AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್​ಸ್ಟರ್ ತಿಲ್ಲು ತಾಜ್​ಪುರಿಯಾ ಆಪ್ತನ ಸಹೋದರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ತಿಹಾರ್‌ ಜೈಲಿನಲ್ಲಿ ನಡೆದ ಗ್ಯಾಂಗ್‌ ವಾರ್‌ನಲ್ಲಿ ಹತ್ಯೆಗೀಡಾದ ಗ್ಯಾಂಗ್‌ಸ್ಟರ್‌ ತಿಲ್ಲು ತಾಜ್‌ಪುರಿಯಾ(Tillu Tajpuriya)  ಆಪ್ತ ಅಮಿತ್‌ ಅಲಿಯಾಸ್‌ ದಬಾಂಗ್‌ನ ಸಹೋದರ ಮೋಹಿತ್‌ ಅಲಿಯಾಸ್‌ ಬಂಟಿ ತಾಜ್‌ಪುರ ಕಲಾನ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ಯಾಂಗ್​ಸ್ಟರ್ ತಿಲ್ಲು ತಾಜ್​ಪುರಿಯಾ ಆಪ್ತನ ಸಹೋದರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಪಿಸ್ತೂಲು, ಸಾಂದರ್ಭಿಕ ಚಿತ್ರImage Credit source: Yahoo
ನಯನಾ ರಾಜೀವ್
|

Updated on: May 12, 2023 | 12:46 PM

Share

ತಿಹಾರ್‌ ಜೈಲಿನಲ್ಲಿ ನಡೆದ ಗ್ಯಾಂಗ್‌ ವಾರ್‌ನಲ್ಲಿ ಹತ್ಯೆಗೀಡಾದ ಗ್ಯಾಂಗ್‌ಸ್ಟರ್‌ ತಿಲ್ಲು ತಾಜ್‌ಪುರಿಯಾ(Tillu Tajpuriya)  ಆಪ್ತ ಅಮಿತ್‌ ಅಲಿಯಾಸ್‌ ದಬಾಂಗ್‌ನ ಸಹೋದರ ಮೋಹಿತ್‌ ಅಲಿಯಾಸ್‌ ಬಂಟಿ ತಾಜ್‌ಪುರ ಕಲಾನ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಿಲ್ಲು ತಾಜ್​ಪುರಿಯಾ ಹತ್ಯೆ ನಂತರ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಅಮಿತ್ ದಬಾಂಗ್ ತಿಲ್ಲು ಗ್ಯಾಂಗ್​ನ ಸದಸ್ಯನಾಗಿದ್ದು, ಆತನನ್ನು ಹುಡುಕಿಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು.

ಮೃತ ಮೋಹಿತ್ ಶವದ ಬಳಿ ಯಾವುದೇ ಡೆತ್​ ನೋಟ್ ಪತ್ತೆಯಾಗಿಲ್ಲ, ಸ್ಥಳದಲ್ಲಿ 9 ಎಂಎಂ ಪಿಸ್ತೂಲ್, ಖಾಲಿ ಕಾರ್ಟ್ರಿಡ್ಜ್​ ಹಾಗೂ ಸಜೀವ ಕಾರ್ಟ್ರಿಡ್ಜ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ತಿಹಾರ್ ಜೈಲಿನಲ್ಲಿ ತಿಲ್ಲು ತಾಜ್‌ಪುರಿಯ ಹತ್ಯೆ ನಡೆದಿತ್ತು, ಆ ನಂತರ ದೆಹಲಿಯಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆ ಇದೆ ಎನ್ನಲಾಗಿತ್ತು, ಅಮಿತ್ ಅಲಿಯಾಸ್ ದಬಾಂಗ್ ತಿಲ್ಲು ಜೊತೆ ನಂಟು ಹೊಂದಿದ್ದ, ಅಣ್ಣನ ವಿಚಾರದಲ್ಲಿ ತಿಲ್ಲುವನ್ನು ಕೊಂದವರು ತಮಗೂ ಬೆದರಿಕೆ ಹಾಕಬಹುದು ಎನ್ನುವ ಭಯದಲ್ಲಿದ್ದ, ಇದಲ್ಲದೆ ಕೌಟುಂಬಿಕ ಕಲಹವೂ ಆತ್ಮಹತ್ಯೆಗೆ ಕಾರಣವಾಗಿರಬಹುದು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ತಿಹಾರ್ ಜೈಲಿನಲ್ಲಿ ಗ್ಯಾಂಗ್​​ಸ್ಟರ್ ತಿಲ್ಲು ತಾಜ್​​ಪುರಿಯಾ ಹತ್ಯೆ ಪ್ರಕರಣ: ತಮಿಳುನಾಡಿನ 7 ಪೊಲೀಸರು ಅಮಾನತು

ಬೆಳಗ್ಗೆ 6.15ರ ಸುಮಾರಿಗೆ ಜೈಲಿನ 4 ಕೈದಿಗಳು ತಿಲ್ಲು ತಾಜ್‌ಪುರಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಎಲ್ಲಾ ದಾಳಿಕೋರರು ಗೋಗಿ ಗ್ಯಾಂಗ್‌ನವರು ಎಂದು ಹೇಳಲಾಗುತ್ತಿದೆ, ವಾಸ್ತವವಾಗಿ ರೋಹಿಣಿ ನ್ಯಾಯಾಲಯದಲ್ಲಿ ಜಿತೇಂದ್ರ ಗೋಗಿಯನ್ನು ಕೊಲೆ ಮಾಡಿದ ಆರೋಪವನ್ನು ತಿಲ್ಲು ಎದುರಿಸುತ್ತಿದ್ದ.

ತಿಲ್ಲು ತಾಜ್‌ಪುರಿಯ ವಿರುದ್ಧ ಕೊಲೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿವೆ. ರೋಹಿಣಿ ಕೋರ್ಟ್‌ನ ಕೋರ್ಟ್‌ ಕೊಠಡಿಯಲ್ಲಿ ಗ್ಯಾಂಗ್​ಸ್ಟರ್ ಜಿತೇಂದ್ರ ಗೋಗಿ ಹತ್ಯೆ ಪ್ರಕರಣದಲ್ಲಿ ತಿಲ್ಲು ಕೈವಾಡವಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ