Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ

ಲಾಕ್​ಡೌನ್​ ಜಂಜಾಟದ ನಡುವೆಯೂ ಬ್ರಿಟನ್​ ಪ್ರಧಾನ ಮಂತ್ರಿ ಬೋರಿಸ್​ ಜಾನ್ಸನ್​ ಭಾರತಕ್ಕೆ ಆಗಮಿಸುವುದು ಖಚಿತವಾಗಿರುವ ಕಾರಣ. ಲಸಿಕೆಗೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳೂ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ
ಬೋರಿಸ್ ಜಾನ್ಸನ್​ ಮತ್ತು ನರೇಂದ್ರ ಮೋದಿ (ಪ್ರಾತಿನಿಧಿಕ ಚಿತ್ರ)
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 05, 2021 | 4:56 PM

ರೂಪಾಂತರಗೊಂಡ ಕೊರೊನಾ ವೈರಾಣುವನ್ನು ತಡೆಗಟ್ಟುವ ಸಲುವಾಗಿ ಬ್ರಿಟನ್​ನಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಲಾಗಿದೆ. ಆದರೆ, ಲಾಕ್​ಡೌನ್​ ನಡುವೆಯೂ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ಭಾರತದ ಗಣರಾಜ್ಯೋತ್ಸವ ಸಮಾರಂಭಕ್ಕೆ ಭೇಟಿ ನೀಡುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಬ್ರಿಟನ್​ ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಸದ್ಯ ಬ್ರಿಟನ್​ನಲ್ಲಿ 27 ಲಕ್ಷಕ್ಕೂ ಅಧಿಕ ಕೊವಿಡ್​ ಪ್ರಕರಣಗಳು ದಾಖಲಾಗಿದ್ದು, ಸಾವಿನ ಪ್ರಮಾಣವೂ ಗಣನೀಯವಾಗಿ ಏರಿಕೆ ಕಂಡಿದೆ. ಈಗಾಗಲೇ 75 ಸಾವಿರಕ್ಕೂ ಅಧಿಕ ಮಂದಿ ಕೊರೊನಾದಿಂದ ಜೀವತೆತ್ತಿರುವ ಕಾರಣ ಬ್ರಿಟನ್​ ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದೆ.

ಈ ನಡುವೆ ಬ್ರಿಟನ್​ನಲ್ಲಿ ಫೈಜರ್ ಸಂಸ್ಥೆ ಹಾಗೂ ಆಕ್ಸ್​ಫರ್ಡ್​ ಮತ್ತು ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಲಸಿಕೆಗಳ ವಿತರಣೆಯೂ ಆರಂಭವಾಗಿದೆ. ಬ್ರಿಟನ್​ನ ಆಕ್ಸ್​ಫರ್ಡ್​ ಮತ್ತು ಆಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿಪಡಿಸಿದ ಲಸಿಕೆ ಭಾರತದ ಸೆರಮ್​ ಸಂಸ್ಥೆಯಲ್ಲಿ ಉತ್ಪಾದನೆಯಾಗುತ್ತಿರುವ ಕಾರಣ ಬ್ರಿಟನ್​ ಮತ್ತು ಭಾರತದ ಸಂಬಂಧವೂ ವೃದ್ಧಿಯಾಗುತ್ತಿದೆ ಎಂದು ಬೋರಿಸ್​ ಜಾನ್ಸನ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು.

ಲಾಕ್​ಡೌನ್​ ಜಂಜಾಟದ ನಡುವೆಯೂ ಬೋರಿಸ್​ ಜಾನ್ಸನ್​ ಭಾರತಕ್ಕೆ ಆಗಮಿಸುವುದು ಖಚಿತವಾಗಿರುವ ಕಾರಣ. ಲಸಿಕೆಗೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳೂ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ