AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ

ಲಾಕ್​ಡೌನ್​ ಜಂಜಾಟದ ನಡುವೆಯೂ ಬ್ರಿಟನ್​ ಪ್ರಧಾನ ಮಂತ್ರಿ ಬೋರಿಸ್​ ಜಾನ್ಸನ್​ ಭಾರತಕ್ಕೆ ಆಗಮಿಸುವುದು ಖಚಿತವಾಗಿರುವ ಕಾರಣ. ಲಸಿಕೆಗೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳೂ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ
ಬೋರಿಸ್ ಜಾನ್ಸನ್​ ಮತ್ತು ನರೇಂದ್ರ ಮೋದಿ (ಪ್ರಾತಿನಿಧಿಕ ಚಿತ್ರ)
Skanda
| Edited By: |

Updated on: Jan 05, 2021 | 4:56 PM

Share

ರೂಪಾಂತರಗೊಂಡ ಕೊರೊನಾ ವೈರಾಣುವನ್ನು ತಡೆಗಟ್ಟುವ ಸಲುವಾಗಿ ಬ್ರಿಟನ್​ನಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಲಾಗಿದೆ. ಆದರೆ, ಲಾಕ್​ಡೌನ್​ ನಡುವೆಯೂ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ಭಾರತದ ಗಣರಾಜ್ಯೋತ್ಸವ ಸಮಾರಂಭಕ್ಕೆ ಭೇಟಿ ನೀಡುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಬ್ರಿಟನ್​ ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಸದ್ಯ ಬ್ರಿಟನ್​ನಲ್ಲಿ 27 ಲಕ್ಷಕ್ಕೂ ಅಧಿಕ ಕೊವಿಡ್​ ಪ್ರಕರಣಗಳು ದಾಖಲಾಗಿದ್ದು, ಸಾವಿನ ಪ್ರಮಾಣವೂ ಗಣನೀಯವಾಗಿ ಏರಿಕೆ ಕಂಡಿದೆ. ಈಗಾಗಲೇ 75 ಸಾವಿರಕ್ಕೂ ಅಧಿಕ ಮಂದಿ ಕೊರೊನಾದಿಂದ ಜೀವತೆತ್ತಿರುವ ಕಾರಣ ಬ್ರಿಟನ್​ ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದೆ.

ಈ ನಡುವೆ ಬ್ರಿಟನ್​ನಲ್ಲಿ ಫೈಜರ್ ಸಂಸ್ಥೆ ಹಾಗೂ ಆಕ್ಸ್​ಫರ್ಡ್​ ಮತ್ತು ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಲಸಿಕೆಗಳ ವಿತರಣೆಯೂ ಆರಂಭವಾಗಿದೆ. ಬ್ರಿಟನ್​ನ ಆಕ್ಸ್​ಫರ್ಡ್​ ಮತ್ತು ಆಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿಪಡಿಸಿದ ಲಸಿಕೆ ಭಾರತದ ಸೆರಮ್​ ಸಂಸ್ಥೆಯಲ್ಲಿ ಉತ್ಪಾದನೆಯಾಗುತ್ತಿರುವ ಕಾರಣ ಬ್ರಿಟನ್​ ಮತ್ತು ಭಾರತದ ಸಂಬಂಧವೂ ವೃದ್ಧಿಯಾಗುತ್ತಿದೆ ಎಂದು ಬೋರಿಸ್​ ಜಾನ್ಸನ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು.

ಲಾಕ್​ಡೌನ್​ ಜಂಜಾಟದ ನಡುವೆಯೂ ಬೋರಿಸ್​ ಜಾನ್ಸನ್​ ಭಾರತಕ್ಕೆ ಆಗಮಿಸುವುದು ಖಚಿತವಾಗಿರುವ ಕಾರಣ. ಲಸಿಕೆಗೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳೂ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ