AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj Thackeray ಏಕರೂಪ ನಾಗರಿಕ ಸಂಹಿತೆ ಜಾರಿಗೆ ತನ್ನಿ, ಔರಂಗಾಬಾದ್ ಹೆಸರನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಿ: ರಾಜ್ ಠಾಕ್ರೆ ಒತ್ತಾಯ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ 'ನಮ್ಮ ಹಿಂದುತ್ವ-ಅವರ ಹಿಂದುತ್ವ' ಟೀಕೆಗೆ ಪ್ರತಿಕ್ರಿಯಿಸಿದ ರಾಜ್ ಠಾಕ್ರೆ " ನಿಜವಾದ ಹಿಂದುತ್ವ, ನಕಲಿ ಹಿಂದುತ್ವ ಅಂದರೇನು? ನಾವು ವಾಷಿಂಗ್ ಪೌಡರ್ ಮಾರುತ್ತಿದ್ದೇವೆಯೇ? ಎಂದು ಕೇಳಿದ್ದಾರೆ.

Raj Thackeray ಏಕರೂಪ ನಾಗರಿಕ ಸಂಹಿತೆ ಜಾರಿಗೆ ತನ್ನಿ, ಔರಂಗಾಬಾದ್ ಹೆಸರನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಿ: ರಾಜ್ ಠಾಕ್ರೆ ಒತ್ತಾಯ
ರಾಜ್ ಠಾಕ್ರೆ
TV9 Web
| Edited By: |

Updated on:May 22, 2022 | 2:43 PM

Share

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನಾ (Maharashtra Navnirmal Sena) ಮುಖ್ಯಸ್ಥ ರಾಜ್ ಠಾಕ್ರೆ (Raj Thackeray) ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಏಕರೂಪ ನಾಗರಿಕ ಸಂಹಿತೆ ತರಬೇಕು ಮತ್ತು ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ತರಬೇಕು ಎಂದು ಒತ್ತಾಯಿಸಿದರು. ಎಂಎನ್‌ಎಸ್ ಮುಖ್ಯಸ್ಥರು ಏಕರೂಪ ನಾಗರಿಕ ಸಂಹಿತೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದು ಇದೇ ಮೊದಲಲ್ಲ. ಮಸೀದಿಗಳಲ್ಲಿ ಅಕ್ರಮವಾಗಿ ಇರಿಸಲಾಗಿರುವ ಧ್ವನಿವರ್ಧಕತೆಗೆದು ಹಾಕದಿದ್ದರೆ ಹನುಮಾನ್ ಚಾಲೀಸಾ ನುಡಿಸುವುದಾಗಿ ಬೆದರಿಕೆ ಹಾಕಿರುವ ಹೊತ್ತಲ್ಲೇ ಠಾಕ್ರೆ ಮೋದಿಗೆ ಮನವಿ ಮಾಡಿದ್ದಾರೆ. ಔರಂಗಾಬಾದ್ (Aurangabad) ಅನ್ನು ಮರಾಠ ದೊರೆ ಸಂಭಾಜಿ ಹೆಸರಲ್ಲಿ ಸಂಭಾಜಿನಗರ ಎಂದು ಮರುನಾಮಕರಣ ಮಾಡಬೇಕು ಎಂದೂ ಅವರು ಒತ್ತಾಯಿಸಿದ್ದಾರೆ .ಠಾಕ್ರೆ ಇತ್ತೀಚೆಗೆ ತಮ್ಮ ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ ನಂತರ ನಡೆದ ಪುಣೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದು, ಧ್ವನಿವರ್ಧಕದ ಪ್ರತಿಭಟನೆಯನ್ನು ಇಷ್ಟಪಡದವರು ಬಲೆ ಬೀಸಿದ್ದಾರೆ. ನನ್ನ ಎಂಎನ್‌ಎಸ್ ಕಾರ್ಯಕರ್ತರು ಜೈಲಿಗೆ ಹೋಗುವುದು ನನಗೆ ಇಷ್ಟವಿಲ್ಲದ ಕಾರಣ ನಾನು ಈ ಬಲೆಗೆ ಬೀಳಲಿಲ್ಲ ಎಂದು ಹೇಳಿದ್ದಾರೆ. ಧ್ವನಿವರ್ಧಕದ ಗದ್ದಲದ ನಡುವೆ ರಾಜ್ ಠಾಕ್ರೆ ಅವರ ಅಯೋಧ್ಯೆ ಭೇಟಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರು ಅಯೋಧ್ಯೆಗೆ ಬರುವ ಮೊದಲು ಉತ್ತರ ಭಾರತೀಯರ ವಿರುದ್ಧ ತಮ್ಮ ಹಿಂದಿನ ಹೇಳಿಕೆಗಳಿಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಠಾಕ್ರೆ ಕೆಲವು ಜನರು 14-15 ವರ್ಷಗಳ ನಂತರ ನಾನು ಕ್ಷಮೆ ಕೇಳಬೇಕೆಂದು ಯಾಕೆ ಬಯಸುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಹನುಮಾನ್ ಚಾಲೀಸಾ ವಿವಾದದ ಕುರಿತು ಮಾತನಾಡಿದ ರಾಜ್ ಠಾಕ್ರೆ, ಮಹಾರಾಷ್ಟ್ರ ಸರ್ಕಾರವು ಮಸೀದಿಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲು ವಿಫಲವಾದರೆ ಹನುಮಾನ್ ಚಾಲೀಸಾವನ್ನು ನುಡಿಸಲು ತನ್ನ ಪಕ್ಷದವರಿಗೆ ಕೇಳಿದ್ದೇನೆ ಎಂದು ಹೇಳಿದರು. “ಆದರೆ ರಾಣಾ ದಂಪತಿಗಳು ಮಾತೋಶ್ರೀಗೆ ಹೋಗಿ ಹನುಮಾನ್ ಚಾಲೀಸಾವನ್ನು ಪಠಿಸಲು ಬಯಸಿದ್ದರು. ಯಾಕೆ? ಮಾತೋಶ್ರೀ ಏನು ಮಸೀದಿಯೇ? ಇದೆಲ್ಲದರ ನಡುವೆ ಅದೇ ದಂಪತಿ ಶಿವಸೇನಾದ ಸಂಜಯ್ ರಾವುತ್ ಅವರೊಂದಿಗೆ ಒಟ್ಟಿಗೆ ಊಟ ಮಾಡುತ್ತಿರುವುದು ಕಂಡುಬಂದಿದೆ” ಎಂದಿದ್ದಾರೆ.

ಇದನ್ನೂ ಓದಿ
Image
ಬೆದರಿಕೆ ಮತ್ತು ಪ್ರತಿಭಟನೆಗಳ ಹಿನ್ನಲೆಯಲ್ಲಿ ಅಯೋಧ್ಯೆ ಭೇಟಿ ಕೈಬಿಟ್ಟ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ
Image
ನಕಲಿ ಭಾವನೆಗಳಿರುವವರನ್ನು ಭಗವಾನ್ ರಾಮ ಆಶೀರ್ವದಿಸುವುದಿಲ್ಲ: ರಾಜ್​​ ಠಾಕ್ರೆಯ ಅಯೋಧ್ಯೆ ಭೇಟಿ ಬಗ್ಗೆ ಶಿವಸೇನಾ ಟೀಕೆ
Image
ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಬಾಳ್ ಠಾಕ್ರೆ ಹೇಳುತ್ತಿರುವ ವಿಡಿಯೊ ಹಂಚಿಕೊಂಡ ರಾಜ್ ಠಾಕ್ರೆ
Image
ಮುಂದುವರಿಯಲಿದೆ ಮಸೀದಿಗಳ ಎದುರು ಹನುಮಾನ್ ಚಾಲೀಸಾ ಅಭಿಯಾನ: ರಾಜ್ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ‘ನಮ್ಮ ಹಿಂದುತ್ವ-ಅವರ ಹಿಂದುತ್ವ’ ಟೀಕೆಗೆ ಪ್ರತಿಕ್ರಿಯಿಸಿದ ರಾಜ್ ಠಾಕ್ರೆ ” ನಿಜವಾದ ಹಿಂದುತ್ವ, ನಕಲಿ ಹಿಂದುತ್ವ ಅಂದರೇನು? ನಾವು ವಾಷಿಂಗ್ ಪೌಡರ್ ಮಾರುತ್ತಿದ್ದೇವೆಯೇ? ಎಂದು ಕೇಳಿದ್ದಾರೆ.

ಜೂನ್ 1 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು ಚೇತರಿಸಿಕೊಳ್ಳಲು ಒಂದೂವರೆ ತಿಂಗಳು ಬೇಕಾಗುತ್ತದೆ ಎಂದು ರಾಜ್ ಠಾಕ್ರೆ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ. ಭಾನುವಾರದಂದು ರಾಜ್ ಠಾಕ್ರೆ ಅವರ ರ್ಯಾಲಿಗೆ ಮುಂಚಿತವಾಗಿ, ಪುಣೆ ಪೊಲೀಸರು ಯಾವುದೇ ಭಾಷಣಕಾರರು ಯಾವುದೇ ಪ್ರಚೋದಕ ಭಾಷಣ ಮಾಡಬಾರದು ಎಂದು ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:41 pm, Sun, 22 May 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!