AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಲ್ಲಿ ಆಪ್ತ; ಮೇಲುಗೈ ಸಾಧಿಸಿದ್ದೇನೆ ಎಂದ ಬ್ರಿಜ್ ಭೂಷಣ್ ಶರಣ್ ಸಿಂಗ್

Brij Bhushan Sharan Singh: ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಪಡೆದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರನ್ನು ಪರಾಭವಗೊಳಿಸಿದ್ದಾರೆ. ಸಂಜಯ್ ಸಿಂಗ್ ಗೆಲುವಿಗೆ ಖುಷಿ ವ್ಯಕ್ತ ಪಡಿಸಿದ ಬ್ರಿಜ್ ಭೂಷಣ್, ನಾನು ಮೇಲುಗೈ ಸಾಧಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.

ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಲ್ಲಿ ಆಪ್ತ; ಮೇಲುಗೈ ಸಾಧಿಸಿದ್ದೇನೆ ಎಂದ ಬ್ರಿಜ್ ಭೂಷಣ್ ಶರಣ್ ಸಿಂಗ್
ಬ್ರಿಜ್ ಭೂಷಣ್ ಜತೆ ಸಂಜಯ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: Dec 21, 2023 | 6:54 PM

Share

ದೆಹಲಿ ಡಿಸೆಂಬರ್ 21: ಭಾರತದ ಕುಸ್ತಿ ಫೆಡರೇಶನ್‌ಗೆ (Wrestling Federation of India)ನಡೆದ ಚುನಾವಣೆಯಲ್ಲಿ ತಮ್ಮ ಆಪ್ತ ಸಂಜಯ್ ಸಿಂಗ್ (Sanjay Singh) ಅಧ್ಯಕ್ಷ ಸ್ಥಾನಕ್ಕೇರುತ್ತಿದ್ದಂತೆ ಸಂಸ್ಥೆಯ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ದಬ್ದಬಾ ಥಾ, ದಬ್ದಬಾ ರಹೇಗಾ (ಮೇಲುಗೈ ಇತ್ತು, ಮೇಲುಗೈ ಸಾಧಿಸಿದ್ದೇನೆ) ಎಂದು ಹೇಳಿದ್ದಾರೆ. ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಹೊರಿಸಿ ತಿಂಗಳುಗಳ ಕಾಲ  ಪ್ರತಿಭಟನೆ ನಡೆಸಿದ್ದರು.

ಗುರುವಾರ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಪಡೆದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರನ್ನು ಪರಾಭವಗೊಳಿಸಿದ್ದಾರೆ . ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟಿಸಿದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಕುಸ್ತಿಪಟುಗಳು ಶೆರಾನ್ ಅವರನ್ನು ಬೆಂಬಲಿಸಿದ್ದರು.

ಸಂಜಯ್ ಸಿಂಗ್ ವಾರಣಾಸಿಯವರಾಗಿದ್ದು WFI ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿ. “ಜಿನ್ಕೋ ಕುಸ್ತಿ ಕರ್ನಿ ಹೈ ವೋ ಕುಸ್ತಿ ಕರೇಂ. ಜಿನ್ಕೋ ರಾಜನೀತಿ ಕರನೀ ಹೈಂ ವೋ ರಾಜನೀತಿ ಕರೇಂ. (ಸ್ಪರ್ಧಿಸಲು ಬಯಸುವ ಕುಸ್ತಿಪಟುಗಳು ಕುಸ್ತಿಯಾಡಬಹುದು.. ರಾಜಕೀಯ ಮಾಡಲು ಬಯಸುವವರು ರಾಜಕೀಯ ಮಾಡಬೇಕು). ಕಳೆದ ಏಳು-ಎಂಟು ತಿಂಗಳಲ್ಲಿ ನೋವು ಅನುಭವಿಸಿದ ದೇಶದ ಸಾವಿರಾರು ಕುಸ್ತಿಪಟುಗಳ ಗೆಲುವು ಇದು ಎಂದು ಸಿಂಗ್ ಹೇಳಿದರು.

ಆದಾಗ್ಯೂ, 27-19 ರಲ್ಲಿ ದರ್ಶನ್ ಲಾಲ್ ಅವರನ್ನು ಸೋಲಿಸಿ RSPB (ರೈಲ್ವೆ ಕ್ರೀಡಾ ಪ್ರಚಾರ ಮಂಡಳಿ) ಮಾಜಿ ಕಾರ್ಯದರ್ಶಿ ಪ್ರೇಮ್ ಚಂದ್ ಲೊಚಬ್ ಪ್ರಧಾನ ಕಾರ್ಯದರ್ಶಿ ಸ್ಥಾನ ಗೆದ್ದಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಆಹಾರ ಮಳಿಗೆಗಳನ್ನು ನಡೆಸುತ್ತಿರುವ ದೇವೆಂದರ್ ಸಿಂಗ್ ಕಾಡಿಯನ್, ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಹತ್ತಿರವಾಗಿದ್ದಾರೆ ಎಂದು ಪರಿಗಣಿಸಲಾಗಿದೆ. ಐ ಡಿ ನಾನಾವತಿ ಅವರನ್ನು ಕಾಡಿಯನ್ 32-15 ಮತಗಳ ಅಂತರದಿಂ ಸೋಲಿಸಿ ಹಿರಿಯ ಉಪಾಧ್ಯಕ್ಷ ಸ್ಥಾನವನ್ನು ಪಡೆದರು.

ದೆಹಲಿಯ ಜೈ ಪ್ರಕಾಶ್ (37), ಪಶ್ಚಿಮ ಬಂಗಾಳದ ಅಸಿತ್ ಕುಮಾರ್ ಸಹಾ (42), ಪಂಜಾಬ್‌ನ ಕರ್ತಾರ್ ಸಿಂಗ್ (44) ಮತ್ತು ಮಣಿಪುರದ ಎನ್ ಫೋನಿ (38) ಗೆಲುವಿನೊಂದಿಗೆ ಬ್ರಿಜ್ ಭೂಷಣ್ ಪಾಳಯವು ಎಲ್ಲಾ ನಾಲ್ಕು ಉಪಾಧ್ಯಕ್ಷರ ಹುದ್ದೆಗಳನ್ನು ಗೆದ್ದಿದೆ. ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಚುನಾವಣೆಗೆ ಬಾರದೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೇವಲ ಐದು ಮತಗಳನ್ನು ಪಡೆದರು.

ಇದನ್ನೂ ಓದಿ: WFIನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ: ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದ ಸಾಕ್ಷಿ ಮಲಿಕ್

ಬ್ರಿಜ್ ಭೂಷಣ್ ಬಣದವರೂದ ಉತ್ತರಾಖಂಡದ ಸತ್ಯಪಾಲ್ ಸಿಂಗ್ ದೇಶ್ವಾಲ್ ಅವರು ಹೊಸ ಖಜಾಂಚಿಯಾಗಿದ್ದಾರೆ. ಅವರು ಜಮ್ಮು ಮತ್ತು ಕಾಶ್ಮೀರದ ದುಶ್ಯಂತ್ ಶರ್ಮಾ ಅವರನ್ನು 34-12 ರಿಂದ ಸೋಲಿಸಿದರು. ಎಲ್ಲಾ ಐವರು ಕಾರ್ಯಕಾರಿ ಸಮಿತಿಯ ಸದಸ್ಯರು ಸಹ ನಿರ್ಗಮಿತ ಮುಖ್ಯಸ್ಥರ ಬಣದವರು.

ಬ್ರಿಜ್ ಭೂಷಣ್ ಅವರ ಕುಟುಂಬದ ಯಾವುದೇ ಸದಸ್ಯರು ಅಥವಾ ಆಪ್ತರು WFI ಚುನಾವಣಾ ಕಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭರವಸೆ ನೀಡಿದ ನಂತರ ಕುಸ್ತಿಪಟುಗಳು ಜೂನ್ 7 ರಂದು ಅಧಿಕೃತವಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ