AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SpiceJet ಸ್ಪೈಸ್ ಜೆಟ್ ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಬ್ರಿಟಿಷ್ ಏರ್‌ವೇಸ್ ಟ್ರೈನಿ ಬಂಧನ

SG 8938 (ದೆಹಲಿ-ಪುಣೆ) ವಿಮಾನದಲ್ಲಿ ಕಾರ್ಯನಿರ್ವಹಿಸಲು ನಿಗದಿಯಾಗಿದ್ದ ವಿಮಾನದಲ್ಲಿ ಬಾಂಬ್ ಇರುವ ಕುರಿತು ಸ್ಪೈಸ್‌ಜೆಟ್ ಕಾಯ್ದಿರಿಸುವಿಕೆ ಕಚೇರಿಗೆ ಗುರುವಾರ ಕರೆ ಬಂದಿತ್ತು. ಆ ಸಮಯದಲ್ಲಿ, ವಿಮಾನಕ್ಕಾಗಿ ಪ್ರಯಾಣಿಕರ ಬೋರ್ಡಿಂಗ್ ಪ್ರಾರಂಭವಾಗಿರಲಿಲ್ಲ.

SpiceJet ಸ್ಪೈಸ್ ಜೆಟ್ ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಬ್ರಿಟಿಷ್ ಏರ್‌ವೇಸ್ ಟ್ರೈನಿ ಬಂಧನ
TV9 Web
| Edited By: |

Updated on:Jan 13, 2023 | 7:02 PM

Share

ಸ್ಪೈಸ್‌ಜೆಟ್ (SpiceJet) ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದಕ್ಕಾಗಿ ಬ್ರಿಟಿಷ್ ಏರ್‌ವೇಸ್‌ನ (British Airways) ಟ್ರೈನಿ ಟಿಕೆಟಿಂಗ್ ಏಜೆಂಟ್ ಅನ್ನು ಶುಕ್ರವಾರ ಬಂಧಿಸಲಾಗಿದೆ. SG 8938 (ದೆಹಲಿ-ಪುಣೆ) ವಿಮಾನದಲ್ಲಿ ಕಾರ್ಯನಿರ್ವಹಿಸಲು ನಿಗದಿಯಾಗಿದ್ದ ವಿಮಾನದಲ್ಲಿ ಬಾಂಬ್ ಇರುವ ಕುರಿತು ಸ್ಪೈಸ್‌ಜೆಟ್ ಕಾಯ್ದಿರಿಸುವಿಕೆ ಕಚೇರಿಗೆ ಗುರುವಾರ ಕರೆ ಬಂದಿತ್ತು. ಆ ಸಮಯದಲ್ಲಿ, ವಿಮಾನಕ್ಕಾಗಿ ಪ್ರಯಾಣಿಕರ ಬೋರ್ಡಿಂಗ್ ಪ್ರಾರಂಭವಾಗಿರಲಿಲ್ಲ ಎಂದು ವಿಮಾನಯಾನ ವಕ್ತಾರರು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕರೆಯನ್ನು ಅನುಸರಿಸಿ, ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಸ್ಥಳಾಂತರಿಸಲಾಗಿದ್ದು ಭದ್ರತಾ ಅಧಿಕಾರಿಗಳು ಸಂಪೂರ್ಣವಾಗಿ ಪರಿಶೀಲಿಸಿದರು. “ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ನಂತರ ಕರೆಯನ್ನು ಸುಳ್ಳು ಎಂದು ಘೋಷಿಸಲಾಯಿತು” ಎಂದು ವಕ್ತಾರರು ತಿಳಿಸಿದ್ದಾರೆ.

ನಿನ್ನೆ ಕರೆ ಸ್ವೀಕರಿಸಿದ ನಂತರ, ವಿಮಾನಯಾನ ಸಂಸ್ಥೆಗಳು ನಿರ್ಗಮನವನ್ನು ಸ್ಥಗಿತಗೊಳಿಸಿ ಸಂಪೂರ್ಣ ಹುಡುಕಾಟ ನಡೆಸಿದ್ದವು.ಆದರೆ ಅಧಿಕಾರಿಗಳು ವಿಮಾನದಲ್ಲಿ ಯಾವುದೇ ಅನುಮಾನಾಸ್ಪದವಾಗಿ ಕಂಡುಬಂದಿಲ್ಲ. “ಭದ್ರತಾ ಅಧಿಕಾರಿಗಳು ಅದನ್ನು ಕೂಲಂಕಷವಾಗಿ ಪರಿಶೀಲಿಸಿದರು ಮತ್ತು ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ನಂತರ ಕರೆಯನ್ನು ಹುಸಿ ಬಾಂಬ್ ಕರೆ ಎಂದು ಘೋಷಿಸಲಾಯಿತು” ಎಂದು ಸ್ಪೈಸ್ ಜೆಟ್ ವಕ್ತಾರರು ತಿಳಿಸಿದ್ದಾರೆ.

ಕರೆ ಮಾಡಿದವರ ಪತ್ತೆಗೆ ದೆಹಲಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಬ್ರಿಟಿಷ್ ಏರ್‌ವೇಸ್ ಟಿಕೆಟಿಂಗ್ ಕೌಂಟರ್‌ನಲ್ಲಿ ತರಬೇತಿ ಪಡೆಯುತ್ತಿರುವ 24 ವರ್ಷದ ಅಭಿನವ್ ಪ್ರಕಾಶ್ ಈ ಕರೆ ಮಾಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್

ಪುಣೆಗೆ ವಿಮಾನ ಪ್ರಯಾಣ ಬೆಳೆಸುತ್ತಿದ್ದ ತನ್ನ ಸ್ನೇಹಿತ ಆತನ ಗೆಳತಿಯೊಂದಿಗೆ ಸ್ವಲ್ಪ ಸಮಯ ಕಳೆಯಲು ತಾನು ಕರೆ ಮಾಡಿದ್ದೇನೆ ಎಂದು ಪ್ರಕಾಶ್ ಬಹಿರಂಗಪಡಿಸಿದ್ದಾರೆ.

ದೆಹಲಿ-ಪುಣೆ ಸ್ಪೈಸ್ ಜೆಟ್ ನಿನ್ನೆ ಸಂಜೆ 6.30ಕ್ಕೆ ಐಜಿಐ ವಿಮಾನ ನಿಲ್ದಾಣದಿಂದ ಹೊರಡಬೇಕಿತ್ತು. ಟೇಕಾಫ್ ಆಗುವ ಕೆಲವೇ ನಿಮಿಷಗಳ ಮೊದಲು, ಸ್ಪೈಸ್ ಜೆಟ್ ರಿಸರ್ವೇಶನ್ ಕಚೇರಿಗೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Fri, 13 January 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ