AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj Thackeray ಏಕರೂಪ ನಾಗರಿಕ ಸಂಹಿತೆ ಜಾರಿಗೆ ತನ್ನಿ, ಔರಂಗಾಬಾದ್ ಹೆಸರನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಿ: ರಾಜ್ ಠಾಕ್ರೆ ಒತ್ತಾಯ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ 'ನಮ್ಮ ಹಿಂದುತ್ವ-ಅವರ ಹಿಂದುತ್ವ' ಟೀಕೆಗೆ ಪ್ರತಿಕ್ರಿಯಿಸಿದ ರಾಜ್ ಠಾಕ್ರೆ " ನಿಜವಾದ ಹಿಂದುತ್ವ, ನಕಲಿ ಹಿಂದುತ್ವ ಅಂದರೇನು? ನಾವು ವಾಷಿಂಗ್ ಪೌಡರ್ ಮಾರುತ್ತಿದ್ದೇವೆಯೇ? ಎಂದು ಕೇಳಿದ್ದಾರೆ.

Raj Thackeray ಏಕರೂಪ ನಾಗರಿಕ ಸಂಹಿತೆ ಜಾರಿಗೆ ತನ್ನಿ, ಔರಂಗಾಬಾದ್ ಹೆಸರನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಿ: ರಾಜ್ ಠಾಕ್ರೆ ಒತ್ತಾಯ
ರಾಜ್ ಠಾಕ್ರೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 22, 2022 | 2:43 PM

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನಾ (Maharashtra Navnirmal Sena) ಮುಖ್ಯಸ್ಥ ರಾಜ್ ಠಾಕ್ರೆ (Raj Thackeray) ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಏಕರೂಪ ನಾಗರಿಕ ಸಂಹಿತೆ ತರಬೇಕು ಮತ್ತು ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ತರಬೇಕು ಎಂದು ಒತ್ತಾಯಿಸಿದರು. ಎಂಎನ್‌ಎಸ್ ಮುಖ್ಯಸ್ಥರು ಏಕರೂಪ ನಾಗರಿಕ ಸಂಹಿತೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದು ಇದೇ ಮೊದಲಲ್ಲ. ಮಸೀದಿಗಳಲ್ಲಿ ಅಕ್ರಮವಾಗಿ ಇರಿಸಲಾಗಿರುವ ಧ್ವನಿವರ್ಧಕತೆಗೆದು ಹಾಕದಿದ್ದರೆ ಹನುಮಾನ್ ಚಾಲೀಸಾ ನುಡಿಸುವುದಾಗಿ ಬೆದರಿಕೆ ಹಾಕಿರುವ ಹೊತ್ತಲ್ಲೇ ಠಾಕ್ರೆ ಮೋದಿಗೆ ಮನವಿ ಮಾಡಿದ್ದಾರೆ. ಔರಂಗಾಬಾದ್ (Aurangabad) ಅನ್ನು ಮರಾಠ ದೊರೆ ಸಂಭಾಜಿ ಹೆಸರಲ್ಲಿ ಸಂಭಾಜಿನಗರ ಎಂದು ಮರುನಾಮಕರಣ ಮಾಡಬೇಕು ಎಂದೂ ಅವರು ಒತ್ತಾಯಿಸಿದ್ದಾರೆ .ಠಾಕ್ರೆ ಇತ್ತೀಚೆಗೆ ತಮ್ಮ ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ ನಂತರ ನಡೆದ ಪುಣೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದು, ಧ್ವನಿವರ್ಧಕದ ಪ್ರತಿಭಟನೆಯನ್ನು ಇಷ್ಟಪಡದವರು ಬಲೆ ಬೀಸಿದ್ದಾರೆ. ನನ್ನ ಎಂಎನ್‌ಎಸ್ ಕಾರ್ಯಕರ್ತರು ಜೈಲಿಗೆ ಹೋಗುವುದು ನನಗೆ ಇಷ್ಟವಿಲ್ಲದ ಕಾರಣ ನಾನು ಈ ಬಲೆಗೆ ಬೀಳಲಿಲ್ಲ ಎಂದು ಹೇಳಿದ್ದಾರೆ. ಧ್ವನಿವರ್ಧಕದ ಗದ್ದಲದ ನಡುವೆ ರಾಜ್ ಠಾಕ್ರೆ ಅವರ ಅಯೋಧ್ಯೆ ಭೇಟಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರು ಅಯೋಧ್ಯೆಗೆ ಬರುವ ಮೊದಲು ಉತ್ತರ ಭಾರತೀಯರ ವಿರುದ್ಧ ತಮ್ಮ ಹಿಂದಿನ ಹೇಳಿಕೆಗಳಿಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಠಾಕ್ರೆ ಕೆಲವು ಜನರು 14-15 ವರ್ಷಗಳ ನಂತರ ನಾನು ಕ್ಷಮೆ ಕೇಳಬೇಕೆಂದು ಯಾಕೆ ಬಯಸುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಹನುಮಾನ್ ಚಾಲೀಸಾ ವಿವಾದದ ಕುರಿತು ಮಾತನಾಡಿದ ರಾಜ್ ಠಾಕ್ರೆ, ಮಹಾರಾಷ್ಟ್ರ ಸರ್ಕಾರವು ಮಸೀದಿಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲು ವಿಫಲವಾದರೆ ಹನುಮಾನ್ ಚಾಲೀಸಾವನ್ನು ನುಡಿಸಲು ತನ್ನ ಪಕ್ಷದವರಿಗೆ ಕೇಳಿದ್ದೇನೆ ಎಂದು ಹೇಳಿದರು. “ಆದರೆ ರಾಣಾ ದಂಪತಿಗಳು ಮಾತೋಶ್ರೀಗೆ ಹೋಗಿ ಹನುಮಾನ್ ಚಾಲೀಸಾವನ್ನು ಪಠಿಸಲು ಬಯಸಿದ್ದರು. ಯಾಕೆ? ಮಾತೋಶ್ರೀ ಏನು ಮಸೀದಿಯೇ? ಇದೆಲ್ಲದರ ನಡುವೆ ಅದೇ ದಂಪತಿ ಶಿವಸೇನಾದ ಸಂಜಯ್ ರಾವುತ್ ಅವರೊಂದಿಗೆ ಒಟ್ಟಿಗೆ ಊಟ ಮಾಡುತ್ತಿರುವುದು ಕಂಡುಬಂದಿದೆ” ಎಂದಿದ್ದಾರೆ.

ಇದನ್ನೂ ಓದಿ
Image
ಬೆದರಿಕೆ ಮತ್ತು ಪ್ರತಿಭಟನೆಗಳ ಹಿನ್ನಲೆಯಲ್ಲಿ ಅಯೋಧ್ಯೆ ಭೇಟಿ ಕೈಬಿಟ್ಟ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ
Image
ನಕಲಿ ಭಾವನೆಗಳಿರುವವರನ್ನು ಭಗವಾನ್ ರಾಮ ಆಶೀರ್ವದಿಸುವುದಿಲ್ಲ: ರಾಜ್​​ ಠಾಕ್ರೆಯ ಅಯೋಧ್ಯೆ ಭೇಟಿ ಬಗ್ಗೆ ಶಿವಸೇನಾ ಟೀಕೆ
Image
ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಬಾಳ್ ಠಾಕ್ರೆ ಹೇಳುತ್ತಿರುವ ವಿಡಿಯೊ ಹಂಚಿಕೊಂಡ ರಾಜ್ ಠಾಕ್ರೆ
Image
ಮುಂದುವರಿಯಲಿದೆ ಮಸೀದಿಗಳ ಎದುರು ಹನುಮಾನ್ ಚಾಲೀಸಾ ಅಭಿಯಾನ: ರಾಜ್ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ‘ನಮ್ಮ ಹಿಂದುತ್ವ-ಅವರ ಹಿಂದುತ್ವ’ ಟೀಕೆಗೆ ಪ್ರತಿಕ್ರಿಯಿಸಿದ ರಾಜ್ ಠಾಕ್ರೆ ” ನಿಜವಾದ ಹಿಂದುತ್ವ, ನಕಲಿ ಹಿಂದುತ್ವ ಅಂದರೇನು? ನಾವು ವಾಷಿಂಗ್ ಪೌಡರ್ ಮಾರುತ್ತಿದ್ದೇವೆಯೇ? ಎಂದು ಕೇಳಿದ್ದಾರೆ.

ಜೂನ್ 1 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು ಚೇತರಿಸಿಕೊಳ್ಳಲು ಒಂದೂವರೆ ತಿಂಗಳು ಬೇಕಾಗುತ್ತದೆ ಎಂದು ರಾಜ್ ಠಾಕ್ರೆ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ. ಭಾನುವಾರದಂದು ರಾಜ್ ಠಾಕ್ರೆ ಅವರ ರ್ಯಾಲಿಗೆ ಮುಂಚಿತವಾಗಿ, ಪುಣೆ ಪೊಲೀಸರು ಯಾವುದೇ ಭಾಷಣಕಾರರು ಯಾವುದೇ ಪ್ರಚೋದಕ ಭಾಷಣ ಮಾಡಬಾರದು ಎಂದು ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:41 pm, Sun, 22 May 22

ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ