೆಲುವು ಇದು ಎಂದು ಸಿಂಗ್ ಹೇಳಿದರು.

ಆದಾಗ್ಯೂ, 27-19 ರಲ್ಲಿ ದರ್ಶನ್ ಲಾಲ್ ಅವರನ್ನು ಸೋಲಿಸಿ RSPB (ರೈಲ್ವೆ ಕ್ರೀಡಾ ಪ್ರಚಾರ ಮಂಡಳಿ) ಮಾಜಿ ಕಾರ್ಯದರ್ಶಿ ಪ್ರೇಮ್ ಚಂದ್ ಲೊಚಬ್ ಪ್ರಧಾನ ಕಾರ್ಯದರ್ಶಿ ಸ್ಥಾನ ಗೆದ್ದಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಆಹಾರ ಮಳಿಗೆಗಳನ್ನು ನಡೆಸುತ್ತಿರುವ ದೇವೆಂದರ್ ಸಿಂಗ್ ಕಾಡಿಯನ್, ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಹತ್ತಿರವಾಗಿದ್ದಾರೆ ಎಂದು ಪರಿಗಣಿಸಲಾಗಿದೆ. ಐ ಡಿ ನಾನಾವತಿ ಅವರನ್ನು ಕಾಡಿಯನ್ 32-15 ಮತಗಳ ಅಂತರದಿಂ ಸೋಲಿಸಿ ಹಿರಿಯ ಉಪಾಧ್ಯಕ್ಷ ಸ್ಥಾನವನ್ನು ಪಡೆದರು.

ದೆಹಲಿಯ ಜೈ ಪ್ರಕಾಶ್ (37), ಪಶ್ಚಿಮ ಬಂಗಾಳದ ಅಸಿತ್ ಕುಮಾರ್ ಸಹಾ (42), ಪಂಜಾಬ್‌ನ ಕರ್ತಾರ್ ಸಿಂಗ್ (44) ಮತ್ತು ಮಣಿಪುರದ ಎನ್ ಫೋನಿ (38) ಗೆಲುವಿನೊಂದಿಗೆ ಬ್ರಿಜ್ ಭೂಷಣ್ ಪಾಳಯವು ಎಲ್ಲಾ ನಾಲ್ಕು ಉಪಾಧ್ಯಕ್ಷರ ಹುದ್ದೆಗಳನ್ನು ಗೆದ್ದಿದೆ. ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಚುನಾವಣೆಗೆ ಬಾರದೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೇವಲ ಐದು ಮತಗಳನ್ನು ಪಡೆದರು.

ಇದನ್ನೂ ಓದಿ: WFIನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ: ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದ ಸಾಕ್ಷಿ ಮಲಿಕ್

ಬ್ರಿಜ್ ಭೂಷಣ್ ಬಣದವರೂದ ಉತ್ತರಾಖಂಡದ ಸತ್ಯಪಾಲ್ ಸಿಂಗ್ ದೇಶ್ವಾಲ್ ಅವರು ಹೊಸ ಖಜಾಂಚಿಯಾಗಿದ್ದಾರೆ. ಅವರು ಜಮ್ಮು ಮತ್ತು ಕಾಶ್ಮೀರದ ದುಶ್ಯಂತ್ ಶರ್ಮಾ ಅವರನ್ನು 34-12 ರಿಂದ ಸೋಲಿಸಿದರು. ಎಲ್ಲಾ ಐವರು ಕಾರ್ಯಕಾರಿ ಸಮಿತಿಯ ಸದಸ್ಯರು ಸಹ ನಿರ್ಗಮಿತ ಮುಖ್ಯಸ್ಥರ ಬಣದವರು.

ಬ್ರಿಜ್ ಭೂಷಣ್ ಅವರ ಕುಟುಂಬದ ಯಾವುದೇ ಸದಸ್ಯರು ಅಥವಾ ಆಪ್ತರು WFI ಚುನಾವಣಾ ಕಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭರವಸೆ ನೀಡಿದ ನಂತರ ಕುಸ್ತಿಪಟುಗಳು ಜೂನ್ 7 ರಂದು ಅಧಿಕೃತವಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು