AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SpiceJet ಸ್ಪೈಸ್ ಜೆಟ್ ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಬ್ರಿಟಿಷ್ ಏರ್‌ವೇಸ್ ಟ್ರೈನಿ ಬಂಧನ

SG 8938 (ದೆಹಲಿ-ಪುಣೆ) ವಿಮಾನದಲ್ಲಿ ಕಾರ್ಯನಿರ್ವಹಿಸಲು ನಿಗದಿಯಾಗಿದ್ದ ವಿಮಾನದಲ್ಲಿ ಬಾಂಬ್ ಇರುವ ಕುರಿತು ಸ್ಪೈಸ್‌ಜೆಟ್ ಕಾಯ್ದಿರಿಸುವಿಕೆ ಕಚೇರಿಗೆ ಗುರುವಾರ ಕರೆ ಬಂದಿತ್ತು. ಆ ಸಮಯದಲ್ಲಿ, ವಿಮಾನಕ್ಕಾಗಿ ಪ್ರಯಾಣಿಕರ ಬೋರ್ಡಿಂಗ್ ಪ್ರಾರಂಭವಾಗಿರಲಿಲ್ಲ.

SpiceJet ಸ್ಪೈಸ್ ಜೆಟ್ ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಬ್ರಿಟಿಷ್ ಏರ್‌ವೇಸ್ ಟ್ರೈನಿ ಬಂಧನ
TV9 Web
| Edited By: |

Updated on:Jan 13, 2023 | 7:02 PM

Share

ಸ್ಪೈಸ್‌ಜೆಟ್ (SpiceJet) ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದಕ್ಕಾಗಿ ಬ್ರಿಟಿಷ್ ಏರ್‌ವೇಸ್‌ನ (British Airways) ಟ್ರೈನಿ ಟಿಕೆಟಿಂಗ್ ಏಜೆಂಟ್ ಅನ್ನು ಶುಕ್ರವಾರ ಬಂಧಿಸಲಾಗಿದೆ. SG 8938 (ದೆಹಲಿ-ಪುಣೆ) ವಿಮಾನದಲ್ಲಿ ಕಾರ್ಯನಿರ್ವಹಿಸಲು ನಿಗದಿಯಾಗಿದ್ದ ವಿಮಾನದಲ್ಲಿ ಬಾಂಬ್ ಇರುವ ಕುರಿತು ಸ್ಪೈಸ್‌ಜೆಟ್ ಕಾಯ್ದಿರಿಸುವಿಕೆ ಕಚೇರಿಗೆ ಗುರುವಾರ ಕರೆ ಬಂದಿತ್ತು. ಆ ಸಮಯದಲ್ಲಿ, ವಿಮಾನಕ್ಕಾಗಿ ಪ್ರಯಾಣಿಕರ ಬೋರ್ಡಿಂಗ್ ಪ್ರಾರಂಭವಾಗಿರಲಿಲ್ಲ ಎಂದು ವಿಮಾನಯಾನ ವಕ್ತಾರರು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕರೆಯನ್ನು ಅನುಸರಿಸಿ, ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಸ್ಥಳಾಂತರಿಸಲಾಗಿದ್ದು ಭದ್ರತಾ ಅಧಿಕಾರಿಗಳು ಸಂಪೂರ್ಣವಾಗಿ ಪರಿಶೀಲಿಸಿದರು. “ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ನಂತರ ಕರೆಯನ್ನು ಸುಳ್ಳು ಎಂದು ಘೋಷಿಸಲಾಯಿತು” ಎಂದು ವಕ್ತಾರರು ತಿಳಿಸಿದ್ದಾರೆ.

ನಿನ್ನೆ ಕರೆ ಸ್ವೀಕರಿಸಿದ ನಂತರ, ವಿಮಾನಯಾನ ಸಂಸ್ಥೆಗಳು ನಿರ್ಗಮನವನ್ನು ಸ್ಥಗಿತಗೊಳಿಸಿ ಸಂಪೂರ್ಣ ಹುಡುಕಾಟ ನಡೆಸಿದ್ದವು.ಆದರೆ ಅಧಿಕಾರಿಗಳು ವಿಮಾನದಲ್ಲಿ ಯಾವುದೇ ಅನುಮಾನಾಸ್ಪದವಾಗಿ ಕಂಡುಬಂದಿಲ್ಲ. “ಭದ್ರತಾ ಅಧಿಕಾರಿಗಳು ಅದನ್ನು ಕೂಲಂಕಷವಾಗಿ ಪರಿಶೀಲಿಸಿದರು ಮತ್ತು ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ನಂತರ ಕರೆಯನ್ನು ಹುಸಿ ಬಾಂಬ್ ಕರೆ ಎಂದು ಘೋಷಿಸಲಾಯಿತು” ಎಂದು ಸ್ಪೈಸ್ ಜೆಟ್ ವಕ್ತಾರರು ತಿಳಿಸಿದ್ದಾರೆ.

ಕರೆ ಮಾಡಿದವರ ಪತ್ತೆಗೆ ದೆಹಲಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಬ್ರಿಟಿಷ್ ಏರ್‌ವೇಸ್ ಟಿಕೆಟಿಂಗ್ ಕೌಂಟರ್‌ನಲ್ಲಿ ತರಬೇತಿ ಪಡೆಯುತ್ತಿರುವ 24 ವರ್ಷದ ಅಭಿನವ್ ಪ್ರಕಾಶ್ ಈ ಕರೆ ಮಾಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್

ಪುಣೆಗೆ ವಿಮಾನ ಪ್ರಯಾಣ ಬೆಳೆಸುತ್ತಿದ್ದ ತನ್ನ ಸ್ನೇಹಿತ ಆತನ ಗೆಳತಿಯೊಂದಿಗೆ ಸ್ವಲ್ಪ ಸಮಯ ಕಳೆಯಲು ತಾನು ಕರೆ ಮಾಡಿದ್ದೇನೆ ಎಂದು ಪ್ರಕಾಶ್ ಬಹಿರಂಗಪಡಿಸಿದ್ದಾರೆ.

ದೆಹಲಿ-ಪುಣೆ ಸ್ಪೈಸ್ ಜೆಟ್ ನಿನ್ನೆ ಸಂಜೆ 6.30ಕ್ಕೆ ಐಜಿಐ ವಿಮಾನ ನಿಲ್ದಾಣದಿಂದ ಹೊರಡಬೇಕಿತ್ತು. ಟೇಕಾಫ್ ಆಗುವ ಕೆಲವೇ ನಿಮಿಷಗಳ ಮೊದಲು, ಸ್ಪೈಸ್ ಜೆಟ್ ರಿಸರ್ವೇಶನ್ ಕಚೇರಿಗೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Fri, 13 January 23

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ