AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ

ಲಾಕ್​ಡೌನ್​ ಜಂಜಾಟದ ನಡುವೆಯೂ ಬ್ರಿಟನ್​ ಪ್ರಧಾನ ಮಂತ್ರಿ ಬೋರಿಸ್​ ಜಾನ್ಸನ್​ ಭಾರತಕ್ಕೆ ಆಗಮಿಸುವುದು ಖಚಿತವಾಗಿರುವ ಕಾರಣ. ಲಸಿಕೆಗೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳೂ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ
ಬೋರಿಸ್ ಜಾನ್ಸನ್​ ಮತ್ತು ನರೇಂದ್ರ ಮೋದಿ (ಪ್ರಾತಿನಿಧಿಕ ಚಿತ್ರ)
Skanda
| Edited By: |

Updated on: Jan 05, 2021 | 4:56 PM

Share

ರೂಪಾಂತರಗೊಂಡ ಕೊರೊನಾ ವೈರಾಣುವನ್ನು ತಡೆಗಟ್ಟುವ ಸಲುವಾಗಿ ಬ್ರಿಟನ್​ನಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಲಾಗಿದೆ. ಆದರೆ, ಲಾಕ್​ಡೌನ್​ ನಡುವೆಯೂ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ಭಾರತದ ಗಣರಾಜ್ಯೋತ್ಸವ ಸಮಾರಂಭಕ್ಕೆ ಭೇಟಿ ನೀಡುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಬ್ರಿಟನ್​ ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಸದ್ಯ ಬ್ರಿಟನ್​ನಲ್ಲಿ 27 ಲಕ್ಷಕ್ಕೂ ಅಧಿಕ ಕೊವಿಡ್​ ಪ್ರಕರಣಗಳು ದಾಖಲಾಗಿದ್ದು, ಸಾವಿನ ಪ್ರಮಾಣವೂ ಗಣನೀಯವಾಗಿ ಏರಿಕೆ ಕಂಡಿದೆ. ಈಗಾಗಲೇ 75 ಸಾವಿರಕ್ಕೂ ಅಧಿಕ ಮಂದಿ ಕೊರೊನಾದಿಂದ ಜೀವತೆತ್ತಿರುವ ಕಾರಣ ಬ್ರಿಟನ್​ ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದೆ.

ಈ ನಡುವೆ ಬ್ರಿಟನ್​ನಲ್ಲಿ ಫೈಜರ್ ಸಂಸ್ಥೆ ಹಾಗೂ ಆಕ್ಸ್​ಫರ್ಡ್​ ಮತ್ತು ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಲಸಿಕೆಗಳ ವಿತರಣೆಯೂ ಆರಂಭವಾಗಿದೆ. ಬ್ರಿಟನ್​ನ ಆಕ್ಸ್​ಫರ್ಡ್​ ಮತ್ತು ಆಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿಪಡಿಸಿದ ಲಸಿಕೆ ಭಾರತದ ಸೆರಮ್​ ಸಂಸ್ಥೆಯಲ್ಲಿ ಉತ್ಪಾದನೆಯಾಗುತ್ತಿರುವ ಕಾರಣ ಬ್ರಿಟನ್​ ಮತ್ತು ಭಾರತದ ಸಂಬಂಧವೂ ವೃದ್ಧಿಯಾಗುತ್ತಿದೆ ಎಂದು ಬೋರಿಸ್​ ಜಾನ್ಸನ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು.

ಲಾಕ್​ಡೌನ್​ ಜಂಜಾಟದ ನಡುವೆಯೂ ಬೋರಿಸ್​ ಜಾನ್ಸನ್​ ಭಾರತಕ್ಕೆ ಆಗಮಿಸುವುದು ಖಚಿತವಾಗಿರುವ ಕಾರಣ. ಲಸಿಕೆಗೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳೂ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!